AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದ ನೋವಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಇಲ್ಲಿದೆ ಮನೆ ಮದ್ದು

ದೇಹದ ನೋವಿನ ಕಾರಣಗಳನ್ನು ಗುರುತಿಸುವುದು ಮತ್ತು ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಅವಶ್ಯಕ.

ದೇಹದ ನೋವಿನ ಸಮಸ್ಯೆಗಳನ್ನು  ಬಗೆಹರಿಸಿಕೊಳ್ಳಲು ಇಲ್ಲಿದೆ ಮನೆ ಮದ್ದು
ಪ್ರಾತಿನಿಧಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Sep 17, 2022 | 7:30 AM

Share

ದೇಹದ ನೋವು ಸಾಮಾನ್ಯ ಸಮಸ್ಯೆಯಾಗಿದೆ. ನಾವು ಹಲವು ಬಾರಿ ದೀರ್ಘಕಾಲ ಕುಳಿತಲ್ಲೇ, ಕುಳಿತುಕೊಂಡು ಕೆಲಸ ಮಾಡುವುದರಿಂದ ಬೆನ್ನು ನೋವು ಉದ್ಭವಿಸಬಹುದು. ದೀರ್ಘಕಾಲ ನಿಂತು ಕೆಲಸ ಮಾಡುವುದರಿಂದ ಕಾಲು ನೋವಿಗೆ ಉದ್ಭವಿಸಬಹುದು. ಇದಲ್ಲದೆ, ಕೀಲು ನೋವು, ಹೊಟ್ಟೆ ನೋವು, ಮೂಳೆ ನೋವು ಮತ್ತು ಸ್ನಾಯು ನೋವು ಕೂಡ ಇರುತ್ತದೆ. ಇದರಿಂದ ನಡೆಯಲು ಅಥವಾ ಕುಳಿತುಕೊಳ್ಳಲು ಕಷ್ಟವಾಗುತ್ತದೆ. ಕೆಲವೊಮ್ಮೆ ನೋವು ತುಂಬಾ ತೀವ್ರವಾಗಿ, ಕೆಲಸ ಮಾಡಲು ಸಹ ಕಷ್ಟವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ದೇಹದ ನೋವಿನ ಕಾರಣಗಳನ್ನು ಗುರುತಿಸುವುದು ಮತ್ತು ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಅವಶ್ಯಕ. ಹಾಗಾದರೆ ನೋವನ್ನು ಹೋಗಲಾಡಿಸಲು ಯಾವ ಮನೆಮದ್ದುಗಳನ್ನು ಅನುಸರಿಸಬೇಕು ಎಂಬುದನ್ನು ಈಗ ತಿಳಿಯೋಣ

ದೇಹದ ನೋವಿನಿಂದಾಗುವ ತೊಂದರೆಗಳು

1. ಸಂಧಿವಾತ

2. ಸ್ನಾಯು ದೌರ್ಬಲ್ಯ

3. ದೀರ್ಘಕಾಲದ ಆಯಾಸ

4. ಒತ್ತಡ, ಆತಂಕ, ಖಿನ್ನತೆ

5. ನಿದ್ರಾಹೀನತೆಯ ಸಮಸ್ಯೆ

6. ಆಲಸ್ಯ

7. ವಿಟಮಿನ್ ಡಿ ಕೊರತೆ

8. ನಿರ್ಜಲೀಕರಣ

ದೈಹಿಕ ನೋವನ್ನು ನಿವಾರಿಸಲು ಮನೆಮದ್ದುಗಳು

1. ಆರೋಗ್ಯಕರ ಆಹಾರ

ದೈಹಿಕ ನೋವನ್ನು ನಿವಾರಿಸಲು ನಿಮ್ಮ ಆಹಾರಕ್ರಮದ ಬಗ್ಗೆ ಗಮನ ಕೊಡಿ. ನೀವು ಸೇವಿಸುವ ಆಹಾರದಲ್ಲಿ ಎಲ್ಲಾ ರೀತಿಯ ಖನಿಜಗಳು, ವಿಟಮಿನ್ಗಳು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಪ್ರೋಟೀನ್ಗಳನ್ನು ಒಳಗೊಂಡಿರಬೇಕು. ಇದಕ್ಕಾಗಿ, ನೀವು ಬೀಟ್ರೂಟ್, ಬ್ರೊಕೊಲಿ, ಪಾಲಕ, ಪನೀರ್, ಗ್ರೀನ್ಸ್ ಮತ್ತು ಹಣ್ಣುಗಳನ್ನು ತಿನ್ನಬೇಕು . ಇದರೊಂದಿಗೆ ನಿತ್ಯವೂ ಹಾಲು ಕುಡಿಯುವುದು ಒಳ್ಳೆಯದು.

3. ಹೆಚ್ಚು ನೀರು ಕುಡಿಯಿರಿ

ನೀರಿನ ಕೊರತೆಯಿಂದ ಮೂಳೆ ನೋವು ಉಂಟಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ದೇಹವನ್ನು ಹೈಡ್ರೇಟ್ ಮಾಡಲು ಸಾಕಷ್ಟು ನೀರು ಕುಡಿಯಿರಿ. ಇದರೊಂದಿಗೆ ನೀವು ಜ್ಯೂಸ್​ನ್ನು ಸಹ ಸೇವಿಸಬಹುದು. ತೆಂಗಿನ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ವಾಸ್ತವವಾಗಿ, ತೆಂಗಿನ ನೀರು ಅಥವಾ ಗಂಜಿಯನ್ನು ಸೇವಿಸುವುದರಿಂದ, ದೇಹದಲ್ಲಿರುವ ವಿಷಕಾರಿ ಅಂಶ ಹೊರಹೋಗುತ್ತದೆ. ಇದರಿಂದ ದೇಹ ಕ್ರಿಯಾಶೀಲವಾಗುತ್ತದೆ. ನೀರು ಹೆಚ್ಚಿಗೆ ಕುಡಿಯುವುದರಿಂದ ನೋವಿನ ಸಮಸ್ಯೆ ಕೂಡ ದೂರವಾಗುತ್ತದೆ.

4. ಮನೆಯಲ್ಲಿನ ಮಸಾಲೆ ಪದಾರ್ಥಗಳು

ನೋವನ್ನು ನಿವಾರಣಗೆ ಮಸಾಲೆ ಪದರ್ಥಗಳು ಕೂಡ ಸಹಾಯಕಾರಿ. ನಿಮಗೆ ಸ್ನಾಯು, ಕೀಲು, ತಲೆನೋವು, ಹೊಟ್ಟೆನೋವು ಇದ್ದರೆ ಮಸಾಲೆಗಳಾದ ಶುಂಠಿ, ಬೆಳ್ಳುಳ್ಳಿ, ಅರಿಶಿನ, ದಾಲ್ಚಿನ್ನಿ ಇತ್ಯಾದಿಗಳನ್ನು ಬಳಸಬಹುದು. ಇವು ದೈಹಿಕ ನೋವನ್ನು ಕಡಿಮೆ ಮಾಡಲು ಅವು ಪರಿಣಾಮಕಾರಿ.

ಮತ್ತಷ್ಟು ಆರೋಗ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?