AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ಮತ್ತು ಕರುಳನ್ನು ಪರೀಕ್ಷಿಸಲು ಮಾತ್ರೆಯಂತಹ ವಿಭಿನ್ನ ಸಾಧನವನ್ನು ಕಂಡುಹಿಡಿದ ವಿಜ್ಞಾನಿಗಳು

ಹೊಟ್ಟೆ ಮತ್ತು ಕರುಳನ್ನು ಪರೀಕ್ಷಿಸಲು ಸಾಮಾನ್ಯವಾಗಿ ಎಂಡೋಸ್ಕೋಪಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇದು ರೋಗಿಗೆ ಬಹಳಷ್ಟು ನೋವು ಮತ್ತು ಅಸ್ವಸ್ಥತೆಯನ್ನು ಉಂಟುಮಾಡುತ್ತದೆ. ಆದರೆ ಇದರಿಂದ ಮುಕ್ತಿ ನೀಡಲು ಐಐಟಿ ದೆಹಲಿ ಮತ್ತು ಏಮ್ಸ್‌ನ ವಿಜ್ಞಾನಿಗಳು ಅಕ್ಕಿಯ ಧಾನ್ಯಕ್ಕಿಂತಲೂ ಚಿಕ್ಕದಾದ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ. ಅದು ಕರುಳಿನೊಳಗೆ ಹೋಗಿ ವ್ಯಕ್ತಿಯಿಂದ ಮಾದರಿಗಳನ್ನು ತೆಗೆದುಕೊಂಡು ಮಲದಿಂದ ಹೊರಬರುತ್ತದೆ. ಹಾಗಾಗಿ ಈ ಸಾಧನ ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆಯಾಗಿದೆ. ಆದರೆ ಇದನ್ನು ಹೇಗೆ ಬಳಸುತ್ತಾರೆ, ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬಿತ್ಯಾದಿ ಮಾಹಿತಿಯನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೊಟ್ಟೆ ಮತ್ತು ಕರುಳನ್ನು ಪರೀಕ್ಷಿಸಲು ಮಾತ್ರೆಯಂತಹ ವಿಭಿನ್ನ ಸಾಧನವನ್ನು ಕಂಡುಹಿಡಿದ ವಿಜ್ಞಾನಿಗಳು
ಹೊಟ್ಟೆಯನ್ನು ಪರೀಕ್ಷಿಸುವ ಅಕ್ಕಿಗಿಂತ ಚಿಕ್ಕ ಸಾಧನ
ಪ್ರೀತಿ ಭಟ್​, ಗುಣವಂತೆ
|

Updated on: Dec 17, 2025 | 4:10 PM

Share

ಹೊಟ್ಟೆ ಮತ್ತು ಕರುಳನ್ನು ಪರೀಕ್ಷಿಸಲು ಸಾಮಾನ್ಯವಾಗಿ ಎಂಡೋಸ್ಕೋಪಿ (Endoscopy) ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂಬುದು ತಿಳಿದಂತಹ ವಿಚಾರ. ಆದರೆ ಇದು ರೋಗಿಗೆ ಬಹಳಷ್ಟು ನೋವು ಮತ್ತು ಅಸ್ವಸ್ಥತೆಯನ್ನು ಉಂಟುಮಾಡುತ್ತಿತ್ತು, ಹಾಗಾಗಿ ಪರೀಕ್ಷೆ ಮಾಡಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದರು. ಈಗ ಇಂತಹ ಸಮಸ್ಯೆಗಳಿಗೆ ಐಐಟಿ ದೆಹಲಿ ಮತ್ತು ಏಮ್ಸ್‌ನ ವಿಜ್ಞಾನಿಗಳು ಪರಿಹಾರ ಕಂಡುಕೊಂಡಿದ್ದಾರೆ. ಹೌದು, ಅಕ್ಕಿಯ ಧಾನ್ಯಕ್ಕಿಂತಲೂ ಚಿಕ್ಕದಾದ ಒಂದು ಸಾಧನವನ್ನು (swallowable microdevice) ಅಭಿವೃದ್ಧಿಪಡಿಸಿದ್ದು ಅದು ಕರುಳಿನೊಳಗೆ ಹೋಗಿ ವ್ಯಕ್ತಿಯಿಂದ ಮಾದರಿಗಳನ್ನು ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಈ ರೀತಿಯ ನೂತನ ಆವಿಷ್ಕಾರ ನಿಜಕ್ಕೂ ಮುಖ್ಯವಾಗಿತ್ತು. ಏಕೆಂದರೆ ಇಲ್ಲಿಯವರೆಗೆ, ಎಂಡೋಸ್ಕೋಪಿ ಅಥವಾ ಮಲ ಪರೀಕ್ಷೆಗಳು ರೋಗಿಗೆ ಬಹಳ ನೋವು ಕೊಡುವಂತಹ ವಿಧಾನವಾಗಿದ್ದು ಅಷ್ಟು ಮಾಡಿದರೂ ಕೂಡ ಕರುಳಿನ ಒಳಭಾಗದ ಬಗ್ಗೆ ನಿಖರವಾದ ಮಾಹಿತಿ ಸಿಗುತ್ತಿರಲಿಲ್ಲ. ಹಾಗಾಗಿ ಈ ಸಾಧನ ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆಯಾಗಿದೆ. ಆದರೆ ಇದನ್ನು ಹೇಗೆ ಬಳಸುತ್ತಾರೆ, ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಅಕ್ಕಿ ಗಾತ್ರದ ಚಿಪ್ ಹೇಗೆ ಕಾರ್ಯನಿರ್ವಹಿಸುತ್ತದೆ?

ಐಐಟಿ ದೆಹಲಿಯ ಪ್ರಾಧ್ಯಾಪಕ ಸರ್ವೇಶ್ ಕುಮಾರ್ ಶ್ರೀವಾಸ್ತವ ಅವರ ಪ್ರಕಾರ, ಬಾಹ್ಯಾಕಾಶವನ್ನು ಅರ್ಥಮಾಡಿಕೊಳ್ಳಲು ನಾವು ರೋವರ್‌ಗಳನ್ನು ಕಳುಹಿಸುವಂತೆಯೇ, ದೇಹದೊಳಗಿನ ಒಂದು ಪ್ರಪಂಚವನ್ನು ಅರ್ಥಮಾಡಿಕೊಳ್ಳಲು, ಇಂತಹ ಸಣ್ಣ ಸಾಧನದ ಅಗತ್ಯವಿದೆ. ಈ ಸೂಕ್ಷ್ಮ ಸಾಧನವನ್ನು ನುಂಗಿದಾಗ, ಅದು ಸಣ್ಣ ಕರುಳಿನ ನಿರ್ದಿಷ್ಟ ಭಾಗಗಳಿಂದ ಬ್ಯಾಕ್ಟೀರಿಯಾವನ್ನು ಸ್ವಯಂಚಾಲಿತವಾಗಿ ಸಂಗ್ರಹಿಸುತ್ತದೆ, ಬಳಿಕ ಬ್ಯಾಕ್ಟೀರಿಯಾಗಳನ್ನು ನಿಖರವಾಗಿ ಗುರುತಿಸಲು ಅನುವು ಮಾಡಿಕೊಡುತ್ತದೆ, ಈ ಕ್ಯಾಪ್ಸುಲ್ ಹೊಟ್ಟೆಯಲ್ಲಿ ಮುಚ್ಚಿಕೊಂಡಿದ್ದು ಕರುಳನ್ನು ತಲುಪಿದಾಗ ಮಾತ್ರ ತೆರೆಯುತ್ತದೆ. ಮಾದರಿಯನ್ನು ತೆಗೆದುಕೊಂಡ ನಂತರ, ಅದು ಮತ್ತೆ ಮುಚ್ಚಿ ಮಲದೊಂದಿಗೆ ಹೊರಬರುತ್ತದೆ. ಇದರೊಳಗಿನ ಮಾದರಿ ಸಾಧನದೊಳಗೆ ಸುರಕ್ಷಿತವಾಗಿ ಉಳಿಯುತ್ತದೆ, ಹಾಗಾಗಿ ಅದು ಹೊರಬಂದ ನಂತರ, ಅದನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಬಹುದು. ಈ ಸಾಧನದ ಗಾತ್ರವು ಅಕ್ಕಿಯ ಧಾನ್ಯಕ್ಕಿಂತಲೂ ಚಿಕ್ಕದಾಗಿದೆ. ವಿಜ್ಞಾನಿಗಳು ಇದನ್ನು ಪ್ರಾಣಿಗಳ ಮೇಲೆ ಯಶಸ್ವಿಯಾಗಿ ಪರೀಕ್ಷಿಸಿದ್ದು ಅದಕ್ಕೆ ಪೇಟೆಂಟ್ ಅನ್ನು ಸಹ ಸಲ್ಲಿಸಿದ್ದಾರೆ. ಭವಿಷ್ಯದಲ್ಲಿ, ಅಗತ್ಯ ಅನುಮೋದನೆಗಳನ್ನು ಪಡೆದ ನಂತರ, ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಈ ತಂತ್ರಜ್ಞಾನವನ್ನು ಬಳಕೆ ಮಾಡಬಹುದು.

ಇದನ್ನೂ ಓದಿ: ಸಕ್ಕರೆ ಕಾಯಿಲೆ ಇರುವವರಿಗೆ ಸಿಹಿ ಸುದ್ದಿ! ಗ್ಲೂಕೋಸ್ ಮಟ್ಟವನ್ನು ಪರಿಶೀಲಿಸಲು ಕಡಿಮೆ ಬೆಲೆಗೆ ಹೊಸ ಸಾಧನ

ಈ ಸಂಶೋಧನೆಯು ಅಂತರಾಷ್ಟ್ರೀಯ ಜರ್ನಲ್ ಸ್ಮಾಲ್‌ನಲ್ಲಿ ಪ್ರಕಟವಾಗಿದೆ. ಈ ಅಧ್ಯಯನದಲ್ಲಿ ಅನ್ಶುಲ್ ನೇಮಾ, ದೇಬ್ಜಿತ್ ಧಾರ್, ವೆಂಕಟ್ ಸಾಯಿ ರೆಡ್ಡಿ, ಕುಮಾರಿ ಪ್ರಿಯಮ್, ಸಮಗ್ರ ಅಗರವಾಲ್ ಮತ್ತು ಪ್ರೊ. ಸರ್ವೇಶ್ ಶ್ರೀವಾಸ್ತವ ಸೇರಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು