AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರ, ಶೀತ, ಕಫ ಎಂದು ಮನಬಂದಂತೆ ಆ್ಯಂಟಿಬಯಾಟಿಕ್ ಸೇವಿಸಬೇಡಿ; ಐಎಂಎ ಎಚ್ಚರಿಕೆ

ಜ್ವರ, ಶೀತ, ಕಫ ಮತ್ತಿತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಕೂಡಲೇ, ಅನಿವಾರ್ಯವಲ್ಲದ ಹೊರತು ಆ್ಯಂಟಿ ಬಯಾಟಿಕ್​ಗಳನ್ನು ಸೇವಿಸಬಾರದು. ವೈದ್ಯರು ಕೂಡ ರೋಗಿಗಳಿಗೆ ಆ್ಯಂಟಿಬಯಾಟಿಕ್ಸ್​ ತೆಗೆದುಕೊಳ್ಳುವಂತೆ ಸಲಹೆ ನೀಡಬಾರದು ಎಂದು ಭಾರತೀಯ ವೈದ್ಯಕೀಯ ಸಂಘ ಎಚ್ಚರಿಕೆಯ ಸಂದೇಶ ಬಿಡುಗಡೆ ಮಾಡಿದೆ.

ಜ್ವರ, ಶೀತ, ಕಫ ಎಂದು ಮನಬಂದಂತೆ ಆ್ಯಂಟಿಬಯಾಟಿಕ್ ಸೇವಿಸಬೇಡಿ; ಐಎಂಎ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Mar 03, 2023 | 9:50 PM

Share

ನವದೆಹಲಿ: ಜ್ವರ, ಶೀತ, ಕಫ ಮತ್ತಿತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಕೂಡಲೇ, ಅನಿವಾರ್ಯವಲ್ಲದ ಹೊರತು ಆ್ಯಂಟಿಬಯಾಟಿಕ್​ಗಳನ್ನು ಸೇವಿಸಬಾರದು. ವೈದ್ಯರು ಕೂಡ ರೋಗಿಗಳಿಗೆ ಆ್ಯಂಟಿಬಯಾಟಿಕ್ಸ್ (antibiotics) ತೆಗೆದುಕೊಳ್ಳುವಂತೆ ಸಲಹೆ ನೀಡಬಾರದು ಎಂದು ಭಾರತೀಯ ವೈದ್ಯಕೀಯ ಸಂಘ (IMA) ಎಚ್ಚರಿಕೆಯ ಸಂದೇಶ ಬಿಡುಗಡೆ ಮಾಡಿದೆ. ಅನಿವಾರ್ಯವಲ್ಲದ ಹೊರತು ಆ್ಯಂಟಿಬಯಾಟಿಕ್ಸ್ ಬಳಸದಂತೆ ಸಂಘವು ಸಂದೇಶ ಬಿಡುಗಡೆ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದೆ ಎಂದು ‘ಎಎನ್​ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಕಫ, ವಾಕರಿಕೆ, ವಾಂತಿ, ಗಂಟಲು ಕಿರಿಕಿರಿ, ಜ್ವರ, ಮೈಕೈ ನೋವು, ಭೇದಿ ಪ್ರಕರಣಗಳಲ್ಲಿ ಹಠಾತ್ ಹೆಚ್ಚಳ ಕಂಡುಬಂದಿದೆ. ಸೋಂಕು ಸಾಮಾನ್ಯವಾಗಿ ಐದರಿಂದ ಏಳು ದಿನಗಳವರೆಗೆ ಇರುತ್ತದೆ. ಜ್ವರವು ಮೂರು ದಿನಗಳಲ್ಲಿ ಕಡಿಮೆಯಾಗುತ್ತದೆ. ಆದರೆ, ಕೆಮ್ಮು ಮಾತ್ರ ಮೂರು ವಾರಗಳವರೆಗೆ ಇರುತ್ತದೆ. ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಮಾಹಿತಿ ಪ್ರಕಾರ, ಇದು ಎಚ್​3ಎನ್​2 ಇನ್​ಫ್ಲುಯೆಂಜಾ ವೈರಸ್​ನಿಂದಾಗಿ (H3N2 influenza virus) ಸಂಭವಿಸುತ್ತದೆ ಎಂದು ಸಂದೇಶದಲ್ಲಿ ವೈದ್ಯಕೀಯ ಸಂಘ ತಿಳಿಸಿದೆ.

ಪದೇ ಪದೇ ಶೀತ, ಜ್ವರ ಬರೋದೇಕೆ?

ಇನ್​ಫ್ಲುಯೆಂಜಾ ಹಾಗೂ ಇತರ ವೈರಸ್​ಗಳ ಕಾರಣದಿಂದಾಗಿ ಅಕ್ಟೋಬರ್​​ನಿಂದ ಫೆಬ್ರುವರಿ ನಡುವಣ ಅವಧಿಯಲ್ಲಿ ಕಾಲೋಚಿತವಾಗಿ ಶೀತ, ಕಫ ಮತ್ತಿತರ ಆರೋಗ್ಯ ಸಮಸ್ಯೆಗಳು ಕಾಣುವುದು ಸಹಜ. 50 ವರ್ಷ ಮೇಲ್ಪಟ್ಟ ಹಾಗೂ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜನರಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಸಂದರ್ಭ ಜನರಲ್ಲಿ ಜ್ವರದ ಜತೆಗೆ ಉಸಿರಾಟದ ಸಮಸ್ಯೆಯೂ ಕಂಡುಬರುತ್ತದೆ. ಹೆಚ್ಚಿರುವ ವಾಯುಮಾಲಿನ್ಯ ಕೂಡ ಇದಕ್ಕೆ ಕಾರಣವಾಗುತ್ತದೆ ಎಂದು ವೈದ್ಯಕೀಯ ಸಂಘ ಹೇಳಿದೆ.

ಈ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ನೀಡಬೇಕು. ಆದರೆ ಈಗ ಜನರು ಆ್ಯಂಟಿಬಯಾಟಿಕ್ಸ್​​ಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಡೋಸ್​ ಬಗ್ಗೆ ಕಾಳಜಿ ವಹಿಸದೆ ಬೇಗ ಗುಣವಾಗಬೇಕೆಂದು ಹೆಚ್ಚು ಡೋಸ್​ ತೆಗೆದುಕೊಳ್ಳಲಾಗುತ್ತದೆ. ಇದು ಆ್ಯಂಟಿಬಯಾಟಿಕ್ ಪ್ರತಿರೋಧಕ್ಕೆ ಕಾರಣವಾಗಬಹುದಾದ್ದರಿಂದ ಇದನ್ನು ನಿಲ್ಲಿಸಬೇಕಾಗಿದೆ. ಇಲ್ಲಾವಾದಲ್ಲಿ ಮುಂದೆ ನಿಜವಾಗಿಯೂ ಅಗತ್ಯ ಎದುರಾದಾಗ ಆ್ಯಂಟಿಬಯಾಟಿಕ್​ಗಳು ಕಾರ್ಯನಿರ್ವಹಿಸದೇ ಹೋಗಬಹುದು ಎಂದು ಸಂಘ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Adenovirus in Children: ಪುಟಾಣಿ ಮಕ್ಕಳನ್ನು ಕಾಡುತ್ತಿದೆ ಅಡೆನಾಯ್ಡ್ ವೈರಸ್ ಹಾಗೂ ಬಿ -12 ಸಮಸ್ಯೆ

ಅಮೋಕ್ಸಿಲಿನ್, ನಾರ್ಫ್ಲೋಕ್ಸಾಸಿನ್, ಸಿಪ್ರೊಫ್ಲೋಕ್ಸಾಸಿನ್, ಆಫ್ಲೋಕ್ಸಾಸಿನ್, ಲೆವೊಫ್ಲೋಕ್ಸಾಸಿನ್​ನಂಥ ಆ್ಯಂಟಿಬಯಾಟಿಕ್​ಗಳು ಹೆಚ್ಚೆಚ್ಚು ಬಳಕೆಯಾಗುತ್ತಿವೆ. ಇದರ ಅಡ್ಡಪರಿಣಾಮಗಳ ಬಗ್ಗೆ ಈಗಾಗಲೇ ಗಮನಕ್ಕೆ ಬಂದಿದೆ. ಈ ಕುರಿತು ಜನರು ಹಾಗೂ ವೈದ್ಯರು ಬಹಳ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ ಎಂದು ವೈದ್ಯಕೀಯ ಸಂಘ ಹೇಳಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ