AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Immunity Boosting Foods: ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ 5 ಆಹಾರ ಪದಾರ್ಥಗಳಿವು

ಪ್ರತಿರಕ್ಷಣಾ ವ್ಯವಸ್ಥೆಯು ನಮ್ಮ ದೇಹವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸುತ್ತದೆ. ಅದಕ್ಕಾಗಿ ನಾವು ಸೇವಿಸುವ ಆಹಾರದ ಕಡೆಯೂ ಗಮನ ಹರಿಸಬೇಕು. ಭಾರತದಲ್ಲಿ H3N2 ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಪ್ರತಿರಕ್ಷಣಾ ವ್ಯವಸ್ಥೆಯನ್ನು ಉತ್ತಮ ಸ್ಥಿತಿಯಲ್ಲಿಡಲು ಇದು  ಸೂಕ್ತ ಸಮಯ

Immunity Boosting Foods: ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ 5 ಆಹಾರ ಪದಾರ್ಥಗಳಿವು
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Mar 16, 2023 | 8:00 AM

ಹವಾಮಾನ ಬದಲಾಗುತ್ತದೆ. ಉರಿ ಬಿಸಿಲು ಒಂದೆಡೆಯಾದರೆ ಬಿಸಿಲ ನಡುವೆ ಸುರಿವ ಮಳೆ. ಇಂಥಾ ಹೊತ್ತಲ್ಲಿ ಶೀತ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿದ್ದೀರಾ? ರೋಗ ಬಂದಾಗ ಔಷಧಿ ಸೇವಿಸುವುದು ಬೇರೆ, ರೋಗ ಬರದಂತೆ ತಡೆಯುವುದು ಬೇರೆ. ರೋಗ ಬರದಂತೆ ತಡೆಯಲು ದೇಹದಲ್ಲಿ  ರೋಗನಿರೋಧಕ ಬೇಕೇ ಬೇಕು. ಪ್ರತಿರಕ್ಷಣಾ ವ್ಯವಸ್ಥೆಯು (Immune system) ನಮ್ಮ ದೇಹವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸುತ್ತದೆ. ಅದಕ್ಕಾಗಿ ನಾವು ಸೇವಿಸುವ ಆಹಾರದ(Immunity-Boosting Foods) ಕಡೆಯೂ ಗಮನ ಹರಿಸಬೇಕು. ಭಾರತದಲ್ಲಿ H3N2 ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಪ್ರತಿರಕ್ಷಣಾ ವ್ಯವಸ್ಥೆಯನ್ನು ಉತ್ತಮ ಸ್ಥಿತಿಯಲ್ಲಿಡಲು ಇದು  ಸೂಕ್ತ ಸಮಯ. ನಮ್ಮ ಆಹಾರ ಮತ್ತು ಜೀವನಶೈಲಿಯು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಆರೋಗ್ಯಕರ ಆಹಾರವನ್ನು ಸೇವಿಸುವುದು, ನಿಯಮಿತವಾಗಿ ವ್ಯಾಯಾಮ ಮಾಡುವುದು, ಸರಿಯಾದ ನಿದ್ರೆಯನ್ನು ಪಡೆಯುವುದು, ಧೂಮಪಾನವನ್ನು ತ್ಯಜಿಸುವುದು, ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳುವುದು ಮತ್ತು ಮದ್ಯ ಸೇವನೆಯನ್ನು ನಿರ್ಬಂಧಿಸುವುದು ರೋಗನಿರೋಧಕ ಶಕ್ತಿಯನ್ನು ನಿರ್ಮಿಸಲು ಸಹಾಯ ಮಾಡುವ ಕೆಲವು ವಿಧಾನಗಳು. ಕೆಲವು ಆಹಾರಗಳು ರೋಗನಿರೋಧಕ ಶಕ್ತಿಯನ್ನು ನಿರ್ಮಿಸಲು ಸಹಾಯ ಮಾಡುತ್ತವೆ. ಅಂಥಾ ಆಹಾರಗಳು ಯಾವುದೆಂದು ನೋಡೋಣ

1. ಸಿಟ್ರಸ್ ಆಹಾರಗಳು

ಸಿಟ್ರಸ್ ಕುಟುಂಬಕ್ಕೆ ಸೇರಿದ ನಿಂಬೆಹಣ್ಣು, ಕಿತ್ತಳೆ, ದ್ರಾಕ್ಷಿಹಣ್ಣುಗಳಲ್ಲಿ ಹೆಚ್ಚಿನ ಆಂಟಿಓಕ್ಸಿಡೆಂಟ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

2. ಬಾದಾಮಿ

ಬಾದಾಮಿ ಅಗತ್ಯ ಪೋಷಕಾಂಶಗಳನ್ನು ಹೊಂದಿದ್ದು ಹೃದಯದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ರೋಗನಿರೋಧಕ ಶಕ್ತಿ ನೀಡುತ್ತದೆ. ಬಾದಾಮಿಯು ವಿಟಮಿನ್ ಇ, ಸತು, ಮೆಗ್ನೀಸಿಯಮ್ ಮತ್ತು ಪ್ರೋಟೀನ್‌ಗಳಂತಹ ಅಗತ್ಯ ಪೋಷಕಾಂಶಗಳ ಮೂಲವಾಗಿದೆ.

3. ಅರಿಶಿನ

ಅರಿಶಿನವು ಅದ್ಭುತವಾದ ಮಸಾಲೆಯಾಗಿದ್ದು ಇದನ್ನು ನಿಮ್ಮ ಆಹಾರದಲ್ಲಿ ಹಲವಾರು ವಿಧಗಳಲ್ಲಿ ಸೇರಿಸಬಹುದು. ಅರಿಶಿನದ ಮುಖ್ಯ ಅಂಶವಾದ ಕರ್ಕ್ಯುಮಿನ್ ಪ್ರತಿರಕ್ಷಣಾ ಕಾರ್ಯವನ್ನು ಬೆಂಬಲಿಸುವ ಆಂಟಿ ಇನ್ಫ್ಲಮೇಟರಿ ಗುಣಲಕ್ಷಣಗಳಿಂದ ತುಂಬಿರುತ್ತದೆ. ನೀವು ಅರಿಶಿನ ಹಾಲು ಅಥವಾ ಚಹಾವನ್ನು ಕುಡಿಯಬಹುದು. ನಿಮ್ಮ ದೈನಂದಿನ ಆಹಾರದಲ್ಲಿ ಅರಶಿನವನ್ನು ಬಳಸುವುದು ಒಳ್ಳೆಯದು.

4. ಗ್ರೀನ್ ಚಹಾ

ಗ್ರೀನ್ ಟೀ ಕುಡಿಯುವುದರಿಂದ ಮ್ಯಾಜಿಕ್ ನಂತೆ ತೂಕ ಇಳಿಸಲು ಸಾಧ್ಯವಿಲ್ಲ. ಆದರೆ ಗ್ರೀನ್ ಟೀ ಹಲವಾರು ಇತರ ಪ್ರಯೋಜನಗಳನ್ನು ನೀಡುತ್ತದೆ. ಇದು ಎಪಿಗಲ್ಲೊಕಾಟೆಚಿನ್ ಗ್ಯಾಲೇಟ್ ಅನ್ನು ಹೊಂದಿರುತ್ತದೆ, ಇದು ರೋಗ ನಿರೋಧಕ ಶಕ್ತಿಯನ್ನು ಹೊಂದಲು ಸಹಾಯ ಮಾಡುತ್ತದೆ.

5. ಮಜ್ಜಿಗೆ

ಮಜ್ಜಿಗೆ ಕ್ಯಾಲ್ಸಿಯಂ ತುಂಬಿದ ದೇಸಿ ಪಾನೀಯವಾಗಿದೆ. ಮಜ್ಜಿಗೆಯಲ್ಲಿರುವ ಲ್ಯಾಕ್ಟಿಕ್ ಆಮ್ಲವು ಪ್ರತಿರಕ್ಷಣಾ ವ್ಯವಸ್ಥೆಯ ಸರಾಗವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ನಿಮ್ಮ ಮಜ್ಜಿಗೆ ಅಥವಾ ಸಂಬಾರಂಗೆ ಕಲ್ಲು ಉಪ್ಪು, ಮೆಣಸು, ಪುದೀನ ಎಲೆಗಳು ಮತ್ತು ಇತರ ಮಸಾಲೆಗಳನ್ನು ಸೇರಿಸಬಹುದು.

ಬೆಳ್ಳುಳ್ಳಿ, ಶುಂಠಿ, ಕಿವಿ, ಪಪ್ಪಾಯ, ಕೋಸುಗಡ್ಡೆ, ಪಾಲಕ್, ಮೊಸರು, ಬೆಲ್ ಪೆಪರ್ ಮತ್ತು ಬೀಜಗಳು ಕೂಡಾ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳಾಗಿವೆ.

ಮತ್ತಷ್ಟು ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ