AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Impetigo : ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುವ ಚರ್ಮದ ಸಾಂಕ್ರಾಮಿಕ ಸೋಂಕಿಗೆ ಆರ್ಯುವೇದದ ಸಲಹೆ ಇಲ್ಲಿದೆ

2016 ರ ಅಧ್ಯಯನವೊಂದರ ಪ್ರಕಾರ ಸ್ಟ್ಯಾಫಿಲೋಕೊಕಸ್ ಮತ್ತು ಸ್ಟ್ರೆಪ್ಟೋಕೊಕಸ್ ಎಂಬ ಚರ್ಮದ ಸೋಂಕಿಗೆ ಕಾರಣವಾಗುವ ಎರಡು ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವಲ್ಲಿ ಅರಶಿನವು ಉತ್ತಮ ಔಷಧಿಯಾಗಿ ಎಂದು ತಿಳಿದುಬಂದಿದೆ.

Impetigo : ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುವ ಚರ್ಮದ ಸಾಂಕ್ರಾಮಿಕ ಸೋಂಕಿಗೆ ಆರ್ಯುವೇದದ ಸಲಹೆ ಇಲ್ಲಿದೆ
ಇಂಪೆಟಿಗೊ ಚರ್ಮದ ಸೋಂಕು
Follow us
ಅಕ್ಷತಾ ವರ್ಕಾಡಿ
|

Updated on:Mar 11, 2023 | 11:02 AM

ಇಂಪೆಟಿಗೊ ಒಂದು ರೀತಿಯ ಚರ್ಮದ ಮೇಲೆ ಹುಟ್ಟಿಕೊಳ್ಳುವ ಸಾಂಕ್ರಾಮಿಕ ಸೋಂಕು. ಇಂಪೆಟಿಗೊ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳಲ್ಲಿ ಕಂಡುಬರುತ್ತದೆ. ಇದು ಸ್ಟ್ರೆಪ್ಟೋಕೊಕಸ್ ಎ ಮತ್ತು ಸ್ಟ್ಯಾಫಿಲೋಕೊಕಸ್ ಔರೆಸ್ ಎಂಬ ಎರಡು ಬ್ಯಾಕ್ಟೀರಿಯಾಗಳಿಂದ ಹರಡುತ್ತದೆ. 2 ರಿಂದ 5 ವರ್ಷ ವಯಸ್ಸಿನ ಮಕ್ಕಳಲ್ಲಿ ಇಂಪೆಟಿಗೊ ಹೆಚ್ಚಾಗಿ ಕಂಡುಬರುತ್ತದೆ. ಎ ಸ್ಟ್ರೆಪ್ ಬ್ಯಾಕ್ಟೀರಿಯಾವು ಚರ್ಮಕ್ಕೆ ಸೋಂಕು ತಗುಲಿದಾಗ, ಅವು ಹುಣ್ಣುಗಳನ್ನು ಉಂಟುಮಾಡುತ್ತವೆ. ಯಾರಾದರೂ ಆ ಹುಣ್ಣುಗಳನ್ನು ಮುಟ್ಟಿದರೆ ಅಥವಾ ಹುಣ್ಣುಗಳಿಂದ ದ್ರವದ ಸಂಪರ್ಕಕ್ಕೆ ಬಂದರೆ ಬ್ಯಾಕ್ಟೀರಿಯಾವು ಇತರರಿಗೆ ಹರಡುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಮುಂಬಯಿ ಪ್ರಾಣ ಹೆಲ್ತ್​​ ಕೇರ್​​ ಸೆಂಟರ್​​​ನ ಡಾ. ಡಿಂಪಲ್​​ ಜಂಗ್ಡಾ ಈ ಸಾಂಕ್ರಾಮಿಕ ಚರ್ಮದ ಸೋಂಕಿಗೆ ಆರ್ಯುವೇದದ ಪರಿಹಾರವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆ ಪೋಸ್ಟ್​​ ಇಲ್ಲಿದೆ ನೋಡಿ.

2016 ರ ಅಧ್ಯಯನವೊಂದರ ಪ್ರಕಾರ ಸ್ಟ್ಯಾಫಿಲೋಕೊಕಸ್ ಮತ್ತು ಸ್ಟ್ರೆಪ್ಟೋಕೊಕಸ್ ಎಂಬ ಚರ್ಮದ ಸೋಂಕಿಗೆ ಕಾರಣವಾಗುವ ಎರಡು ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವಲ್ಲಿ ಅರಶಿನವು ಉತ್ತಮ ಔಷಧಿಯಾಗಿ ಎಂದು ತಿಳಿದುಬಂದಿದೆ.

ಡಾ. ಡಿಂಪಲ್​​ ಜಂಗ್ಡಾರವರು ನೀಡಿರುವ ಆರ್ಯುವೇದದ ಸಲಹೆ ಇಲ್ಲಿದೆ:

ಅರಶಿನ:

ಅರಶಿನವು ಆಂಟಿ ಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವ ಕಾರಣ ಚರ್ಮದ ಸೋಂಕಿನ ವಿರುದ್ಧ ಹೋರಾಡುವಲ್ಲಿ ಸಹಾಯಕವಾಗಿದೆ. ಆದ್ದರಿಂದ ಚರ್ಮದ ಮೇಲೆ ಉಂಟಾದ ಹುಣ್ಣು ಉಂಟಾದರೆ ಅರಶಿನದ ಪೇಸ್ಟ್​​ ತಯಾರಿಸಿ, ಸೋಂಕಿನ ಭಾಗದ ಮೇಲೆ ಹಚ್ಚಿ 20 ರಿಂದ 30 ನಿಮಿಷಗಳ ಕಾಲ ಹಾಗೆಯೇ ಬಿಡಿ. ಇದು ಚರ್ಮದ ಮೇಲಿನ ಸೋಂಕಿನ ವಿರುದ್ಧ ಹೋರಾಡುವಲ್ಲಿ ಸಹಾಯಕವಾಗಿದೆ ಎಂದು ತಜ್ಞರಾದ ಡಿಂಪಲ್​ ಸಲಹೆ ನೀಡುತ್ತಾರೆ.

ಜೇನುತುಪ್ಪ:

ಜೇನುತುಪ್ಪದಲ್ಲಿ ಆಂಟಿ ಬ್ಯಾಕ್ಟೀರಿಯಾ ಗುಣ ಹೇರಳವಾಗಿರುವುದರಿಂದ ಹುಣ್ಣುಗಳಿಂದ ನಿಮ್ಮ ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿಯಾಗಿದೆ. ಆದ್ದರಿಂದ ಒಂದು ಹನಿ ಜೇನುತುಪ್ಪ ತೆಗೆದುಕೊಂಡು ಹುಣ್ಣಾಗಿರುವ ಜಾಗದಲ್ಲಿ ಹಚ್ಚಿ ಹಾಗೂ 30 ನಿಮಿಷಗಳ ವರೆಗೆ ಹಾಗೆಯೇ ಬಿಡಿ. ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.

ಇದನ್ನೂ ಓದಿ: H3N2 ವೈರಸ್‌ನ ರೋಗ ಲಕ್ಷಣ, ಚಿಕಿತ್ಸೆ, ಜತೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಯಾವುವು?

ಕಹಿಬೇವಿನ ಎಲೆ:

ಬ್ಯಾಕ್ಟೀರಿಯಾಗಳನ್ನು ಕೊಲ್ಲುವ ಶಕ್ತಿಯನ್ನು ಹೊಂದಿರುವ ಕಹಿಬೇವು, ಜೊತೆಗೆ ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಆದ್ದರಿಂದ ಒಂದು ಪಾತ್ರೆಯಲ್ಲಿ ನೀರು ಕುದಿಸಿ, ನೀರು ಕುದಿಯುತ್ತಿರುವಾಗಲೇ ಅದಕ್ಕೆ ಕಹಿಬೇವಿನ ಎಲೆಗಳನ್ನು ಹಾಕಿ. ನಂತರ ಈ ನೀರಿನಿಂದಲೇ ಸ್ನಾನ ಮಾಡಿ. ಇದು ಚರ್ಮದ ಮೇಲೆ ಸಾಂಕ್ರಮಿಕ ಸೋಂಕಿಗೆ ಕಾರಣವಾಗುವ ಎಲ್ಲಾ ಬ್ಯಾಕ್ಟೀರಿಯಾಗಳನ್ನು ಕೊಲ್ಲುವಲ್ಲಿ ಪ್ರಯೋಜನಕಾರಿಯಾಗಿದೆ.

ಅಲೋವೆರಾ:

ನಿಮ್ಮ ಚರ್ಮದ ಮೇಲೆ ತುರಿಕೆ ಹುಣ್ಣುಗಳು ಕಂಡು ಬಂದರೆ ತಕ್ಷಣ ಆ ಭಾಗಗಳಿಗೆ ಅಲೋವೆರಾ ಹಚ್ಚಿ. ಇದು ನಿಮ್ಮ ಚರ್ಮವನ್ನು ತಂಪಾಗಿಡುತ್ತದೆ ಮತ್ತು ಚರ್ಮದ ಸೋಂಕಿನ ವಿರುದ್ಧ ಹೋರಾಡುವಲ್ಲಿ ಸಹಾಯ ಮಾಡುತ್ತದೆ ಎಂದು ಡಾ. ಡಿಂಪಲ್​ ಸಲಹೆ ನೀಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:00 am, Sat, 11 March 23

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?