AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮಧುಮೇಹ ನಿಯಂತ್ರಣಕ್ಕೆ ತುಳಸಿ ದಿವ್ಯ ಔಷಧಿ

ತುಳಸಿ ಎಲೆಗಳು ಅಧಿಕ ಕೊಲೆಸ್ಟ್ರಾಲ್ ಮತ್ತು ಮಧುಮೇಹ ರೋಗಿಗಳಿಗೆ ದಿವ್ಯ ಔಷಧ ಎನ್ನುತ್ತಾರೆ ಆಯುರ್ವೇದ ತಜ್ಞರು. ಈ ಎಲೆಗಳಲ್ಲಿರುವ ಔಷಧೀಯ ಗುಣಗಳು ಅನೇಕ ಸಮಸ್ಯೆಗಳನ್ನು ಮತ್ತು ರೋಗಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ..ಆದ್ದರಿಂದ ಇದನ್ನು ರಾಮಬಾಣವೆಂದು ಪರಿಗಣಿಸಲಾಗುತ್ತದೆ..

Health Tips: ಮಧುಮೇಹ ನಿಯಂತ್ರಣಕ್ಕೆ ತುಳಸಿ ದಿವ್ಯ ಔಷಧಿ
ಅಕ್ಷತಾ ವರ್ಕಾಡಿ
|

Updated on: Jul 21, 2024 | 6:32 PM

Share

ಮಧುಮೇಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅನೇಕ ಜನರು ನೈಸರ್ಗಿಕವಾಗಿ ಮಧುಮೇಹವನ್ನು ಕಡಿಮೆ ಮಾಡಲು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ. ಅಂತಹವರಿಗೆ ತುಳಸಿ ದಿವ್ಯ ಔಷಧಿ. ವಾಸ್ತವವಾಗಿ ತುಳಸಿ ಇಡೀ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವಾರು ಔಷಧೀಯ ಗುಣಗಳು ಅಡಗಿವೆ. ನಿತ್ಯ 5-7 ತುಳಸಿ ಎಲೆಗಳನ್ನು ನಿತ್ಯ ಸೇವಿಸುವುದರಿಂದ ಅದ್ಭುತವಾದ ಆರೋಗ್ಯಕಾರಿ ಲಾಭಗಳಿವೆ. ದೇಹವನ್ನು ರೋಗಗಳಿಂದ ಮುಕ್ತವಾಗಿಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.

ತುಳಸಿ ಎಲೆಗಳು ಕೊಲೆಸ್ಟ್ರಾಲ್ ಮತ್ತು ಮಧುಮೇಹ ರೋಗಿಗಳಿಗೆ ದಿವ್ಯೌಷಧ ಎನ್ನುತ್ತಾರೆ ಆಯುರ್ವೇದ ತಜ್ಞರು..ಈ ಎಲೆಗಳಲ್ಲಿರುವ ಔಷಧೀಯ ಗುಣಗಳು ಅನೇಕ ಸಮಸ್ಯೆಗಳನ್ನು ಮತ್ತು ರೋಗಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ..ಆದ್ದರಿಂದ ಇದನ್ನು ರಾಮಬಾಣವೆಂದು ಪರಿಗಣಿಸಲಾಗುತ್ತದೆ..

ತುಳಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ:

ತುಳಸಿ ಎಲೆಗಳನ್ನು ತಿನ್ನುವುದರಿಂದ ಕ್ಯಾನ್ಸರ್, ಹೃದ್ರೋಗ ಮತ್ತು ಸಂಧಿವಾತವನ್ನು ಕಡಿಮೆ ಮಾಡಬಹುದು. ಇದು ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ಸಹ ನಿಯಂತ್ರಿಸಬಹುದು. ತುಳಸಿಯಲ್ಲಿ ಮಧುಮೇಹ ನಿವಾರಕ ಗುಣವಿದೆ. ತುಳಸಿ ಎಲೆಯ ಸಾರವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಪರಿಣಾಮಕಾರಿ ಎಂದು ಅಧ್ಯಯನಗಳು ತೋರಿಸಿವೆ.

ರಕ್ತದೊತ್ತಡ ನಿಯಂತ್ರಣ:

ತುಳಸಿಯಲ್ಲಿ ಒತ್ತಡ, ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡುವ ಸಂಯುಕ್ತಗಳಿವೆ. ಅಲ್ಲದೆ ಈ ಎಲೆಗಳು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ತುಳಸಿಯಲ್ಲಿರುವ ಯುಜೆನಾಲ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಿಂದ ಹೃದಯ ಸಂಬಂಧಿ ಕಾಯಿಲೆಗಳು ಕಡಿಮೆಯಾಗುತ್ತವೆ.

ಮಾನಸಿಕ ಆರೋಗ್ಯ:

ತುಳಸಿಯು ಆಯುರ್ವೇದ ಔಷಧದಲ್ಲಿ ಒಂದು ಗಿಡಮೂಲಿಕೆಯಂತೆ.. ಈ ಎಲೆಗಳು ನಿಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ಹಲವು ಅಧ್ಯಯನಗಳು ತೋರಿಸುತ್ತವೆ.

ಚರ್ಮದ ಸಮಸ್ಯೆಗಳು:

ತುಳಸಿ ಎಲೆಗಳಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಹೇರಳವಾಗಿವೆ. ಇದು ಹೃದ್ರೋಗಗಳು, ಕ್ಯಾನ್ಸರ್, ಸಂಧಿವಾತ, ಉಸಿರಾಟದ ತೊಂದರೆಗಳು, ಹೊಟ್ಟೆ, ಮೂತ್ರದ ಅಸ್ವಸ್ಥತೆಗಳು, ಹೊಟ್ಟೆಯ ಹುಣ್ಣುಗಳು, ಚರ್ಮ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮಕ್ಕಳು ಅಪರಾಧ ಜಗತ್ತಿನಲ್ಲಿ ಗುರುತಿಸಿಕೊಳ್ಳಲು ಈ ವಿಚಾರ ಕಾರಣ? ನಿಯಂತ್ರಣ ಹೇಗೆ? ಡಾ. ನಿವೇದಿತಾ ಹೇಳೋದೇನು?

ತೂಕ ನಿಯಂತ್ರಣ:

ತುಳಸಿ ಎಲೆಗಳನ್ನು ಸೇವಿಸುವುದು ಹೊಟ್ಟೆಗೂ ಒಳ್ಳೆಯದು. ಇದನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ. ಈ ತುಳಸಿ ಸರಾಸರಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 3 ರಿಂದ 8 ತುಳಸಿ ಎಲೆಗಳನ್ನು ತಿನ್ನಲು ಆಯುರ್ವೇದ ತಜ್ಞರು ಸಲಹೆ ನೀಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ