Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸೈನಸ್ ಸಮಸ್ಯೆಯ ನಿವಾರಣೆಗೆ ಸರಳ ಉಪಾಯ; ಮನೆಯಲ್ಲೇ ತಯಾರಿಸಬಹುದಾದ ಔಷಧಿಗಳ ಬಗ್ಗೆ ಗಮನಹರಿಸಿ

ತಣ್ಣಗಿರುವ ವಾತಾವರಣದಿಂದಾಗಿ ಸೈನಸ್ ಸಮಸ್ಯೆಯಿಂದ ಬಳಲುತ್ತಿರುವವರು ಹೆಚ್ಚು ಸಂಕಷ್ಟವನ್ನು ಅನುಭವಿಸುತ್ತಾರೆ. ಇದರಿಂದ ತೀವ್ರ ತಲೆನೋವಿನಿಂದ ಬಳಲುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ.

Health Tips: ಸೈನಸ್ ಸಮಸ್ಯೆಯ ನಿವಾರಣೆಗೆ ಸರಳ ಉಪಾಯ; ಮನೆಯಲ್ಲೇ ತಯಾರಿಸಬಹುದಾದ ಔಷಧಿಗಳ ಬಗ್ಗೆ ಗಮನಹರಿಸಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Jun 15, 2021 | 2:32 PM

ಸೈನಸ್ ಸಮಸ್ಯೆಯನ್ನು ಕಡಿಮೆ ಮಾಡಲು ಸಲಹೆಗಳು: ಮಳೆಗಾಲ ಆರಂಭವಾಗುತ್ತಿದ್ದು, ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚು ಜಾಗರೂಕರಾಗಿರಬೇಕಾಗುತ್ತದೆ. ಅದರಲ್ಲೂ ತಣ್ಣಗಿರುವ ವಾತಾವರಣದಿಂದಾಗಿ ಸೈನಸ್ ಸಮಸ್ಯೆಯಿಂದ ಬಳಲುತ್ತಿರುವವರು ಹೆಚ್ಚು ಸಂಕಷ್ಟವನ್ನು ಅನುಭವಿಸುತ್ತಾರೆ. ಇದರಿಂದ ತೀವ್ರ ತಲೆನೋವಿನಿಂದ ಬಳಲುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ. ವಿಶೇಷವಾಗಿ ಸೈನೋಟಿಸ್‌ನಿಂದ ಬಳಲುತ್ತಿರುವವರು ತಲೆನೋವು, ಮುಖದ ನೋವು, ಸ್ರವಿಸುವ ಮೂಗು, ಕಿವಿ, ಹಲ್ಲುನೋವು, ಜ್ವರ, ಗಂಟಲು ನೋವು, ಮೂಗು ಬಂದ್ ಆಗುವುದು ಮತ್ತು ಕೆಮ್ಮಿನಂತಹ ಲಕ್ಷಣಗಳಿಂದಾಗಿ ಕಿರಿಕಿರಿ ಅನುಭವಿಸುತ್ತಾರೆ. ಆದರೆ ಕೆಲವು ನೈಸರ್ಗಿಕ ವಿಧಾನದೊಂದಿಗೆ ನೀವು ಸೈನಸ್ ಸಮಸ್ಯೆಗಳಿಂದ ದೂರವಿರಬಹುದು. ಅವುಗಳು ಈ ಕೆಳಗಿನಂತಿವೆ.

* ಸೈನಸ್ ನೋವು ಕಡಿಮೆ ಮಾಡಲು ಅರ್ಧ ಚಮಚ ಆ್ಯಪಲ್ ಸೈಡರ್ ವಿನೆಗರ್ ಅನ್ನು ನೀರಿನಲ್ಲಿ ಬೆರೆಸಿ ಸೇವಿಸಿ. ಇಲ್ಲವಾದಲ್ಲಿ ಆ್ಯಪಲ್ ಸೈಡರ್ ವಿನೆಗರ್ ಅನ್ನು ಚಹಾ ರೂಪದಲ್ಲಿ ಕೂಡ ತೆಗೆದುಕೊಳ್ಳಬಹುದು.

* ಶುಂಠಿಯಿಂದ ಮಾಡಿದ ಕಷಾಯವನ್ನು ಸೇವಿಸುವುದರಿಂದ ಸೈನಸ್ ಸಮಸ್ಯೆ ದೂರವಾಗುತ್ತದೆ. ಜತೆಗೆ ಒಂದು ಚಮಚೆ ಶುಂಠಿ ರಸ, ಒಂದು ಚಮಚೆ ಜೇನುತುಪ್ಪವನ್ನು ದಿನಕ್ಕೆ ಮೂರು ಬಾರಿ ತೆಗೆದುಕೊಳ್ಳುವುದರಿಂದಲೂ ಈ ಸಮಸ್ಯೆ ದೂರವಾಗುತ್ತದೆ.

* ಸೈನಸ್ ಸಮಸ್ಯೆಯಿಂದ ಬಳಲುತ್ತಿರುವವರು ಮಳೆಗಾಲದಲ್ಲಿ ಬಿಸಿ ಸೂಪ್ ತೆಗೆದುಕೊಳ್ಳಬೇಕು. ಏಕೆಂದರೆ ಇದು ಮೂಗು ಕಟ್ಟುವ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ ಮತ್ತು ಸರಿಯಾದ ಉಸಿರಾಟಕ್ಕೆ ಸಹಾಯ ಮಾಡುತ್ತದೆ. ಅಲ್ಲದೆ ಸೈನಸ್​ನಿಂದ ಉಂಟಾಗುವ ನೋವಿನಿಂದ ಪರಿಹಾರ ನೀಡುತ್ತದೆ.

* ಸೈನಸ್ ಸಮಸ್ಯೆಯಿರುವ ಜನರು ಯಾವಾಗಲೂ ತಮ್ಮ ದೇಹವನ್ನು ಹೈಡ್ರೀಕರಿಸಬೇಕು. ಇದರಿಂದ ದೇಹದಲ್ಲಿ ನೋವು ಕಾಣಿಸಿಕೊಳ್ಳುವುದಿಲ್ಲ. ಆದಷ್ಟು ಬಿಸಿ ನೀರನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳುವುದು ಸೂಕ್ತ.

* ಸೈನೋಟಿಸ್‌ನಿಂದ ಬಳಲುತ್ತಿರುವವರು ಪುದೀನ ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಮತ್ತು ಅದನ್ನು ಸ್ಟೀಮ್ ರೂಪದಲ್ಲಿ ತೆಗೆದುಕೊಳ್ಳಿ. ಹೀಗೆ ದಿನಕ್ಕೆ ಎರಡು ಬಾರಿ ಇದನ್ನು ಮಾಡುವುದರಿಂದ ಸೈನಸ್ ಸಮಸ್ಯೆ ನಿವಾರಣೆಯಾಗುತ್ತದೆ.

ಇದನ್ನೂ ಓದಿ:

Health Tips: ಮೊಸರಿನೊಂದಿಗೆ ಇತರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇದೆಯೇ? ನಿಮ್ಮ ಆಹಾರ ಸೇವನೆ ಬಗ್ಗೆ ಎಚ್ಚರ ಇರಲಿ

Salt: ಹೆಚ್ಚು ಉಪ್ಪು ಸೇವಿಸುವ ಅಭ್ಯಾಸವಿದೆಯೇ? ಹಾಗಿದ್ದರೆ ಈ ರೋಗಲಕ್ಷಣಗಳ ಬಗ್ಗೆ ಎಚ್ಚರವಹಿಸಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು