AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ತಣ್ಣೀರಿನ ಸ್ನಾನ ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸಬಹುದು ಹುಷಾರ್!

ಚಳಿಗಾಲದಲ್ಲಿ, ಕೆಲವರು ತಣ್ಣೀರಿನಿಂದ ಸ್ನಾನ ಮಾಡುತ್ತಾರೆ, ಆದರೆ ತಣ್ಣೀರಿನಿಂದ ಸ್ನಾನ ಮಾಡುವಾಗ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಒಳ್ಳೆಯದು. ಈ ಸಮಯದಲ್ಲಿ ನೀವು ನಿರ್ಲಕ್ಷ್ಯ ವಹಿಸಿದರೆ, ಪಾರ್ಶ್ವವಾಯು ಸೇರಿದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಬಗ್ಗೆ ತಜ್ಞರು ಹಂಚಿಕೊಂಡಿರುವ ಮಾಹಿತಿ ಇಲ್ಲಿದೆ.

ಚಳಿಗಾಲದಲ್ಲಿ ತಣ್ಣೀರಿನ ಸ್ನಾನ ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸಬಹುದು ಹುಷಾರ್!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 08, 2025 | 5:42 PM

Share

ಚಳಿಗಾಲದ ಸಮಯದಲ್ಲಿ ಅದರಲ್ಲೂ ಮೈ ಕೊರೆಯುವ ಚಳಿ ಇದ್ದಾಗಲೂ ಕೂಡ ಅನೇಕರು ತಣ್ಣೀರಿನಿಂದ ಸ್ನಾನ ಮಾಡಲು ಇಷ್ಟಪಡುತ್ತಾರೆ. ತಂಪಾದ ನೀರಿನಿಂದ ಸ್ನಾನ ಮಾಡುವುದು ದೇಹಕ್ಕೆ ಒಂದು ರೀತಿಯ ತಾಜಾತನದ ಜೊತೆಗೆ ಉಲ್ಲಾಸ ನೀಡುತ್ತದೆ ಎಂಬ ಭಾವನೆ ಹಲವರದ್ದು, ಆದರೆ ನಿಮಗೆ ಗೊತ್ತಾ? ಕೆಲವು ಬಾರಿ ಈ ರೀತಿಯ ಅಭ್ಯಾಸ ಆರೋಗ್ಯಕ್ಕೂ ಅಪಾಯಕಾರಿಯಾಗಬಹುದು. ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಇದು ನಿಮಗೆ ಆಶ್ಚರ್ಯ ಎನಿಸಬಹುದು ಆದರೆ ಇದು ಸತ್ಯ. ಕೆಲವು ಸಂಶೋಧನೆಗಳಿಂದಲೂ ಇದು ಸಾಬೀತಾಗಿದೆ. ಹಾಗಾದರೆ ಮೆದುಳಿನ ಪಾರ್ಶ್ವವಾಯು ಎಂದರೇನು? ತಣ್ಣೀರಿನ ಸ್ನಾನಕ್ಕೂ ಇದಕ್ಕೂ ಸಂಬಂಧವಿದೆಯೇ? ಇದಕ್ಕೆ ಕಾರಣವೇನು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾಮಾನ್ಯವಾಗಿ ಮೆದುಳಿಗೆ ರಕ್ತದ ಹರಿವು ನಿಧಾನವಾದಾಗ ಅಥವಾ ನಿಂತಾಗ, ಮೆದುಳಿನ ಕೆಲವು ಭಾಗಗಳಿಗೆ ಆಮ್ಲಜನಕ ತಲುಪುವುದು ತಡವಾದಾಗ ಪಾರ್ಶ್ವವಾಯು ಸಂಭವಿಸುತ್ತದೆ. ಈ ಸ್ಥಿತಿಯು ಅತ್ಯಂತ ಅಪಾಯಕಾರಿಯಾಗಿದ್ದು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ವ್ಯಕ್ತಿಯ ಸಾವಿಗೆ ಕಾರಣವಾಗಬಹುದು. ಹಾಗಾದರೆ ತಣ್ಣೀರು ಮೆದುಳಿನ ಪಾರ್ಶ್ವವಾಯುವಿನ ಅಪಾಯವನ್ನು ಹೇಗೆ ಹೆಚ್ಚಿಸುತ್ತದೆ? ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ.

ತಣ್ಣೀರು ಪಾರ್ಶ್ವವಾಯುವಿನ ಅಪಾಯವನ್ನು ಹೇಗೆ ಹೆಚ್ಚಿಸುತ್ತದೆ?

ಹಿರಿಯ ವೈದ್ಯ ಡಾ. ಅಜಯ್ ಕುಮಾರ್ ಅವರು ಹೇಳುವ ಪ್ರಕಾರ, ತಣ್ಣೀರನ್ನು ನೇರವಾಗಿ ತಲೆಗೆ ಸುರಿದುಕೊಳ್ಳುವುದರಿಂದ ಮೆದುಳಿನ ಪಾರ್ಶ್ವವಾಯು ಅಪಾಯ ಹೆಚ್ಚಾಗಬಹುದು. ಇದಕ್ಕೆ ಕಾರಣವೆಂದರೆ ನೀವು ನೇರವಾಗಿ ತಲೆಯ ಮೇಲೆ ತಣ್ಣೀರನ್ನು ಸುರಿದಾಗ, ಮೆದುಳಿನ ನರಗಳು ಇದ್ದಕ್ಕಿದ್ದಂತೆ ಕುಗ್ಗುತ್ತವೆ, ಇದು ರಕ್ತ ಪರಿಚಲನೆಯ ಅಡಚಣೆಗೆ ಕಾರಣವಾಗಬಹುದು. ಇದಲ್ಲದೆ, ತಣ್ಣೀರಿನಿಂದ ಸ್ನಾನ ಮಾಡುವುದರಿಂದ ದೇಹದ ತಾಪಮಾನವು ಇದ್ದಕ್ಕಿದ್ದಂತೆ ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ, ದೇಹದಲ್ಲಿ ದೌರ್ಬಲ್ಯ, ಆಯಾಸ, ತಲೆ ತಿರುಗುವಿಕೆ, ಹೃದಯಾಘಾತ, ಪಾರ್ಶ್ವವಾಯು ಮುಂತಾದ ಸಮಸ್ಯೆಗಳು ಉಂಟಾಗಬಹುದು ಹಾಗಾಗಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಈ ಮಸಾಲೆ ಪದಾರ್ಥದ ಸೇವನೆಯನ್ನು ನೀವು ಮಾಡಲೇಬೇಕು!

ಈ ರೀತಿಯ ಅಪಾಯದಿಂದ ರಕ್ಷಿಸಿಕೊಳ್ಳುವುದು ಹೇಗೆ?

ತಣ್ಣೀರಿನಿಂದ ಸ್ನಾನ ಮಾಡುವಾಗ ಕೈಗಳು, ಪಾದಗಳು ಮತ್ತು ಬೆನ್ನಿನಂತಹ ದೇಹದ ಇತರ ಭಾಗಗಳಿಗೆ ನೀರನ್ನು ಸುರಿಯುವುದು ಒಳ್ಳೆಯದು ಮತ್ತು ಸುರಕ್ಷಿತ . ಈ ರೀತಿ ಮಾಡುವುದರಿಂದ, ದೇಹದ ತಾಪಮಾನವು ಸಮತೋಲನಗೊಳ್ಳುತ್ತದೆ. ನಂತರ ನೀರನ್ನು ತಲೆಗೆ ಹಾಕಿಕೊಳ್ಳಬಹುದು. ಈ ರೀತಿಯಾಗಿ, ತಣ್ಣೀರಿನ ಸ್ನಾನ ಮಾಡಬಹುದು.

ಈ ರೀತಿಯ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳನ್ನು ನೋಡಿಕೊಳ್ಳಿ

ನಿಮ್ಮ ರೋಗನಿರೋಧಕ ಶಕ್ತಿ ದುರ್ಬಲವಾಗಿದ್ದರೆ ಅಥವಾ ನಿಮಗೆ ಬೇಗ ಶೀತ ಆಗುತ್ತಿದ್ದರೆ, ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಶೀತ, ಜ್ವರ ಮತ್ತು ಇತರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಇದಲ್ಲದೆ, ನೀವು ಅಧಿಕ ರಕ್ತದೊತ್ತಡ, ಹೃದ್ರೋಗವನ್ನು ಹೊಂದಿದ್ದರೆ, ತಣ್ಣೀರಿನಿಂದ ಸ್ನಾನ ಮಾಡುವುದು ನಿಮಗೆ ಅಪಾಯಕಾರಿ. ಈ ಸಂದರ್ಭಗಳಲ್ಲಿ, ನಿಮ್ಮ ಆರೋಗ್ಯಕ್ಕೆ ಅನುಗುಣವಾಗಿ ತಣ್ಣೀರಿನಿಂದ ಸ್ನಾನ ಮಾಡುವ ಅಭ್ಯಾಸವನ್ನು ಅಳವಡಿಸಿಕೊಳ್ಳಿ. ತಣ್ಣೀರು ನಿಮಗೆ ಸರಿಹೊಂದದಿದ್ದರೆ, ಸಾಮಾನ್ಯವಾಗಿ ಬೆಚ್ಚಗಿರುವ ನೀರು ಅಥವಾ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ ಆರೋಗ್ಯವಾಗಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?