AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Sickle Cell Anemia Elimination Program: 2047ರ ವೇಳೆಗೆ ಸಿಕಲ್‌ ಸೆಲ್‌ ಅನೀಮಿಯಾ ಮುಕ್ತವಾಗಬೇಕು ಭಾರತ, ಪ್ರಧಾನಿ ಮೋದಿ ಇಂದು ಆರೋಗ್ಯ ಮಿಷನ್​​ಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್ 27) ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ರಾಷ್ಟ್ರೀಯ ಕುಡಗೋಲು ಕಣ ರಕ್ತಹೀನತೆ ನಿವಾರಣೆ (Sickle cell anemia) ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

National Sickle Cell Anemia Elimination Program: 2047ರ ವೇಳೆಗೆ ಸಿಕಲ್‌ ಸೆಲ್‌ ಅನೀಮಿಯಾ ಮುಕ್ತವಾಗಬೇಕು ಭಾರತ, ಪ್ರಧಾನಿ ಮೋದಿ ಇಂದು ಆರೋಗ್ಯ ಮಿಷನ್​​ಗೆ ಚಾಲನೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 27, 2023 | 11:07 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್ 27) ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ರಾಷ್ಟ್ರೀಯ ಕುಡಗೋಲು ಕಣ ರಕ್ತಹೀನತೆ ನಿವಾರಣೆ (Sickle cell anemia) ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಬುಡಕಟ್ಟು ಸಮುದಾಯದ ಜನರು ಈ ಕಾಯಿಲೆಗೆ ಗಣನೀಯವಾಗಿ ಒಳಗಾಗುತ್ತಿದ್ದಾರೆ. ಈ ಕಾರಣಕ್ಕೆ ಕುಡಗೋಲು ಕಣ ರಕ್ತಹೀನತೆ (ಸಿಕಲ್‌ ಸೆಲ್‌ ಅನೀಮಿಯಾ) ನಿವಾರಣೆ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ. ಈಗಾಗಲೇ ಕೇಂದ್ರ ಸರ್ಕಾರವು ರಾಷ್ಟ್ರದಾದ್ಯಂತ 17 ರಾಜ್ಯಗಳಲ್ಲಿ ವಾಸಿಸುವ ಸುಮಾರು 70 ಮಿಲಿಯನ್ ಜನರ ಮೇಲೆ ಸಿಕಲ್‌ ಸೆಲ್‌ ಅನೀಮಿಯಾ ಪರಿಣಾಮ ಬೀರುತ್ತದೆ ಎಂದು ಪತ್ತೆ ಮಾಡಿದೆ. ಈ ಕಾಯಿಲೆಯನ್ನು ತಡೆಗಟಲು ಮತ್ತು ಇದರ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಆರೋಗ್ಯ ಮಿಷನ್ ರಚಿಸಲಾಗಿದೆ, ವಿಶೇಷವಾಗಿ ಬುಡಕಟ್ಟು ಸಮುದಾಯಕ್ಕೆ ಇದರ ಪರಿಣಾಮ ಹೆಚ್ಚಾಗಿರುವ ಕಾರಣ ಅವರಿಗೆ ಇದರ ಅಗತ್ಯತೆಗಳನ್ನು ತಿಳಿಸಲಾಗುವುದು.

ಮಿಷನ್ 2047ರ ವೇಳೆಗೆ ದೇಶದಲ್ಲಿ ಸಿಕಲ್‌ ಸೆಲ್‌ ಅನೀಮಿಯಾ ಮುಕ್ತವಾಗಿರಬೇಕು ಎಂಬ ಉದ್ದೇಶದಿಂದ, ಕೇಂದ್ರ ಸರ್ಕಾರ ಈ ಕ್ರಮವನ್ನು ತರಲು ಮುಂದಾಗಿದೆ. ಈ ಹಂತದಲ್ಲಿಯೇ ಅವುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ತರಲಾಗುವುದು, ಇದಕ್ಕೆ ಪರಿಹಾರಗಳೇನು ಎಂಬುದ ಬಗ್ಗೆಯು ಈ ಕಾರ್ಯಕ್ರಮದಲ್ಲಿ ತಿಳಿಸಲಾಗುವುದು.

ಇದನ್ನೂ ಓದಿ: World Sickle Cell Awareness Day 2023: ವರ್ಲ್ಡ್ ಸಿಕಲ್ ಸೆಲ್ ಜಾಗೃತಿ ದಿನ ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

ರಾಷ್ಟ್ರೀಯ ಕುಡಗೋಲು ಕಣ ರಕ್ತಹೀನತೆ (ಸಿಕಲ್‌ ಸೆಲ್‌ ಅನೀಮಿಯಾ) ನಿರ್ಮೂಲನೆ ಮಿಷನ್​ನ್ನು 17 ರಾಜ್ಯಗಳಲ್ಲಿ 278 ಜಿಲ್ಲೆಗಳಾದ್ಯಂತ ಕಾರ್ಯಗತಗೊಳಿಸಲಾಗುವುದು, 2023ರ ಕೇಂದ್ರ ಬಜೆಟ್​​​ನಲ್ಲಿ ಈ ಬಗ್ಗೆ ಘೋಷಣೆ ಕೂಡ ಮಾಡಲಾಗಿದೆ. ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಒಡಿಶಾ, ತಮಿಳು ನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಅಸ್ಸಾಂ, ಉತ್ತರ ಪ್ರದೇಶ, ಕೇರಳ, ಬಿಹಾರ ಮತ್ತು ಉತ್ತರಾಖಂಡ ಈ ರಾಜ್ಯಗಳಲ್ಲಿ ಈ ಕಾರ್ಯಕ್ರಮಗಳನ್ನು ನಡೆಸಲಾಗುವುದು.

2047ರ ವೇಳೆಗೆ ಕುಡಗೋಲು ಕಣ ರೋಗವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿರುವ ಕೇಂದ್ರ ಅನೇಕ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಕಾಯಿಲೆಗೆ ಚಿಕಿತ್ಸೆ ಕಂಡುಹಿಡಿಯಲು 70 ಮಿಲಿಯನ್ ಜನರ ತಪಾಸಣೆಗೆ ಒಳಪಡಿಸಲಾಗುವುದು. ಹೆಚ್ಚುವರಿಯಾಗಿ, ಸಿಕಲ್ ಸೆಲ್ ಸ್ಕ್ರೀನಿಂಗ್ ಹೊಂದಿರುವ ಪ್ರತಿಯೊಬ್ಬರಿಗೂ sickle cell ಕಾರ್ಡ್ ನೀಡಲಾಗುವುದು ಎಂದು ಮಾಂಡವಿಯಾ ಹೇಳಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​