AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Sickle Cell Anemia Elimination Program: 2047ರ ವೇಳೆಗೆ ಸಿಕಲ್‌ ಸೆಲ್‌ ಅನೀಮಿಯಾ ಮುಕ್ತವಾಗಬೇಕು ಭಾರತ, ಪ್ರಧಾನಿ ಮೋದಿ ಇಂದು ಆರೋಗ್ಯ ಮಿಷನ್​​ಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್ 27) ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ರಾಷ್ಟ್ರೀಯ ಕುಡಗೋಲು ಕಣ ರಕ್ತಹೀನತೆ ನಿವಾರಣೆ (Sickle cell anemia) ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

National Sickle Cell Anemia Elimination Program: 2047ರ ವೇಳೆಗೆ ಸಿಕಲ್‌ ಸೆಲ್‌ ಅನೀಮಿಯಾ ಮುಕ್ತವಾಗಬೇಕು ಭಾರತ, ಪ್ರಧಾನಿ ಮೋದಿ ಇಂದು ಆರೋಗ್ಯ ಮಿಷನ್​​ಗೆ ಚಾಲನೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 27, 2023 | 11:07 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್ 27) ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ರಾಷ್ಟ್ರೀಯ ಕುಡಗೋಲು ಕಣ ರಕ್ತಹೀನತೆ ನಿವಾರಣೆ (Sickle cell anemia) ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಬುಡಕಟ್ಟು ಸಮುದಾಯದ ಜನರು ಈ ಕಾಯಿಲೆಗೆ ಗಣನೀಯವಾಗಿ ಒಳಗಾಗುತ್ತಿದ್ದಾರೆ. ಈ ಕಾರಣಕ್ಕೆ ಕುಡಗೋಲು ಕಣ ರಕ್ತಹೀನತೆ (ಸಿಕಲ್‌ ಸೆಲ್‌ ಅನೀಮಿಯಾ) ನಿವಾರಣೆ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ. ಈಗಾಗಲೇ ಕೇಂದ್ರ ಸರ್ಕಾರವು ರಾಷ್ಟ್ರದಾದ್ಯಂತ 17 ರಾಜ್ಯಗಳಲ್ಲಿ ವಾಸಿಸುವ ಸುಮಾರು 70 ಮಿಲಿಯನ್ ಜನರ ಮೇಲೆ ಸಿಕಲ್‌ ಸೆಲ್‌ ಅನೀಮಿಯಾ ಪರಿಣಾಮ ಬೀರುತ್ತದೆ ಎಂದು ಪತ್ತೆ ಮಾಡಿದೆ. ಈ ಕಾಯಿಲೆಯನ್ನು ತಡೆಗಟಲು ಮತ್ತು ಇದರ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಆರೋಗ್ಯ ಮಿಷನ್ ರಚಿಸಲಾಗಿದೆ, ವಿಶೇಷವಾಗಿ ಬುಡಕಟ್ಟು ಸಮುದಾಯಕ್ಕೆ ಇದರ ಪರಿಣಾಮ ಹೆಚ್ಚಾಗಿರುವ ಕಾರಣ ಅವರಿಗೆ ಇದರ ಅಗತ್ಯತೆಗಳನ್ನು ತಿಳಿಸಲಾಗುವುದು.

ಮಿಷನ್ 2047ರ ವೇಳೆಗೆ ದೇಶದಲ್ಲಿ ಸಿಕಲ್‌ ಸೆಲ್‌ ಅನೀಮಿಯಾ ಮುಕ್ತವಾಗಿರಬೇಕು ಎಂಬ ಉದ್ದೇಶದಿಂದ, ಕೇಂದ್ರ ಸರ್ಕಾರ ಈ ಕ್ರಮವನ್ನು ತರಲು ಮುಂದಾಗಿದೆ. ಈ ಹಂತದಲ್ಲಿಯೇ ಅವುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ತರಲಾಗುವುದು, ಇದಕ್ಕೆ ಪರಿಹಾರಗಳೇನು ಎಂಬುದ ಬಗ್ಗೆಯು ಈ ಕಾರ್ಯಕ್ರಮದಲ್ಲಿ ತಿಳಿಸಲಾಗುವುದು.

ಇದನ್ನೂ ಓದಿ: World Sickle Cell Awareness Day 2023: ವರ್ಲ್ಡ್ ಸಿಕಲ್ ಸೆಲ್ ಜಾಗೃತಿ ದಿನ ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

ರಾಷ್ಟ್ರೀಯ ಕುಡಗೋಲು ಕಣ ರಕ್ತಹೀನತೆ (ಸಿಕಲ್‌ ಸೆಲ್‌ ಅನೀಮಿಯಾ) ನಿರ್ಮೂಲನೆ ಮಿಷನ್​ನ್ನು 17 ರಾಜ್ಯಗಳಲ್ಲಿ 278 ಜಿಲ್ಲೆಗಳಾದ್ಯಂತ ಕಾರ್ಯಗತಗೊಳಿಸಲಾಗುವುದು, 2023ರ ಕೇಂದ್ರ ಬಜೆಟ್​​​ನಲ್ಲಿ ಈ ಬಗ್ಗೆ ಘೋಷಣೆ ಕೂಡ ಮಾಡಲಾಗಿದೆ. ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಒಡಿಶಾ, ತಮಿಳು ನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಅಸ್ಸಾಂ, ಉತ್ತರ ಪ್ರದೇಶ, ಕೇರಳ, ಬಿಹಾರ ಮತ್ತು ಉತ್ತರಾಖಂಡ ಈ ರಾಜ್ಯಗಳಲ್ಲಿ ಈ ಕಾರ್ಯಕ್ರಮಗಳನ್ನು ನಡೆಸಲಾಗುವುದು.

2047ರ ವೇಳೆಗೆ ಕುಡಗೋಲು ಕಣ ರೋಗವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿರುವ ಕೇಂದ್ರ ಅನೇಕ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಕಾಯಿಲೆಗೆ ಚಿಕಿತ್ಸೆ ಕಂಡುಹಿಡಿಯಲು 70 ಮಿಲಿಯನ್ ಜನರ ತಪಾಸಣೆಗೆ ಒಳಪಡಿಸಲಾಗುವುದು. ಹೆಚ್ಚುವರಿಯಾಗಿ, ಸಿಕಲ್ ಸೆಲ್ ಸ್ಕ್ರೀನಿಂಗ್ ಹೊಂದಿರುವ ಪ್ರತಿಯೊಬ್ಬರಿಗೂ sickle cell ಕಾರ್ಡ್ ನೀಡಲಾಗುವುದು ಎಂದು ಮಾಂಡವಿಯಾ ಹೇಳಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ