AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೇರಿಯಾ ಸೋಂಕನ್ನು ತಡೆಯಲು ಬಂತು ಮೊದಲ ಲಸಿಕೆ! ಮಹಾಮಾರಿ ರೋಗದ ವಿರುದ್ಧ ಮಹತ್ವದ ಹೆಜ್ಜೆ

ಇನ್ನು ಮುಂದೆ ಮಲೇರಿಯಾ ಎಂಬ ಮಹಾಮಾರಿ ಕಾಯಿಲೆಗೆ ಹೆದರುವ ಅವಶ್ಯಕತೆ ಇಲ್ಲ. ಏಕೆಂದರೆ ನಮ್ಮ ದೇಶ ಇದರ ವಿರುದ್ಧ ಮಹತ್ವದ ಹೆಜ್ಜೆ ಇಟ್ಟಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮಲೇರಿಯಾ ರೋಗವನ್ನು ತಡೆಯಲು ದೇಶದ ಮೊದಲ ಆಡ್‌ಫಾಲ್ಸಿವ್ಯಾಕ್ಸ್ ಎಂಬ ಲಸಿಕೆಯನ್ನು ಕಂಡು ಹಿಡಿದಿದೆ. ಹಾಗಾದರೆ ಈ ಲಸಿಕೆ ಹೇಗೆ ಕಾರ್ಯನಿರ್ವಹಿಸುತ್ತದೆ? ಇದರ ವಿಶೇಷತೆಗಳೇನು? ಎಲ್ಲಾ ಮಾಹಿತಿಯನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಲೇರಿಯಾ ಸೋಂಕನ್ನು ತಡೆಯಲು ಬಂತು ಮೊದಲ ಲಸಿಕೆ! ಮಹಾಮಾರಿ ರೋಗದ ವಿರುದ್ಧ ಮಹತ್ವದ ಹೆಜ್ಜೆ
Malaria Vaccine
ಪ್ರೀತಿ ಭಟ್​, ಗುಣವಂತೆ
|

Updated on: Jul 25, 2025 | 3:50 PM

Share

ಭಾರತದಲ್ಲಿ ಮಲೇರಿಯಾ (Malaria) ಒಂದು ಗಂಭೀರ ಕಾಯಿಲೆಯಾಗಿದ್ದು, ಪ್ರತಿ ವರ್ಷ ಲಕ್ಷಾಂತರ ಜನರನ್ನು ಬಾಧಿಸುತ್ತದೆ. ವಿಶೇಷವಾಗಿ ಮಳೆಗಾಲದಲ್ಲಿ ಸೊಳ್ಳೆಗಳ ಸಂಖ್ಯೆ ಹೆಚ್ಚಾದಾಗ, ಈ ರೋಗವು ಇನ್ನಷ್ಟು ಹರಡುತ್ತದೆ. ಆದರೆ ಈಗ ನಾವು ಈ ಮಹಾಮಾರಿಗೆ ಹೆದರುವ ಅವಶ್ಯಕತೆ ಇಲ್ಲ. ಏಕೆಂದರೆ ಭಾರತ ಈಗ ಮಲೇರಿಯಾ ವಿರುದ್ಧ ಮಹತ್ವದ ಹೆಜ್ಜೆ ಇಟ್ಟಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೇಶದ ಮೊದಲ ಮಲೇರಿಯಾ ಲಸಿಕೆ ‘ಆಡ್‌ಫಾಲ್ಸಿವಾಕ್ಸ್’ (AdFalciVax) ಅನ್ನು ಕಂಡು ಹಿಡಿದಿದೆ. ಈ ಲಸಿಕೆ ಮಲೇರಿಯಾ ಸೋಂಕುಗಳಲ್ಲಿ ಅತ್ಯಂತ ಮಾರಕ ಎಂದು ಪರಿಗಣಿಸಲಾಗಿರುವ ಪ್ಲಾಸ್ಮೋಡಿಯಂ ಫಾಲ್ಸಿಪ್ಯಾರಮ್ ಅನ್ನು ನಾಶಪಡಿಸುವ ಮೂಲಕ ಮಲೇರಿಯಾ ಬರದಂತೆ ತಡೆಯುತ್ತದೆ. ಹಾಗಾದರೆ ಈ ಲಸಿಕೆ ಹೇಗೆ ಕಾರ್ಯನಿರ್ವಹಿಸುತ್ತದೆ? ಇದರ ವಿಶೇಷತೆಗಳೇನು ತಿಳಿದುಕೊಳ್ಳಿ.

ಈ ಲಸಿಕೆ ಹೇಗೆ ಕಾರ್ಯ ನಿರ್ವಹಿಸುತ್ತದೆ?

ಆಡ್‌ಫಾಲ್ಸಿವಾಕ್ಸ್ (AdFalciVax) ಎಂಬುದು ಮಲೇರಿಯಾ ಸೋಂಕು ನಮ್ಮ ದೇಹವನ್ನು ಪ್ರವೇಶಿಸುವುದನ್ನು ತಡೆಯುವ ಲಸಿಕೆಯಾಗಿದೆ. ಹೆಚ್ಚುವರಿಯಾಗಿ, ಈ ಲಸಿಕೆಯು ನಮ್ಮ ದೇಹವನ್ನು ರಕ್ಷಿಸುವುದಲ್ಲದೆ ಮಲೇರಿಯಾ ಹರಡುವುದನ್ನು ತಪ್ಪಿಸುತ್ತದೆ. ಮಾತ್ರವಲ್ಲ ಮಲೇರಿಯಾ ಮತ್ತೆ ದೇಹವನ್ನು ಪ್ರವೇಶಿಸುವುದನ್ನು ತಡೆಯುವ ಒಂದು ರೀತಿಯ ರೋಗನಿರೋಧಕ ಶಕ್ತಿಯನ್ನು ದೇಹದಲ್ಲಿ ಸೃಷ್ಟಿಸಲು ಇದನ್ನು ವಿನ್ಯಾಸಗೊಳಿಸಲಾಗಿದೆ.

ಲಸಿಕೆಯ ವಿಶೇಷತೆಗಳು;

ಈ ಲಸಿಕೆಯನ್ನು ಸಂಪೂರ್ಣವಾಗಿ ಭಾರತದಲ್ಲಿಯೇ ತಯಾರಿಸಲಾಗಿದ್ದು ‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಒಂದು ಭಾಗವಾಗಿದೆ. ಇದರರ್ಥ ಭಾರತವು ಇನ್ನು ಮುಂದೆ ಮಲೇರಿಯಾ ಲಸಿಕೆಗಾಗಿ ವಿದೇಶಗಳನ್ನು ಅವಲಂಬಿಸುವುದಿಲ್ಲ ಬದಲಾಗಿ ನಮ್ಮ ದೇಶದಲ್ಲೇ ಅದನ್ನು ತಯಾರಿಸಿ ಎಷ್ಟು ಪ್ರಮಾಣದಲ್ಲಿ ಬೇಕಾದರೂ ಅದು ಲಭ್ಯವಿರುವಂತೆ ನೋಡಿಕೊಳ್ಳುತ್ತದೆ. ಆಡ್‌ಫಾಲ್ಸಿವಾಕ್ಸ್ ಲಸಿಕೆ ಭಾರತದಲ್ಲಿ ಮಲೇರಿಯಾ ತಡೆಗಟ್ಟುವಿಕೆ ಮತ್ತು ನಿರ್ಮೂಲನೆಗೆ ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದು ದೊಡ್ಡ ಪ್ರಮಾಣದಲ್ಲಿ ಯಶಸ್ವಿಯಾದರೆ, ಜಾಗತಿಕ ಮಟ್ಟದಲ್ಲಿ ಭಾರತದ ಪ್ರಮುಖ ವೈಜ್ಞಾನಿಕ ಸಾಧನೆ ಎಂದೇ ಪರಿಗಣಿಸಲಾಗುತ್ತದೆ. ಈ ಲಸಿಕೆಯ ಪೂರ್ವ- ಕ್ಲಿನಿಕಲ್ ಹಂತದ ಪರೀಕ್ಷೆ ಪೂರ್ಣಗೊಂಡಿದ್ದು ಸಕಾರಾತ್ಮಕ ಫಲಿತಾಂಶ ಕಂಡುಬಂದಿವೆ. ಇದನ್ನು ಈಗ ಮಾನವರ ಮೇಲಿನ ಪ್ರಯೋಗಗಳಿಗಾಗಿ ಕ್ಲಿನಿಕಲ್ ಹಂತಕ್ಕೆ ಸ್ಥಳಾಂತರಿಸಲಾಗುತ್ತಿದೆ. ಈ ಹಂತವು ಸುಮಾರು ಎರಡು ವರ್ಷಗಳ ಕಾಲ ಇರುತ್ತದೆ. ಯಶಸ್ವಿಯಾದರೆ, ಈ ಲಸಿಕೆ ದೇಶಾದ್ಯಂತ ಮಲೇರಿಯಾ ನಿರ್ಮೂಲನೆಗೆ ಒಂದು ಪ್ರಮುಖ ಅಸ್ತ್ರವಾಗಬಹುದು. ಐಸಿಎಂಆರ್ ಮತ್ತು ಇತರ ಆರೋಗ್ಯ ಸಂಸ್ಥೆಗಳು ಇದನ್ನು ಸಾಧ್ಯವಾದಷ್ಟು ಬೇಗ ಜನರಿಗೆ ಲಭ್ಯವಾಗುವಂತೆ ಮಾಡಲು ನಿರಂತರವಾಗಿ ಕೆಲಸ ಮಾಡುತ್ತಿವೆ.

ಇದನ್ನೂ ಓದಿ
Image
ಪ್ರತಿ ರಾತ್ರಿ ಎರಡು ಬೆಳ್ಳುಳ್ಳಿ ಎಸಳು ತಿಂದರೆ, ಈ ಎಲ್ಲಾ ಕಾಯಿಲೆಗಳು ಮಾಯ
Image
ನೆನೆಸಿಟ್ಟ ವಾಲ್ನಟ್ಸ್ ತಿನ್ನುವ ಅಭ್ಯಾಸ ನಿಮಗಿದ್ರೆ ಈ ಸ್ಟೋರಿ ಓದಿ
Image
ಪ್ರತಿನಿತ್ಯ  ಒಂದು ಲವಂಗ ಸೇವನೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತೆ!
Image
ಮೆದುಳು ಚುರುಕಾಗಿ ಕೆಲಸ ಮಾಡಲು ತಪ್ಪದೆ ಈ ಆಹಾರಗಳನ್ನು ಸೇವನೆ ಮಾಡಿ

ಇದನ್ನೂ ಓದಿ: ಬೆಂಗಳೂರು: ಹೆಚ್ಚಾಯ್ತು ಡೆಂಗ್ಯೂ, ಮನೆ ಬಳಿ ಸ್ವಚ್ಛತೆ ಕಾಪಾಡದಿದ್ದರೆ ಬೀಳಲಿದೆ ಭಾರೀ ಮೊತ್ತದ ದಂಡ

ಮಲೇರಿಯಾ ರೋಗವನ್ನು ನಿಯಂತ್ರಿಸುವುದು ಕಷ್ಟವಾಗುತ್ತಿರುವುದಕ್ಕೆ ಕಾರಣವೇನು?

ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ. ಜುಗಲ್ ಕಿಶೋರ್ ಅವರು ನೀಡಿರುವ ಮಾಹಿತಿ ಪ್ರಕಾರ, ಭಾರತದ ಅನೇಕ ಭಾಗಗಳಲ್ಲಿ, ಅದರಲ್ಲಿಯೂ ವಿಶೇಷವಾಗಿ ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ, ಮಲೇರಿಯಾ ಇನ್ನೂ ಅಪಾಯಕಾರಿ ಕಾಯಿಲೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದರೂ, ಪ್ರತಿ ವರ್ಷ ಸಾವಿರಾರು ಸಂಖ್ಯೆಯಲ್ಲಿ ಸಾವುಗಳು ಸಂಭವಿಸುತ್ತಿವೆ. ಪ್ಲಾಸ್ಮೋಡಿಯಂ ಫಾಲ್ಸಿಪ್ಯಾರಮ್ ವಿಧದ ಮಲೇರಿಯಾ ಅತ್ಯಂತ ತೀವ್ರವಾಗಿದ್ದು ರಕ್ತ ಕಣಗಳು ಮತ್ತು ಅಂಗಗಳನ್ನು ತ್ವರಿತವಾಗಿ ಹಾನಿಗೊಳಿಸುತ್ತದೆ. ಅದಕ್ಕಾಗಿಯೇ ಈ ನಿರ್ದಿಷ್ಟ ವಿಧದ ಮಲೇರಿಯಾಕ್ಕೆ ಲಸಿಕೆಯನ್ನು ಕಂಡು ಹಿಡಿದಿರುವುದು ಗಮನಾರ್ಹ ಸಾಧನೆ ಎಂದು ಪರಿಗಣಿಸಲಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!