AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅಜೀರ್ಣ ಸಮಸ್ಯೆಗಳಿಗೆ ನಿಜವಾದ ಕಾರಣವೇನು? ಯಾವ ರೀತಿ ತಡೆಗಟ್ಟಬಹುದು

ಅಜೀರ್ಣತೆ, ಗ್ಯಾಸ್, ಎದೆಯುರಿ ಸಮಸ್ಯೆಗಳಿಗೆ ಮುಖ್ಯ ಕಾರಣವೇನು ಎಂಬುದು ನಿಮಗೆ ತಿಳಿದಿದೆಯೇ? ಸಾಮಾನ್ಯವಾಗಿ ನಮ್ಮ ಅನಿಯಮಿತ ಆಹಾರ ಪದ್ಧತಿಯೇ ಇವುಗಳಿಗೆ ಕಾರಣವಾಗಿದೆ. ಕಟ್ಟುನಿಟ್ಟಾದ ನಿಯಮಗಳಿಗೆ ವಿರುದ್ಧವಾಗಿ ತಿನ್ನುವುದು ಈ ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ನೀವು ಎಣ್ಣೆ- ಮಸಾಲೆಯುಕ್ತ ಆಹಾರ, ಫಾಸ್ಟ್ ಫುಡ್ ಮತ್ತು ತಂಪು ಪಾನೀಯಗಳನ್ನು ಸೇವನೆ ಮಾಡಿದರೆ, ಜೀರ್ಣಕಾರಿ ಸಮಸ್ಯೆ ಅಷ್ಟು ಸುಲಭವಾಗಿ ಕಡಿಮೆಯಾಗುವುದಿಲ್ಲ ಬದಲಾಗಿ ಹೆಚ್ಚುತ್ತಾ ಹೋಗುತ್ತದೆ. ಅಜೀರ್ಣವನ್ನು ಕಡಿಮೆ ಮಾಡಿಕೊಳ್ಳಲು, ನೀವು ನಿಮ್ಮ ಆಹಾರ ಪದ್ಧತಿಯ ಜೊತೆಗೆ, ಜೀವನಶೈಲಿಯನ್ನು ಸಹ ಬದಲಾಯಿಸಿಕೊಳ್ಳಬೇಕು. ಅಜೀರ್ಣ ಸಮಸ್ಯೆಯನ್ನು ತಡೆಗಟ್ಟಲು ಕೆಲವು ಆಯುರ್ವೇದ ಸಲಹೆಗಳು ಇಲ್ಲಿವೆ. ನೀವು ಇವುಗಳನ್ನು ಅನುಸರಿಸಿ ಪರಿಹಾರ ಪಡೆದುಕೊಳ್ಳಿ.

Health Tips: ಅಜೀರ್ಣ ಸಮಸ್ಯೆಗಳಿಗೆ ನಿಜವಾದ ಕಾರಣವೇನು? ಯಾವ ರೀತಿ ತಡೆಗಟ್ಟಬಹುದು
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 02, 2024 | 3:33 PM

Share

ಹೊಟ್ಟೆ ಸರಿಯಾಗಿ ಇಲ್ಲದಿದ್ದರೆ, ಮನಸ್ಥಿತಿಯೂ ಸರಿ ಇರುವುದಿಲ್ಲ. ಜಠರಗರುಳಿನ ಅಸ್ವಸ್ಥತೆಗಳು ಹೆಚ್ಚಾಗಿ ಹೊಟ್ಟೆ ನೋವು, ಅಜೀರ್ಣ ಮತ್ತು ಮಲಬದ್ಧತೆಗೆ ಕಾರಣವಾಗುತ್ತವೆ. ಹಾಗಾದರೆ ಅಜೀರ್ಣತೆ, ಗ್ಯಾಸ್, ಎದೆಯುರಿ ಸಮಸ್ಯೆಗಳಿಗೆ ಮುಖ್ಯ ಕಾರಣವೇನು ಎಂಬುದು ನಿಮಗೆ ತಿಳಿದಿದೆಯೇ? ಸಾಮಾನ್ಯವಾಗಿ ನಮ್ಮ ಅನಿಯಮಿತ ಆಹಾರ ಪದ್ಧತಿಯೇ ಇವುಗಳಿಗೆ ಕಾರಣವಾಗಿದೆ. ಕಟ್ಟುನಿಟ್ಟಾದ ನಿಯಮಗಳಿಗೆ ವಿರುದ್ಧವಾಗಿ ತಿನ್ನುವುದು ಈ ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ನೀವು ಎಣ್ಣೆ- ಮಸಾಲೆಯುಕ್ತ ಆಹಾರ, ಫಾಸ್ಟ್ ಫುಡ್ ಮತ್ತು ತಂಪು ಪಾನೀಯಗಳನ್ನು ಸೇವನೆ ಮಾಡಿದರೆ, ಜೀರ್ಣಕಾರಿ ಸಮಸ್ಯೆ ಅಷ್ಟು ಸುಲಭವಾಗಿ ಕಡಿಮೆಯಾಗುವುದಿಲ್ಲ ಬದಲಾಗಿ ಹೆಚ್ಚುತ್ತಾ ಹೋಗುತ್ತದೆ. ಅಜೀರ್ಣವನ್ನು ಕಡಿಮೆ ಮಾಡಿಕೊಳ್ಳಲು, ನೀವು ನಿಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಬೇಕು. ಆದರೆ ಕೆಲವರಿಗೆ ಮನೆಯಲ್ಲಿ ತಯಾರಿಸಿದ ಆಹಾರ ಸೇವನೆ ಮಾಡಿದ ನಂತರವೂ ಅನೇಕ ರೀತಿಯ ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಾರೆ. ಆದ್ದರಿಂದ ಆಹಾರದ ಜೊತೆಗೆ, ಜೀವನಶೈಲಿಯನ್ನು ಸಹ ಬದಲಾಯಿಸಿಕೊಳ್ಳಬೇಕು. ಅಜೀರ್ಣ ಸಮಸ್ಯೆಯನ್ನು ತಡೆಗಟ್ಟಲು ಕೆಲವು ಆಯುರ್ವೇದ ಸಲಹೆಗಳು ಇಲ್ಲಿವೆ. ನೀವು ಇವುಗಳನ್ನು ಅನುಸರಿಸಿ ಪರಿಹಾರ ಪಡೆದುಕೊಳ್ಳಿ.

ಮಧ್ಯಾಹ್ನದ ನಂತರ ಫಾಸ್ಟ್ ಫುಡ್ ತಿನ್ನಬೇಡಿ

ಕೆಲವೊಮ್ಮೆ ನಿಮ್ಮ ಮುಂದೆ ರುಚಿಕರವಾದ, ಫಾಸ್ಟ್ ಫುಡ್ ಇದ್ದರೆ ಅದನ್ನು ತಿನ್ನದಿರಲು ಸಾಧ್ಯವಾಗುವುದಿಲ್ಲ. ಅದು ಪಿಜ್ಜಾ ಆಗಿರಲಿ ಅಥವಾ ಬಿರಿಯಾನಿಯೇ ಆಗಿರಲಿ ಇಂತಹ ಆಹಾರಗಳನ್ನು ಮಧ್ಯಾಹ್ನದ ಊಟದ ನಂತರ ತೆಗೆದುಕೊಳ್ಳಬಾರದು. ಮಧ್ಯಾಹ್ನ ಮತ್ತು ರಾತ್ರಿ ಸಮಯದಲ್ಲಿ ಇಂತಹ ಆಹಾರಗಳನ್ನು ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಹಾಗಾಗಿ ಕೊಬ್ಬು ಹೆಚ್ಚಾಗುತ್ತದೆ. ಹಾಗಾಗಿ ಇಂತಹ ಆಹಾರಗಳನ್ನು ಸೇವನೆ ಮಾಡುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು. ನೀವು ಈ ರೀತಿಯ ಅಭ್ಯಾಸಗಳನ್ನು ರೂಢಿಸಿಕೊಂಡರೆ ಸುಮಾರು ಅರ್ಧದಷ್ಟು ಜೀರ್ಣಕಾರಿ ಸಮಸ್ಯೆಗಳನ್ನು ತಪ್ಪಿಸಬಹುದು. ಜೊತೆಗೆ ನಿಮ್ಮ ತೂಕವೂ ಕೂಡ ನಿಯಂತ್ರಣದಲ್ಲಿರುತ್ತದೆ.

ಪ್ರತಿದಿನ ತಪ್ಪದೆ ನಡೆಯಿರಿ

ಸೋಮಾರಿತನವಿದ್ದಲ್ಲಿ ಜೀರ್ಣಕಾರಿ ಸಮಸ್ಯೆಗಳನ್ನು ತಡೆಗಟ್ಟಲು ಸಾಧ್ಯವಿಲ್ಲ. ಮಧ್ಯಾಹ್ನ ಅಥವಾ ರಾತ್ರಿ ಆಹಾರ ಸೇವನೆ ಮಾಡಿ ಮಲಗುವುದು ಉತ್ತಮ ಅಭ್ಯಾಸವಲ್ಲ. ಬದಲಿಗೆ, ಊಟದ ನಂತರ 30 ನಿಮಿಷಗಳ ಕಾಲ ನಡೆಯುವುದನ್ನು ಅಭ್ಯಾಸ ಮಾಡಿಕೊಳ್ಳಿ. ನೀವು ಈ ರೀತಿ ಮಾಡಿದರೆ, ಆಹಾರ ಬೇಗನೆ ಜೀರ್ಣವಾಗುತ್ತದೆ. ಇದರಿಂದ ಅನೇಕ ರೋಗಗಳು ಬರುವುದನ್ನು ಕೂಡ ತಡೆಗಟ್ಟಬಹುದು.

ಇದನ್ನೂ ಓದಿ: ಮಹಿಳೆಯರೇ ತುಪ್ಪದಲ್ಲಿ ಹುರಿದ ಖರ್ಜೂರ ಸೇವನೆ ಮಾಡಿ, ನಿಮ್ಮ ದೇಹದಲ್ಲಾಗುವ ಬದಲಾವಣೆ ನೋಡಿ

ಸಾಕಷ್ಟು ನಿದ್ರೆ ಮಾಡಿ

ಪ್ರತಿನಿತ್ಯವೂ ನಿದ್ರೆ ಸರಿಯಾಗಿ ಮಾಡದಿದ್ದರೆ, ಗ್ಯಾಸ್ ಮತ್ತು ಎದೆಯುರಿ ಸಮಸ್ಯೆಗಳು ಹೆಚ್ಚಾಗಬಹುದು. ಇದಲ್ಲದೆ, ಮಧುಮೇಹ, ಬೊಜ್ಜು ಮತ್ತು ಖಿನ್ನತೆಯ ಅಪಾಯವು ಹೆಚ್ಚಾಗುತ್ತದೆ. ರಾತ್ರಿ ಸಮಯದಲ್ಲಿ ಕನಿಷ್ಠ 7- 8 ಗಂಟೆಗಳ ನಿದ್ರೆ ಅತ್ಯಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!