AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infertility: ಬಂಜೆತನ ಸಮಸ್ಯೆಗೆ ಈ ಸರಳ ಮನೆಮದ್ದನ್ನು ಪ್ರಯತ್ನಿಸಿ

ಬಂಜೆತನ ಕೇವಲ ಮಹಿಳೆಯರ ಸಮಸ್ಯೆ ಅಲ್ಲ ಪುರುಷರಲ್ಲಿಯೂ ಕಾಡುತ್ತದೆ. ಅಸಮರ್ಪಕ ಆಹಾರ, ಜಡ ಜೀವನಶೈಲಿ, ಅತಿಯಾದ ಒತ್ತಡ ಸೇರಿದಂತೆ ಹಲವು ಕಾರಣಗಳು ಬಂಜೆತನ ಸಮಸ್ಯೆ ಹೆಚ್ಚಲು ಕಾರಣವಾಗುತ್ತಿದೆ. ಈ ಸಮಸ್ಯೆಯಿಂದಾಗಿ ಮಹಿಳೆಯರಲ್ಲಿ ಗರ್ಭ ಧರಿಸಲು ತೊಂದರೆ ಉಂಟಾಗುತ್ತಿದೆ. ಹಲವಾರು ದಂಪತಿ ಮಕ್ಕಳಿಲ್ಲದ ಕೊರಗನ್ನು ಅನುಭವಿಸುತ್ತಿದ್ದಾರೆ. ಆದರೆ ಬಂಜೆತನ ಸಮಸ್ಯೆ ತಪ್ಪಿಸಲು ಹಲವಾರು ರೀತಿಯ ಮನೆಮದ್ದುಗಳಿವೆ. ಇವುಗಳನ್ನು ಸರಿಯಾಗಿ ಪಾಲನೆ ಮಾಡಿದರೆ ನಿಮ್ಮ ಪ್ರಯತ್ನ ಮತ್ತು ದೈವ ನಿರ್ಣಯ ಒಂದೇ ಆಗಿದ್ದರೆ ಹಲವು ವರ್ಷಗಳಿಂದ ಮಕ್ಕಳಾಗಿಲ್ಲ ಎಂಬ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಹಾಗಾದರೆ ಇದಕ್ಕೆ ಯಾವ ರೀತಿಯ ಮನೆಮದ್ದು ಉತ್ತಮ? ಇಲ್ಲಿದೆ ಮಾಹಿತಿ.

Infertility: ಬಂಜೆತನ ಸಮಸ್ಯೆಗೆ ಈ ಸರಳ ಮನೆಮದ್ದನ್ನು ಪ್ರಯತ್ನಿಸಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 09, 2024 | 4:08 PM

Share

ಬಂಜೆತನ ಅಥವಾ ಸಂತಾನಹೀನತೆ ಇಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಇದು ಕೇವಲ ಮಹಿಳೆಯರ ಸಮಸ್ಯೆ ಅಲ್ಲ ಪುರುಷರಲ್ಲಿಯೂ ಕಾಡುತ್ತದೆ. ಅಸಮರ್ಪಕ ಆಹಾರ, ಜಡ ಜೀವನಶೈಲಿ, ಅತಿಯಾದ ಒತ್ತಡ ಸೇರಿದಂತೆ ಹಲವು ಕಾರಣಗಳು ಬಂಜೆತನ ಸಮಸ್ಯೆ ಹೆಚ್ಚಲು ಕಾರಣವಾಗುತ್ತಿದೆ. ಈ ಸಮಸ್ಯೆಯಿಂದಾಗಿ ಮಹಿಳೆಯರಲ್ಲಿ ಗರ್ಭ ಧರಿಸಲು ತೊಂದರೆ ಉಂಟಾಗುತ್ತಿದೆ. ಹಲವಾರು ದಂಪತಿ ಮಕ್ಕಳಿಲ್ಲದ ಕೊರಗನ್ನು ಅನುಭವಿಸುತ್ತಿದ್ದಾರೆ. ಆದರೆ ಬಂಜೆತನ ಸಮಸ್ಯೆ ತಪ್ಪಿಸಲು ಹಲವಾರು ರೀತಿಯ ಮನೆಮದ್ದುಗಳಿವೆ. ಇವುಗಳನ್ನು ಸರಿಯಾಗಿ ಪಾಲನೆ ಮಾಡಿದರೆ ನಿಮ್ಮ ಪ್ರಯತ್ನ ಮತ್ತು ದೈವ ನಿರ್ಣಯ ಒಂದೇ ಆಗಿದ್ದರೆ ಹಲವು ವರ್ಷಗಳಿಂದ ಮಕ್ಕಳಾಗಿಲ್ಲ ಎಂಬ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಹಾಗಾದರೆ ಇದಕ್ಕೆ ಯಾವ ರೀತಿಯ ಮನೆಮದ್ದು ಉತ್ತಮ? ಇಲ್ಲಿದೆ ಮಾಹಿತಿ.

ಬಂಜೆತನ ನಿವಾರಣೆಗೆ ಆಯುರ್ವೇದದಲ್ಲಿಯೂ ಕೆಲವು ಗಿಡಮೂಲಿಕೆಗಳನ್ನು ಸೂಚಿಸಲಾಗಿದೆ. ಇವುಗಳ ಸೇವನೆಯಿಂದ ಬಂಜೆತನಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಬಂಜೆತನ ನಿವಾರಣೆಗೆ ಅಶ್ವಗಂಧ ಬಹಳ ಮುಖ್ಯ ಎಂದು ಹೇಳಲಾಗುತ್ತದೆ. ಮಹಿಳೆಯರಲ್ಲಿ ಬಂಜೆತನ ಸಮಸ್ಯೆ ಕಾಡಲು ಹಲವಾರು ಕಾರಣಗಳಿರಬಹುದು. ಅದೆಷ್ಟೇ ಸಮಸ್ಯೆಗಳಿರಲಿ ಕೆಲವೊಮ್ಮೆ ನಿಮಗೆ ಮಕ್ಕಳಾಗಲು ಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿ ಇದ್ದರೂ ಕೂಡ ಅಶ್ವಗಂಧ ಸೇವನೆ ಮಾಡುವುದರಿಂದ ಬಂಜೆತನ ನಿವಾರಣೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಪುರುಷರಿಗೂ ಒಳ್ಳೆಯದು:

ಈ ಗಿಡಮೂಲಿಕೆ ಮಹಿಳೆಯರಿಗೆ ಮಾತ್ರವಲ್ಲ ಪುರುಷುರಲ್ಲಿನ ಬಂಜೆತನ ನಿವಾರಣೆಗೂ ಪ್ರಯೋಜನಕಾರಿಯಾಗಿದೆ. ಪುರುಷರು ಅಶ್ವಗಂಧ ಸೇವನೆ ಮಾಡುವುದರಿಂದ ಲೈಂಗಿಕಾಸಕ್ತಿ ಹೆಚ್ಚುತ್ತದೆ, ದೇಹದಲ್ಲಿ ಟೆಸ್ಟೋಸ್ಟೆರಾನ್‌ ಹಾರ್ಮೋನ್‌ ಮಟ್ಟ ಸುಧಾರಿಸುತ್ತದೆ. ಜೊತೆಗೆ ಫಲವಂತಿಕೆ ಹೆಚ್ಚಲು ಸಹಕಾರಿಯಾಗಿದೆ.

ಸೇವನೆ ಹೇಗೆ?

ಬಂಜೆತನ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ಅಶ್ವಗಂಧವನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಮೊದಲಿಗೆ ಚಿಕ್ಕದಾದ ಅಶ್ವಗಂಧದ ಬೇರನ್ನು ಚೆನ್ನಾಗಿ ಕುದಿಸಿಕೊಳ್ಳಿ ಬಳಿಕ ಹಸುವಿನ ಹಾಲಿನಲ್ಲಿ ಕುದಿಸಿರುವ ಕಷಾಯವನ್ನು ಮಿಶ್ರಣ ಮಾಡಿ. ತಪ್ಪದೇ ಬೆಳಗಿನ ಸಮಯದಲ್ಲಿ ಗಂಡ, ಹೆಂಡತಿ ಇಬ್ಬರೂ ಕುಡಿಯಿರಿ. ಅಥವಾ ಪ್ರತಿದಿನ ರಾತ್ರಿ ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ಹಾಲಿಗೆ 1 ಚಮಚ ಅಶ್ವಗಂಧ ಪುಡಿ, ಜೇನುತುಪ್ಪ ಹಾಗೂ ಚಿಟಿಕೆ ದಾಲ್ಚಿನ್ನಿ ಪುಡಿಯೊಂದಿಗೆ ಬೆರೆಸಿ ಕುಡಿಯಿರಿ. ಇದನ್ನು ಕೆಲವು ದಿನಗಳವರೆಗೆ ಸೇವಿಸುವುದರಿಂದ ಪುರುಷರು ಹಾಗೂ ಮಹಿಳೆಯರು ಇಬ್ಬರಿಗೂ ಸಾಕಷ್ಟು ಪ್ರಯೋಜನಗಳಿವೆ. ಈ ಮನೆಮದ್ದನ್ನು ಋತುಚಕ್ರದ 5ನೇ ದಿನದಿಂದ 15 ದಿನ ಕುಡಿಯಬೇಕು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?