AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ Influenza, SARI ಕೇಸ್​ಗಳು ಹೆಚ್ಚಳ!

ಕರ್ನಾಟಕದಲ್ಲಿ ಕೊರೋನಾ ವೈರಸ್‌ನ ಓಮಿಕ್ರಾನ್ ಉಪತಳಿ ಜೆಎನ್.1 ಹರಡುತ್ತಿದೆ. ಈ ಮಧ್ಯೆ ಜನವರಿಯಿಂದ 4536 ಸಾರಿ ಮತ್ತು ಇನ್ಫ್ಲುಯೆನ್ಜ್​​ ಪ್ರಕರಣಗಳು ಪತ್ತೆಯಾಗಿವೆ. ಕಳೆದ ವಾರ 154 ಸಾರಿ ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಇಲಾಖೆ ಜನರಿಗೆ ಜಾಗರೂಕರಾಗಿರಲು, ಮಾಸ್ಕ್ ಧರಿಸಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿದೆ. ಜ್ವರ, ಕೆಮ್ಮು, ಇತ್ಯಾದಿ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸುವಂತೆ ಸಲಹೆ ನೀಡಿದೆ.

ಕೊರೊನಾ ಮಧ್ಯೆ Influenza, SARI ಕೇಸ್​ಗಳು ಹೆಚ್ಚಳ!
ಸಾಂದರ್ಭಿಕ ಚಿತ್ರ
Vinay Kashappanavar
| Updated By: ವಿವೇಕ ಬಿರಾದಾರ|

Updated on: Jun 01, 2025 | 9:02 PM

Share

ಬೆಂಗಳೂರು, ಜೂನ್​ 01: ‌ವೈರಸ್ ಜೊತೆ ಬದುಕಲು ಕಲಿಯಬೇಕು ಎಂದು ಹೇಳುವ ವೈದ್ಯರ ಮಾತು ನಿಜವಾಗುತ್ತಿದೆ. ಎಡ್ಮೂರು ವರ್ಷಗಳ ಹಿಂದೆ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಕೊರೊನಾ ವೈರಸ್​ (Covid) ಮತ್ತೆ ಬಂದಿದೆ. ವೈರಲ್ ಫೀವರ್ ಹಾಗೂ ಸಾಂಕ್ರಾಮಿಕ ಖಾಯಿಲೆಗಳ ನಡುವೆ ರಾಜ್ಯದಲ್ಲಿ ಕೊರೊನಾ ಆತಂಕ ಶುರುವಾಗಿದೆ. ಕೊರೊನಾ ರೂಪಾಂತರ ಓಮಿಕ್ರಾನ್‌ನ ಉಪ ತಳಿಯಾದ ಜೆಎನ್.1 ವೈರಸ್​ ರಾಜ್ಯಕ್ಕೆ ವಕ್ಕರಿಸಿದೆ. ಈ ನಡುವೆ ರಾಜ್ಯದಲ್ಲಿ ಜನವರಿಯಿಂದ ಈವರೆಗೆ 4536 ಸಾರಿ (SARI) ಹಾಗೂ ಇನ್ಫ್ಲುಯೆನ್ಜ್​ (Influenza) ಪ್ರಕರಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳ ನಿದ್ದೆ ಕೆಡಿಸಿದೆ.

ಕಳೆದ ಒಂದು ವಾರದ ಹಿಂದೆ 154 ಸಾರಿ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಾರಿ ಪ್ರಕರಣಗಳ ಸಂಖ್ಯೆ 3357ಕ್ಕೆ ಏರಿಕೆಯಾಗಿದೆ. ಕಳೆದ ವಾರ 12 ಇನ್ಫ್ಲುಯೆನ್ಜ್​ ಪ್ರಕರಣಗಳು ಪತ್ತೆಯಾಗಿದ್ದವು. ದಿನದಿಂದ ದಿನಕ್ಕೆ ಸಾರಿ ಹಾಗೂ ಇನ್ಫ್ಲುಯೆನ್ಜ್​ ಪ್ರಕರಣಗಳು ಏರಿಕೆಯಾಗುತ್ತಿರುವುದು ಆರೋಗ್ಯ ಇಲಾಖೆಯ ಆತಂಕಕ್ಕೆ ಕಾರಣವಾಗಿದೆ. ಸಾರಿ, ಇನ್ಫ್ಲುಯೆನ್ಜ್ ವೈರಸ್​ ಕೊರೊನಾ​ ಬರಲು ಕಾರಣವಾಗುತ್ತಿದ್ದು, ಆರೋಗ್ಯ ಇಲಾಖೆ ಈ ರೋಗ ಗುಣಲಕ್ಷಣ ಹೊಂದಿದವರ ಮೇಲೆ ಹೆಚ್ಚು ಗಮನ ಇರಿಸಿದೆ. ಸಾರಿ ಗುಣಲಕ್ಷಣ ಹೊಂದಿರುವವರಿಗೆ ಕೋವಿಡ್​ ತಪಾಸಣೆ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಆರೋಗ್ಯ ಇಲಾಖೆಯಿಂದ ಸೂಚನೆ

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಕೆಲವು ಸೂಚನೆಗಳನ್ನು ನೀಡಿದೆ. ಜನರು ಆತಂಕ ಪಡಬಾರದು, ಜಾಗರೂಕರಾಗಿ ಇರಬೇಕು. ವಿದೇಶದಿಂದ ಬರುವ ಪ್ರಯಾಣಿಕರ ಮಾಹಿತಿಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿ. ಜನದಟ್ಟಣೆ ಸ್ಥಳದಲ್ಲಿ ಮಾಸ್ಕ್ ಧರಿಸಬೇಕು. ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಗುಣಲಕ್ಷಣಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ. ⁠ರ‍್ಯಾಂಡಮ್​ ಪರೀಕ್ಷೆಗೆ ಸಹಕರಿಸಬೇಕು. ಗುಣಲಕ್ಷಣಗಳಿರುವ ಮಕ್ಕಳನ್ನು ಮನೆಯಲ್ಲೇ ಇರಿಸಿಕೊಳ್ಳಿ ಎಂದು ಸೂಚನೆ ನೀಡಿದೆ. ಸ್ವಚ್ಛತೆ ಹಾಗೂ ನೈರ್ಮಲ್ಯತೆ ಕಾಪಾಡಿ. ಕೊರೊನಾ ಸಹಾಯವಾಣಿಯನ್ನು ತುರ್ತು ಪರಿಸ್ಥಿತಿಯಲ್ಲಿ ಬಳಸಿಕೊಳ್ಳಿ ಎಂದು ಸೂಚನೆ ನೀಡಿದೆ.

ಇದನ್ನೂ ಓದಿ
Image
ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್​ ಕಡ್ಡಾಯಗೊಳಿಸಿದ ಕೇಂದ್ರ
Image
ಬೆಂಗಳೂರಲ್ಲಿ 200 ರ ಗಡಿ ದಾಟಿದ ಕೊರೊನಾ ಪ್ರಕರಣ: ರಾಜಧಾನಿಯೇ ಹಾಟ್​ಸ್ಪಾಟ್
Image
ಕೊರೊನಾ ಹೊಸ ರೂಪಾಂತರ ಎಷ್ಟು ಅಪಾಯಕಾರಿ?
Image
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋವಿಡ್ ಆರ್​ಟಿಪಿಸಿಆರ್ ಲ್ಯಾಬ್ ಪುನರಾರಂಭ

ಇದನ್ನೂ ಓದಿ: ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಮುಖ ಸೂಚನೆ

ವೈದ್ಯರಿಂದ ಸಲಹೆ

ಜನರು ಜ್ವರ, ಕೆಮ್ಮು, ಸುಸ್ತು, ಮೂಗು ಕಟ್ಟುವಿಕೆ, ಸ್ರವಿಸುವ ಮೂಗು, ಅತಿಸಾರ ಮತ್ತು ತಲೆನೋವು, ಉಸಿರಾಟದ ತೊಂದರೆ, ಆಯಾಸ, ತಲೆನೋವು, ಗಂಟಲು ನೋವು ಗುಣಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷ್ಯ ಬೇಡ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ