AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸೇವನೆ ಮಾಡಿದ ಮೇಲೆ ನಶೆ ಹೇಗೆ ಏರುತ್ತದೆ ಎಂಬುದು ತಿಳಿದಿದೆಯಾ!

ಮದ್ಯ ತಯಾರಕರಿಂದ ಹಿಡಿದು ಕುಡಿಯುವರಿಗೆ ಎಲ್ಲರಿಗೂ ಮದ್ಯಪಾನ ಮಾಡುವುದು ಆರೋಗ್ಯಕ್ಕೆ ಮಾರಕ ಎಂಬುದು ಸ್ಪಷ್ಟವಾಗಿ ತಿಳಿದಿರುವ ಸತ್ಯ. ಆದರೂ ಇದರ ವ್ಯಸನಿಗಳಿಗೆ ಇದನ್ನು ತ್ಯಜಿಸಲು ಸಾಧ್ಯವಾಗುವುದಿಲ್ಲ. ಮದ್ಯ ಹೊಟ್ಟೆಗಿಳಿದರೆ ಜನ ಲೋಕವನ್ನೇ ಮರೆತು ಬಿಡುತ್ತಾರೆ. ಆದರೆ ನೀವು ಎಂದಾದರೂ ಯೋಚಿಸಿದ್ದೀರಾ? ಮದ್ಯ ಸೇವನೆ ಮಾಡಿದ ಮೇಲೆ ನಶೆ ಹೇಗೆ ಏರುತ್ತದೆ? ಆತ ಮದ್ಯ ಸೇವನೆ ಮಾಡಿದ ಮೇಲೆ ಅಷ್ಟು ಸಂತೋಷದಿಂದ ಇರಲು ಹೇಗೆ ಸಾಧ್ಯ? ಇವು ಸಹಜ ವಿಷಯ ಎನಿಸಿದರೂ ಕೂಡ, ಮದ್ಯ ಸೇವನೆಯಿಂದ ನಶೆ ಹೇಗೆ ಏರುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು. ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

ಮದ್ಯ ಸೇವನೆ ಮಾಡಿದ ಮೇಲೆ ನಶೆ ಹೇಗೆ ಏರುತ್ತದೆ ಎಂಬುದು ತಿಳಿದಿದೆಯಾ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 13, 2024 | 5:42 PM

Share

ಮದ್ಯಪಾನ ಆರೋಗ್ಯಕ್ಕೆ ಮಾರಕ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲಿಯೂ ಮದ್ಯ ತಯಾರಕರಿಂದ ಹಿಡಿದು ಕುಡಿಯುವವರಿಗೆ ಎಲ್ಲರಿಗೂ ಇದು ಸ್ಪಷ್ಟವಾಗಿ ತಿಳಿದಿರುವ ಸತ್ಯ. ಆದರೂ ಇದರ ವ್ಯಸನಿಗಳಿಗೆ ಇದನ್ನು ತ್ಯಜಿಸಲು ಸಾಧ್ಯವಾಗುವುದಿಲ್ಲ. ಮದ್ಯ ಹೊಟ್ಟೆಗಿಳಿದರೆ ಜನ ಲೋಕವನ್ನೇ ಮರೆತು ಬಿಡುತ್ತಾರೆ. ಆದರೆ ನೀವು ಎಂದಾದರೂ ಯೋಚಿಸಿದ್ದೀರಾ? ಮದ್ಯ ಸೇವನೆ ಮಾಡಿದ ಮೇಲೆ ನಶೆ ಹೇಗೆ ಏರುತ್ತದೆ? ಆತ ಮದ್ಯ ಸೇವನೆ ಮಾಡಿದ ಮೇಲೆ ಅಷ್ಟು ಸಂತೋಷದಿಂದ ಇರಲು ಹೇಗೆ ಸಾಧ್ಯ? ಇವು ಸಹಜ ವಿಷಯ ಎನಿಸಿದರೂ ಕೂಡ, ಮದ್ಯ ಸೇವನೆಯಿಂದ ನಶೆ ಹೇಗೆ ಏರುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು. ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

ಒಬ್ಬ ವ್ಯಕ್ತಿ ಎಣ್ಣೆ ಕುಡಿದಾಗ ಅದು ಆತನ ಗಂಟಿಲಿನ ಮೂಲಕ ಹೊಟ್ಟೆಗೆ ಹಾದು ಹೋಗುತ್ತದೆ. ಬಳಿಕ ಹೊಟ್ಟೆಯಿಂದ 20% ಆಲ್ಕೋಹಾಲ್ ರಕ್ತದೊಳಗೆ ಬೆರೆಯುತ್ತದೆ. ಇದು ರಕ್ತದಲ್ಲಿ ಬೆರೆತು ಯಕೃತ್ತಿನೊಳಗೆ ಹೋಗುತ್ತದೆ. ಆಗ ನಮ್ಮ ಯಕೃತ್ತು ಇದನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡುತ್ತದೆ. ಮೊದಲ ಹಂತದಲ್ಲಿ ಆಲ್ಕೋಹಾಲ್ ನಲ್ಲಿ ಇರುವ, ಎಡಿಹೆಚ್ ಏನ್ಜಯಂ ಎಣ್ಣೆಯನ್ನು ವಿಷಕಾರಿ ಮಾಡುತ್ತದೆ. ಆದರೆ ಯಕೃತ್ತಿನ ಎಲ್ ಡಿಹೆಚ್ ಏನ್ಜಯಂ ಈ ಆಲ್ಕೋಹಾಲ್ ರಕ್ತಕ್ಕೆ ಕಡಿಮೆ ಅಪಾಯಕಾರಿಯಾಗುವಂತೆ ಮಾಡುತ್ತದೆ. ನಂತರ ಈ ಎಣ್ಣೆ ರಕ್ತದಲ್ಲಿ ಬೆರೆತು ನ್ಯೂರಾನ್ ತಲುಪುತ್ತದೆ. ಈ ರೀತಿಯಾದಾಗ ಮೆದುಳಿನ ನ್ಯೂರಾನ್ ಗಳು ಡೊಪಾಮೈನ್ ಗಳನ್ನು ಬಿಡುಗಡೆ ಮಾಡಲು ಆರಂಭಿಸುತ್ತದೆ. ಇದರಿಂದ ವ್ಯಕ್ತಿಗೆ ತುಂಬಾ ಖುಷಿಯಾಗುವುದಲ್ಲದೆ ನಶೆ ಏರಿದಂತೆ ಆಗುತ್ತದೆ.

ಇದನ್ನೂ ಓದಿ: ದೃಷ್ಟಿ ಸಮಸ್ಯೆ ಹೆಚ್ಚಾಗುತ್ತಿದ್ದರೆ ಈ ರೋಗದ ಲಕ್ಷಣ ಆಗಿರಬಹುದು ಎಚ್ಚರ!

ಮದ್ಯ ನಮ್ಮ ಜೀರ್ಣಾಂಗಗಳಲ್ಲಿ ಜೀರ್ಣವಾಗದೇ ನೇರವಾಗಿ ಕರುಳುಗಳಿಂದ ರಕ್ತಕ್ಕೆ ಹೀರಲ್ಪಡುತ್ತದೆ. ಸುಲಭವಾಗಿ ಹೇಳಬೇಕೆಂದರೆ ಒಂದು ಇಂಜೆಕ್ಷನ್ ಮೂಲಕ ನರಕ್ಕೆ ಮದ್ಯವನ್ನು ಸೇರಿಸಿದ ಹಾಗೆಯೇ ಈ ಪ್ರಕ್ರಿಯೆ ಇರುತ್ತದೆ. ಇದು ಮೆದುಳಿಗೆ ತಲುಪಿದ ಬಳಿಕ ಮೆದುಳಿನ ಕಾರ್ಯಕ್ಷಮತೆ ತಾತ್ಕಾಲಿಕವಾಗಿ ಕಡಿಮೆಯಾಗುತ್ತದೆ ಹಾಗೂ ದೇಹದ ಚಟುವಟಿಕೆಯ ಮೇಲಿನ ಹತೋಟಿಯೂ ಕಡಿಮೆಯಾಗುತ್ತದೆ. ಇದನ್ನೇ ಅಮಲು ಎನ್ನುತ್ತಾರೆ. ಈ ರೀತಿ ಆಗುವುದನ್ನು ವ್ಯಸನಿಗಳು ಮದ್ಯಕ್ಕೆ ನೋವನ್ನು ಮರೆಸುವ ಶಕ್ತಿ ಇದೆ ಎಂದು ನಂಬುತ್ತಾರೆ. ಆದರೆ ಆ ನಶೆ ಅಥವಾ ಅಮಲಿನಿಂದಾಗಿ ಮೆದುಳು ಯೋಚಿಸುವ ಕ್ಷಮತೆಯನ್ನು ಕಳೆದು ಕೊಂಡಿರುವುದರಿಂದ ಜನರು ತಮ್ಮ ವಿವೇಕವನ್ನೇ ಕಳೆದುಕೊಂಡಿರುತ್ತಾರೆ ಅಷ್ಟೇ. ಅದರ ಹೊರತು ಮದ್ಯಕ್ಕೆ ಯಾವ ರೀತಿಯ ಶಕ್ತಿಯೂ ಇರುವುದಿಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?