AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Nurses Day 2025: ದಾದಿಯರು ದೇವರಿದ್ದಂತೆ; ದಾದಿಯರ ದಿನದ ಇತಿಹಾಸ, ಮಹತ್ವ ತಿಳಿಯಿರಿ

ಪ್ರಪಂಚದಾದ್ಯಂತ ಕಾಯಿಲೆಯಿಂದ ಬಳಲುತ್ತಿರುವ ಜನರ ಉಪಚಾರ, ಆರೈಕೆ ಯೋಗಕ್ಷೇಮದಲ್ಲಿ ದಾದಿಯರ ಅಂದರೆ ನರ್ಸ್‌ಗಳ ಪಾತ್ರ ಅಪಾರ. ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಹಗಳಿರುಲೆನ್ನದೆ ಆರೈಕೆ ಮಾಡುವ ದಾದಿಯರನ್ನು ಎಷ್ಟು ಶ್ಲಾಘಿಸಿದರೂ ಕಮ್ಮಿಯೇ. ಇವರ ಸೇವೆ, ಪರಿಶ್ರಮಕ್ಕೆ ಗೌರವ ಸಲ್ಲಿಸಲೆಂದೇ ಪ್ರತಿವರ್ಷ ಮೇ 12 ರಂದು ಅಂತಾರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವ ಏನೆಂಬುದನ್ನು ತಿಳಿಯೋಣ ಬನ್ನಿ.

International Nurses Day 2025: ದಾದಿಯರು ದೇವರಿದ್ದಂತೆ; ದಾದಿಯರ ದಿನದ ಇತಿಹಾಸ, ಮಹತ್ವ ತಿಳಿಯಿರಿ
ಸಾಂದರ್ಭಿಕ ಚಿತ್ರImage Credit source: Getty Images
ಮಾಲಾಶ್ರೀ ಅಂಚನ್​
|

Updated on: May 11, 2025 | 8:05 PM

Share

ವೈದ್ಯರು (Doctors) ಮಾತ್ರವಲ್ಲ ದಾದಿಯರು (Nurses) ಕೂಡ ಜನರ ಪಾಲಿಗೆ ದೇವರಿದ್ದಂತೆ. ಹೌದು ವೈದ್ಯರಂತೆ ನರ್ಸ್‌ಗಳು ಕೂಡಾ ಅತ್ಯಂತ ನಿಷ್ಠೆಯಿಂದ ಪ್ರಾಮಾಣಿಕವಾಗಿ ಜೀವ ರಕ್ಷಣೆ ಮಾಡುವ ಕೆಲಸ ಹಾಗೂ ರೋಗಿಗಳನ್ನು ಹಗಲಿರುಳೆನ್ನದೆ ಆರೈಕೆ ಮಾಡುವ, ಉಪಚಾರ ಮಾಡುವ ಸೇವೆಯನ್ನು ಮಾಡುತ್ತಿದ್ದಾರೆ. ಅಷ್ಟೇ ಯಾಕೆ ವೈದ್ಯರಿಗಿಂತ ಮೊದಲು ರೋಗಿಗಳನ್ನು ಉಪಚರಿಸುವವರು ದಾದಿಯರೇ.  ಅದರಲ್ಲೂ ಕೊರೋನಾ ಸಂದರ್ಭದಲ್ಲಿ ತಮ್ಮ ಜೀವದ ಹಂಗನ್ನೇ ತೊರೆದು ಜನರ ಸೇವೆಯನ್ನು ಮಾಡಿದ್ದಾರೆ. ಜಗತ್ತಿನೆಲ್ಲೆಡೆ ಜನರ ಪುನರ್ವಸತಿ ಮತ್ತು ಯೋಗಕ್ಷೇಮಕ್ಕಾಗಿ ದಾದಿಯರು ಪ್ರತಿನಿತ್ಯ ದುಡಿಯುತ್ತಿದ್ದಾರೆ. ಒಟ್ಟಾರೆಯಾಗಿ ದಾದಿಯರು ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು ಎಂದರೆ ತಪ್ಪಾಗಲಾರದು. ಸಮಾಜದ ಆರೋಗ್ಯ ರಕ್ಷಣೆಗಾಗಿ ದುಡಿಯುವ, ಸೇವೆ ಸಲ್ಲಿಸುವ ದಾದಿಯರಿಗೆ ಹಾಗೂ ಅವರ ಸೇವೆಗೆ ಗೌರ ಸಲ್ಲಿಸಲು ಪ್ರತಿ ವರ್ಷ ಮೇ 12 ರಂದು ಅಂತಾರಾಷ್ಟ್ರೀಯ ದಾದಿಯರ (International Nurses Day) ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವ ಏನೆಂಬುದನ್ನು ತಿಳಿಯೋಣ ಬನ್ನಿ.

ದಾದಿಯರ ದಿನವನ್ನು ಮೇ 12 ರಂದೇ ಏಕೆ ಆಚರಿಸಲಾಗುತ್ತದೆ?

ಪ್ರತಿ ವರ್ಷ ಮೇ 12 ರಂದೇ  ಅಂತಾರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತದೆ. 1820 ರ ಮೇ 12 ರಂದು  ಆಧುನಿಕ ನರ್ಸಿಂಗ್‌ನ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಜನಿಸಿದರು. ಇವರ ಜನ್ಮ ದಿನದ ಸವಿ ನೆನಪಿಗಾಗಿಯೇ 1974 ರಲ್ಲಿ ಅಂತಾರಾಷ್ಟ್ರೀಯ ದಾದಿಯರ ಮಂಡಳಿಯು ದಾದಿಯರ ದಿನವನ್ನು ಆಚರಿಸಲು ಪ್ರಾರಂಭಿಸಿತು.

ಅಮೆರಿಕದ ಆರೋಗ್ಯ, ಶಿಕ್ಷಣ ಮತ್ತು ಕಲ್ಯಾಣ ಇಲಾಖೆಯ ಅಧಿಕಾ ಡೊರೊಥಿ ಸದರ್ಲ್ಯಾಂಡ್‌ ಈ ದಿನವನ್ನು ಆಚರಿಸುವ ಕಲ್ಪನೆಯನ್ನು ಬಹು ಹಿಂದೆಯೇ ಪ್ರಸ್ತಾಪಿಸಿದ್ದರು. ನಂತರ 1974 ರಲ್ಲಿ ಸಮಾಜ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದಾದಿಯರ ಕೊಡುಗೆಯನ್ನು ಸ್ಮರಿಸಲು, ಈ ವೃತ್ತಿಯನ್ನು ಉತ್ತೇಜಿಸಲು ಮತ್ತು ದಾದಿಯರನ್ನು ಗೌರವಿಸಲು ಇಂಟರ್‌ನ್ಯಾಶನಲ್‌ ಕೌನ್ಸಿಲ್‌ ಆಫ್‌ ನರ್ಸಸ್‌ ಮಂಡಳಿ ಈ ದಿನವನ್ನು ಆಚರಿಸಲು ಪ್ರಾರಂಭಿಸಿತು. ಅಂದಿನಿಂದ ಪ್ರತಿವರ್ಷ ಅಂತಾರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ
Image
ಬೆಲ್ಲದ ಅನ್ನ ಸೇವನೆ ಮಾಡಿದರೆ ಈ ಕಾಯಿಲೆ ಹತ್ತಿರವೂ ಬರಲ್ಲ
Image
ಫಸ್ಟ್ ನೈಟ್ ನಲ್ಲಿ ಮಲ್ಲಿಗೆ ಇಡುವುದು ಇದೆ ಕಾರಣಕ್ಕೆ!
Image
ಸ್ಲಿಮ್ ಆ್ಯಂಡ್ ಫಿಟ್ ಆಗಿರಲು ಜಪಾನಿಯರ ಈ ಆರೋಗ್ಯಕರ ಅಭ್ಯಾಸಗಳನ್ನು ಪಾಲಿಸಿ
Image
ಪ್ರತಿದಿನ ನೀವು ಮಾಡುವ ಈ ತಪ್ಪುಗಳೇ ರಾತ್ರಿ ನಿದ್ರೆಯನ್ನು ಹಾಳುಮಾಡುತ್ತೆ

ಇದನ್ನೂ ಓದಿ: ಆರಂಭಿಕ ಹಂತದಲ್ಲಿರುವ ಅಂಡಾಶಯದ ಕ್ಯಾನ್ಸರ್ ಗುರುತಿಸುವುದು ಹೇಗೆ?

ಅಂತಾರಾಷ್ಟ್ರೀಯ ದಾದಿಯರ ದಿನದ ಮಹತ್ವ:

ಅಂತಾರಾಷ್ಟ್ರೀಯ ದಾದಿಯರ ದಿನವು ಸಮಾಜದಲ್ಲಿ ದಾದಿಯರ ಮಹತ್ವ ಮತ್ತು ಜನರ ಅಂದರೆ ರೋಗಿಗಳ ಜೀವನದಲ್ಲಿ ಬದಲಾವಣೆ, ಹೊಸ ಬೆಳಕು ತರುವಲ್ಲಿ ದಾದಿಯರ ಪಾತ್ರದ ಬಗ್ಗೆ ತಿಳಿಸುತ್ತದೆ. ಅಲ್ಲದೆ ಈ ದಿನ ದಾದಿಯರ ಪ್ರಯತ್ನಗಳು ಮತ್ತು ಕೊಡುಗೆಗಳನ್ನು ಗೌರವಿಸುವ ಸಂದರ್ಭ ಮಾತ್ರವಲ್ಲ, ಇದು ಶುಶ್ರೂಷಾ ವೃತ್ತಿಯ ಮಹತ್ವವನ್ನು ಉತ್ತೇಜಿಸುವ ದಿನವಾಗಿದೆ. ಜೊತೆಗೆ ಈ ದಿನದ ಮೂಲಕ ದಾದಿಯರ ಕಠಿಣ ಪರಿಶ್ರಮ, ಸೇವೆ, ಸಮರ್ಪಣೆಗೆ ಧನ್ಯವಾದ ತಿಳಿಸಬಹದು.

ಈ ವಿಶೇಷ ದಿನ ಪ್ರಪಂಚದಾದ್ಯಂತ ಆಸ್ಪತ್ರೆಗಳು ಮತ್ತು ಆರೋಗ್ಯ ಸಂಸ್ಥೆಗಳು ದಾದಿಯರನ್ನು ಅಥವಾ ನರ್ಸಿಂಗ್‌ ವೃತ್ತಿಪರರನ್ನು ಗೌರವಿಸಲು ಹಲವಾರು ಸನ್ಮಾನ ಕಾರ್ಯಕ್ರಮಗಳು, ಸೆಮಿನಾರ್‌ಗಳು, ಅಭಿಯಾನಗಳನ್ನು ಆಯೋಜಿಸುತ್ತವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ