AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Stammering Awareness Day 2024: ತೊದಲುವಿಕೆ ಸಮಸ್ಯೆಗೆ ಈ ಚಿಕಿತ್ಸೆಯಲ್ಲಿದೆ ಪರಿಹಾರ

ಪ್ರಪಂಚದಾದ್ಯಂತ ಸುಮಾರು 1.5% ಜನರು ತೊದಲುವಿಕೆಯಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸಮಾಜವು ಅಂತಹ ಜನರನ್ನು ನೋಡುವ ರೀತಿಯೇ ಭಿನ್ನವಾಗಿರುವ ಕಾರಣ ಅವರು ಅನೇಕ ರೀತಿಯ ಮಾನಸಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ತೊದಲುವಿಕೆ ಎಂಬುದು ಮಾತಿಗೆ ಸಂಬಂಧಿತ ಅಸ್ವಸ್ಥತೆಯಾಗಿದ್ದು, ಈ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಅಕ್ಟೋಬರ್ 22 ರಂದು ಅಂತಾರಾಷ್ಟ್ರೀಯ ತೊದಲುವಿಕೆ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಣೆ ಯಾವಾಗದಿಂದ ಪ್ರಾರಂಭವಾಯಿತು ಎನ್ನುವುದರ ಮಾಹಿತಿ ಇಲ್ಲಿದೆ.

International Stammering Awareness Day 2024: ತೊದಲುವಿಕೆ ಸಮಸ್ಯೆಗೆ ಈ ಚಿಕಿತ್ಸೆಯಲ್ಲಿದೆ ಪರಿಹಾರ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 22, 2024 | 9:52 AM

Share

ಸಣ್ಣ ಮಕ್ಕಳು ತೊದಲು ಮಾತನಾಡುವುದನ್ನು ಕೇಳುವುದೇ ಕಿವಿಗೆ ಇಂಪು. ಅದೇ ದೊಡ್ಡವರೇನಾದರೂ ಮಾತಿನ ನಡುವೆ ತೊದಲುತ್ತಿದ್ದರೆ ಗೇಲಿ ಮಾಡುವವರೇ ಹೆಚ್ಚು. ಈ ತೊದಲುವಿಕೆ ಎಂದು ಕರೆಯಲಾಗುವ ಮಾತಿನ ಉಗ್ಗು, ಬಾಲ್ಯದಲ್ಲಿಯೇ ಅಂಟಿಕೊಳ್ಳುವ ಒಂದು ಅಸ್ವಸ್ಥತೆಯಾಗಿದೆ. ಇದು ಮಕ್ಕಳ ಭಾವನೆಗಳ ಸರಾಗ ಹರಿವಿಗೆ ಸಮಸ್ಯೆ ಉಂಟುಮಾಡುತ್ತದೆ. ಮಕ್ಕಳು ಬೆಳೆಯುತ್ತ ಹೋದಂತೆ ಮಾತಿನ ನಡುವೆ ತೊದಲುತ್ತಿದ್ದರೆ ಪೋಷಕರು ಇದನ್ನು ತಿದ್ದುವ ಪ್ರಯತ್ನ ಅಥವಾ ಸರಿಯಾದ ಚಿಕಿತ್ಸೆ ಕೊಡಿಸುವುದು ಬಹಳ ಮುಖ್ಯ. ಇದೇ ಅಭ್ಯಾಸವಾಗಿ ಬಿಟ್ಟರೆ ಆ ಮಕ್ಕಳು ಬೆಳೆದು ದೊಡ್ಡವರಾದ ಮೇಲೆ ಸಾಕಷ್ಟು ಅವಮಾನಗಳನ್ನು ಅನುಭವಿಸುವ ಸಾಧ್ಯತೆಯೇ ಹೆಚ್ಚು. ಸಮಾಜವು ಆ ವ್ಯಕ್ತಿಗಳು ಮಾತನಾಡುವ ರೀತಿಗೆ ತಮಾಷೆ ಮಾಡಬಹುದು, ಇದು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ತೊದಲುವಿಕೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಕ್ಟೋಬರ್ 22 ರಂದು ಅಂತಾರಾಷ್ಟ್ರೀಯ ತೊದಲುವಿಕೆ ಜಾಗೃತಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಅಂತಾರಾಷ್ಟ್ರೀಯ ತೊದಲುವಿಕೆ ಜಾಗೃತಿ ದಿನದ ಇತಿಹಾಸ

ಅಂತಾರಾಷ್ಟ್ರೀಯ ತೊದಲುವಿಕೆ ಜಾಗೃತಿ ದಿನವನ್ನು ಆಚರಣೆಯೂ 1998 ರಲ್ಲಿ ಪ್ರಾರಂಭವಾಯಿತು. ಇಂಟರ್ನ್ಯಾಷನಲ್ ಸ್ಟಟರಿಂಗ್ ಅಸೋಸಿಯೇಷನ್, ಇಂಟರ್ನ್ಯಾಷನಲ್ ಫ್ಲೂಯೆನ್ಸಿ ಅಸೋಸಿಯೇಷನ್ ​​​​ಮತ್ತು ಯುರೋಪಿಯನ್ ಲೀಗ್ ಆಫ್ ಸ್ಟಟರಿಂಗ್ ಅಸೋಸಿಯೇಷನ್ಸ್ ಈ ಸಮಸ್ಯೆಯನ್ನು ಗಂಭೀರ ಸಾಮಾಜಿಕ ಕಾಳಜಿಯ ಸಮಸ್ಯೆ ಎಂದು ಕರೆಯಲಾಯಿತು. ಆ ಸಮಯದಲ್ಲಿ ತೊದಲುವಿಕೆಯ ಸಮಸ್ಯೆಯಿಂದ ಬಳಲುತ್ತಿರುವವರು ಸಾಕಷ್ಟು ಕಿರುಕುಳ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ತೊದಲುವಿಕೆ ಜಾಗೃತಿ ದಿನವನ್ನು ಜಾಗತಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದಿನಿಂದ ಪ್ರತಿ ವರ್ಷ ಅಕ್ಟೋಬರ್ 22 ರಂದು ಅಂತಾರಾಷ್ಟ್ರೀಯ ತೊದಲುವಿಕೆ ಜಾಗೃತಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಅಂತಾರಾಷ್ಟ್ರೀಯ ತೊದಲುವಿಕೆ ಜಾಗೃತಿ ದಿನದ ಮಹತ್ವ ಹಾಗೂ ಆಚರಣೆ

ತೊದಲುವಿಕೆಯಂತಹ ಸಮಸ್ಯೆಯನ್ನು ಎದುರಿಸುತ್ತಿರುವ ಜನರನ್ನು ನಾವು ನಮ್ಮ ಸುತ್ತಮುತ್ತಲಿನಲ್ಲಿ ನೋಡುತ್ತೇವೆ. ಈ ವ್ಯಕ್ತಿಗಳನ್ನು ಗೇಲಿ ಮಾಡುವವರೇ ಹೆಚ್ಚು. ಆದರೆ ಹಾಸ್ಯವು ಆ ಜನರ ಮೇಲೆ ಮಾನಸಿಕ ಪ್ರಭಾವ ಬೀರುತ್ತದೆ. ಹೀಗಾಗಿ ಈ ತೊದಲುವಿಕೆಯ ಬಗ್ಗೆ ಅರಿವು ಮೂಡಿಸಲು ಮತ್ತು ಶಿಕ್ಷಣ ನೀಡುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ಈ ಆಚರಣೆಯೂ ತೊದಲುವಿಕೆಯಿಂದ ಬಳಲುತ್ತಿರುವ ಜನರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಇದಲ್ಲದೇ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಕೂಡ ಆಯೋಜಿಸುವ ತೊದಲುವಿಕೆಯಿಂದ ಬಳಲುತ್ತಿರುವ ಜನರನ್ನು ಬೆಂಬಲಿಸಲಾಗುತ್ತದೆ.

ಇದನ್ನೂ ಓದಿ: ಬಳಕೆಯಲ್ಲಿರುವ ರಕ್ತದೊತ್ತಡದ ಔಷಧಕ್ಕಿಂತ ಹೊಸ 3-ಇನ್-1 ಔಷಧಿ ಹೆಚ್ಚು ಪರಿಣಾಮಕಾರಿ, ಅಧ್ಯಯನದಲ್ಲಿ ಬಹಿರಂಗ

ತೊದಲುವಿಕೆಗೆ ಚಿಕಿತ್ಸೆ ಏನು?

ತೊದಲುವಿಕೆಗೆ ಚಿಕಿತ್ಸೆ ನೀಡಲು ಎರಡು ವಿಧಾನಗಳನ್ನು ಅಳವಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ಮೊದಲನೆಯದು ಸ್ಪೀಚ್ ಥೆರಪಿ, ಇದರಲ್ಲಿ ವೈದ್ಯರು ಮಾತನಾಡುವ ವೇಗವನ್ನು ಕಡಿಮೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಇದಲ್ಲದೆ, ವ್ಯಕ್ತಿಯು ಯಾವ ನಿರ್ದಿಷ್ಟ ಪದದಲ್ಲಿ ಸಿಲುಕಿಕೊಳ್ಳುತ್ತಾನೆ ಎಂಬುದರ ಬಗ್ಗೆಯೂ ಗಮನ ನೀಡಲಾಗುತ್ತದೆ. ಅದಲ್ಲದೇ, ಇನ್ನೊಂದು ಅರಿವಿನ ವರ್ತನೆಯ ಚಿಕಿತ್ಸೆಯಾಗಿದ್ದು, ಇದು ವ್ಯಕ್ತಿಯ ಮಾತನಾಡುವ ಶಕ್ತಿ ಮತ್ತು ನಡವಳಿಕೆಯನ್ನು ಸುಧಾರಿಸುವ ಮಾನಸಿಕ ಚಿಕಿತ್ಸೆಯಾಗಿದೆ.

ತೊದಲುವಿಕೆ ಸಮಸ್ಯೆ ನಿವಾರಣೆಗೆ ವ್ಯಾಯಾಮಗಳಿವು

* ಶಾರೀರಿಕ ಕಾರಣಗಳಿಂದ ಉಂಟಾಗುವ ತೊದಲುವಿಕೆಗೆ ಕೆಳಗಿನ ವ್ಯಾಯಾಮಗಳು ಪರಿಣಾಮಕಾರಿಯಾಗಿದೆ. ಹೀಗಾಗಿ ಈ ಉಚ್ಚಾರಣಾ ಸ್ವರಕ್ಕೆ ಅನುಗುಣವಾಗಿ ಪ್ರತಿ ಬಾರಿ ಮುಖದ ಸ್ನಾಯುಗಳನ್ನು ವಿರೂಪಗೊಳಿಸಿ, ಸಾಧ್ಯವಾದಷ್ಟು ಅಭಿವ್ಯಕ್ತಿ ಶಬ್ದಗಳನ್ನು ಉಚ್ಚರಿಸಲು ಪ್ರಯತ್ನಿಸುವುದು ಉತ್ತಮ.

* ವೇಗವಾಗಿ ಓದುವ ಅಭ್ಯಾಸ ಬೆಳೆಸಿಕೊಳ್ಳಿ. ಇಲ್ಲಿ ಪದಗಳನ್ನು ತಪ್ಪಾಗಿ ಉಚ್ಚರಿಸಲು ನಿಮ್ಮನ್ನು ಅನುಮತಿಸದಿರಿ ಮತ್ತು ಯಾವುದೇ ಪದ ಅಥವಾ ಉಚ್ಚಾರಾಂಶದಲ್ಲಿ ನಿಲ್ಲಬೇಡಿ. ಎರಡು ಮೂರು ತಿಂಗಳುಗಳವರೆಗೆ ಇದನ್ನು ಪುನರಾವರ್ತಿಸಿದರೆ, ಈ ವ್ಯಾಯಾಮವು ಸ್ನಾಯುವಿನ ಒತ್ತಡವನ್ನು ನಿವಾರಿಸಲು ಮತ್ತು ಮಾತಿನಲ್ಲಿ ಉಂಟಾಗುವ ಅಡಚಣೆಗಳನ್ನು ಸರಿಪಡಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ