AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2024: ಅಂತಾರಾಷ್ಟ್ರೀಯ ಯೋಗ ದಿನ; ಮಕ್ಕಳ ಏಕಾಗ್ರತೆ ಹೆಚ್ಚಿಸಲು ಈ ಯೋಗಾಸನಗಳನ್ನು ಮಾಡಿಸಿ

ಮಕ್ಕಳು ಮೊಬೈಲ್‌ ಬಳಕೆ ಮಾಡುವುದನ್ನು ತಡೆಯಲು ಯೋಗಾಸನಗಳು ನೆರವಾಗುತ್ತವೆ. ನಿಮಗೆ ಇದು ಆಶ್ಚರ್ಯ ಎನಿಸಬಹುದು ಆದರೆ ಇದು ಸತ್ಯ. ಯೋಗ ಅಭ್ಯಾಸ ಮಕ್ಕಳ ಮಾನಸಿಕ ಸ್ಥಿತಿಯನ್ನು ಸುಧಾರಿಸುತ್ತದೆ. ಹಾಗಾದರೆ ಮಕ್ಕಳು ಯಾವ ಆಸನಗಳನ್ನು ಮಾಡಬೇಕು? ಯಾವುದು ಒಳ್ಳೆಯದು? ಸಂಪೂರ್ಣ ಮಾಹಿತಿ ಇಲ್ಲಿದೆ.

International Yoga Day 2024: ಅಂತಾರಾಷ್ಟ್ರೀಯ ಯೋಗ ದಿನ; ಮಕ್ಕಳ ಏಕಾಗ್ರತೆ ಹೆಚ್ಚಿಸಲು ಈ ಯೋಗಾಸನಗಳನ್ನು ಮಾಡಿಸಿ
International Yoga Day 2024
ಪ್ರೀತಿ ಭಟ್​, ಗುಣವಂತೆ
| Edited By: |

Updated on:Jun 21, 2024 | 4:19 PM

Share

ಇಡೀ ದಿನ ಮೊಬೈಲ್‌, ಟ್ಯಾಬ್‌ಗಳನ್ನು ನೋಡುತ್ತಾ ಅದರಲ್ಲಿಯೇ ಮುಳುಗಿ ಹೋಗಿರುವ ಮಕ್ಕಳಿಗೆ ಏಕಾಗ್ರತೆಯ ಕೊರತೆ ಇರುತ್ತದೆ, ಇದು ಅವರ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ಹಾಗಾಗಿ ಅವರು ಮೊಬೈಲ್‌ ಬಳಕೆ ಮಾಡುವುದನ್ನು ತಡೆಯಲು ಯೋಗಾಸನಗಳು ನೆರವಾಗುತ್ತವೆ. ನಿಮಗೆ ಇದು ಆಶ್ಚರ್ಯ ಎನಿಸಬಹುದು ಆದರೆ ಇದು ಸತ್ಯ. ಯೋಗ ಅಭ್ಯಾಸ ಮಕ್ಕಳ ಮಾನಸಿಕ ಸ್ಥಿತಿಯನ್ನು ಸುಧಾರಿಸುತ್ತದೆ. ಹಾಗಾದರೆ ಮಕ್ಕಳು ಯಾವ ಆಸನಗಳನ್ನು ಮಾಡಬೇಕು? ಯಾವುದು ಒಳ್ಳೆಯದು? ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧೋಮುಖ ಶ್ವಾನಾಸನ:

ಈ ಭಂಗಿ ತುಂಬಾ ಸರಳವಾಗಿದ್ದು ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಮುಖ್ಯವಾಗಿ ಈ ಆಸನವು ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ಇವೆಲ್ಲದರ ಜೊತೆಗೆ ಕಾಲು, ತೋಳು ಮತ್ತು ಭುಜದ ಸ್ನಾಯುಗಳನ್ನು ಬಲಪಡಿಸುತ್ತದೆ ಹಾಗೂ ಬೆನ್ನಿನ ಕೆಳಭಾಗದ ನೋವನ್ನು ನಿವಾರಿಸುತ್ತದೆ. ಈ ಆಸನವನ್ನು ಮನೆಯಲ್ಲಿ ಮಾಡುವುದರಿಂದ ಮಕ್ಕಳಿಗೆ ತುಂಬಾ ಪ್ರಯೋಜನವಿದೆ.

ಧನುರಾಸನ ಅಥವಾ ಬಿಲ್ಲಿನ ಭಂಗಿ:

ಈ ಯೋಗಾಭ್ಯಾಸ ಮಕ್ಕಳಿಗೆ ಖುಷಿ ಕೊಡುತ್ತದೆ. ಇದು ಮೀನಿನ ರೀತಿ ಮಾಡಬೇಕಾಗಿರುವುದರಿಂದ ಯೋಗ ಮಾಡಲು ಆಸಕ್ತಿ ಹೆಚ್ಚುತ್ತದೆ. ಜೊತೆಗೆ ಏಕಾಗ್ರತೆಯೂ ಹೆಚ್ಚುತ್ತದೆ. ಆದರೆ ಮೊದಲ ಬಾರಿ ಯೋಗ ಮಾಡುವವರಾಗಿದ್ದರೆ ಇಂತಹ ಆಸನಗಳನ್ನು ಮಾಡುವಾಗ ಸ್ವಲ್ಪ ಜಾಗ್ರತೆ ವಹಿಸಿ.

ಸೇತುಬಂಧಾಸನ ಅಥವಾ ಸೇತುವೆಯ ಭಂಗಿ:

ಈ ಯೋಗಾಭ್ಯಾಸ ಮಾಡುವುದರಿಂದ ಬೆನ್ನಿನ ಮೂಳೆಗಳು, ಎದೆ, ಸೊಂಟ ಮತ್ತು ಭುಜಗಳು ಒಮ್ಮೆಲೆ ಹಿಗ್ಗಿದಂತಾಗಿ ನಿಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಇದರ ಜೊತೆಯಲ್ಲಿ ಜೀರ್ಣ ಪ್ರಕ್ರಿಯೆ ಉತ್ತಮಗೊಂಡು ಮನಸ್ಸು ಪ್ರಶಾಂತಗೊಳ್ಳುತ್ತದೆ. ಮಕ್ಕಳು ಕೂಡ ಈ ಆಸನ ಮಾಡುವುದು ತುಂಬಾ ಒಳ್ಳೆಯದು.

ತಾಡಾಸನ ಅಥವಾ ಉದ್ಧವ ತಾಡಾಸನ:

ಉದ್ಧವ ತಾಡಾಸನವನ್ನು ಪರ್ವತ ಭಂಗಿ ಎಂದು ಕರೆಯಲಾಗುತ್ತದೆ. ಈ ಆಸನವು ಕರುಳಿನ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಈ ಭಂಗಿಯು ಮಗುವಿನ ಸ್ನಾಯುಗಳಿಗೆ ವಿಶ್ರಾಂತಿ ಒದಗಿಸುತ್ತದೆ ಜೊತೆಗೆ ಮಕ್ಕಳ ಮನಸ್ಸು ನಿರಾಳ ಮಾಡಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 8:25 pm, Thu, 20 June 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು