AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2024: ಅಂತಾರಾಷ್ಟ್ರೀಯ ಯೋಗ ದಿನ; ಮಕ್ಕಳ ಏಕಾಗ್ರತೆ ಹೆಚ್ಚಿಸಲು ಈ ಯೋಗಾಸನಗಳನ್ನು ಮಾಡಿಸಿ

ಮಕ್ಕಳು ಮೊಬೈಲ್‌ ಬಳಕೆ ಮಾಡುವುದನ್ನು ತಡೆಯಲು ಯೋಗಾಸನಗಳು ನೆರವಾಗುತ್ತವೆ. ನಿಮಗೆ ಇದು ಆಶ್ಚರ್ಯ ಎನಿಸಬಹುದು ಆದರೆ ಇದು ಸತ್ಯ. ಯೋಗ ಅಭ್ಯಾಸ ಮಕ್ಕಳ ಮಾನಸಿಕ ಸ್ಥಿತಿಯನ್ನು ಸುಧಾರಿಸುತ್ತದೆ. ಹಾಗಾದರೆ ಮಕ್ಕಳು ಯಾವ ಆಸನಗಳನ್ನು ಮಾಡಬೇಕು? ಯಾವುದು ಒಳ್ಳೆಯದು? ಸಂಪೂರ್ಣ ಮಾಹಿತಿ ಇಲ್ಲಿದೆ.

International Yoga Day 2024: ಅಂತಾರಾಷ್ಟ್ರೀಯ ಯೋಗ ದಿನ; ಮಕ್ಕಳ ಏಕಾಗ್ರತೆ ಹೆಚ್ಚಿಸಲು ಈ ಯೋಗಾಸನಗಳನ್ನು ಮಾಡಿಸಿ
International Yoga Day 2024
ಪ್ರೀತಿ ಭಟ್​, ಗುಣವಂತೆ
| Edited By: |

Updated on:Jun 21, 2024 | 4:19 PM

Share

ಇಡೀ ದಿನ ಮೊಬೈಲ್‌, ಟ್ಯಾಬ್‌ಗಳನ್ನು ನೋಡುತ್ತಾ ಅದರಲ್ಲಿಯೇ ಮುಳುಗಿ ಹೋಗಿರುವ ಮಕ್ಕಳಿಗೆ ಏಕಾಗ್ರತೆಯ ಕೊರತೆ ಇರುತ್ತದೆ, ಇದು ಅವರ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ಹಾಗಾಗಿ ಅವರು ಮೊಬೈಲ್‌ ಬಳಕೆ ಮಾಡುವುದನ್ನು ತಡೆಯಲು ಯೋಗಾಸನಗಳು ನೆರವಾಗುತ್ತವೆ. ನಿಮಗೆ ಇದು ಆಶ್ಚರ್ಯ ಎನಿಸಬಹುದು ಆದರೆ ಇದು ಸತ್ಯ. ಯೋಗ ಅಭ್ಯಾಸ ಮಕ್ಕಳ ಮಾನಸಿಕ ಸ್ಥಿತಿಯನ್ನು ಸುಧಾರಿಸುತ್ತದೆ. ಹಾಗಾದರೆ ಮಕ್ಕಳು ಯಾವ ಆಸನಗಳನ್ನು ಮಾಡಬೇಕು? ಯಾವುದು ಒಳ್ಳೆಯದು? ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧೋಮುಖ ಶ್ವಾನಾಸನ:

ಈ ಭಂಗಿ ತುಂಬಾ ಸರಳವಾಗಿದ್ದು ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಮುಖ್ಯವಾಗಿ ಈ ಆಸನವು ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ಇವೆಲ್ಲದರ ಜೊತೆಗೆ ಕಾಲು, ತೋಳು ಮತ್ತು ಭುಜದ ಸ್ನಾಯುಗಳನ್ನು ಬಲಪಡಿಸುತ್ತದೆ ಹಾಗೂ ಬೆನ್ನಿನ ಕೆಳಭಾಗದ ನೋವನ್ನು ನಿವಾರಿಸುತ್ತದೆ. ಈ ಆಸನವನ್ನು ಮನೆಯಲ್ಲಿ ಮಾಡುವುದರಿಂದ ಮಕ್ಕಳಿಗೆ ತುಂಬಾ ಪ್ರಯೋಜನವಿದೆ.

ಧನುರಾಸನ ಅಥವಾ ಬಿಲ್ಲಿನ ಭಂಗಿ:

ಈ ಯೋಗಾಭ್ಯಾಸ ಮಕ್ಕಳಿಗೆ ಖುಷಿ ಕೊಡುತ್ತದೆ. ಇದು ಮೀನಿನ ರೀತಿ ಮಾಡಬೇಕಾಗಿರುವುದರಿಂದ ಯೋಗ ಮಾಡಲು ಆಸಕ್ತಿ ಹೆಚ್ಚುತ್ತದೆ. ಜೊತೆಗೆ ಏಕಾಗ್ರತೆಯೂ ಹೆಚ್ಚುತ್ತದೆ. ಆದರೆ ಮೊದಲ ಬಾರಿ ಯೋಗ ಮಾಡುವವರಾಗಿದ್ದರೆ ಇಂತಹ ಆಸನಗಳನ್ನು ಮಾಡುವಾಗ ಸ್ವಲ್ಪ ಜಾಗ್ರತೆ ವಹಿಸಿ.

ಸೇತುಬಂಧಾಸನ ಅಥವಾ ಸೇತುವೆಯ ಭಂಗಿ:

ಈ ಯೋಗಾಭ್ಯಾಸ ಮಾಡುವುದರಿಂದ ಬೆನ್ನಿನ ಮೂಳೆಗಳು, ಎದೆ, ಸೊಂಟ ಮತ್ತು ಭುಜಗಳು ಒಮ್ಮೆಲೆ ಹಿಗ್ಗಿದಂತಾಗಿ ನಿಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಇದರ ಜೊತೆಯಲ್ಲಿ ಜೀರ್ಣ ಪ್ರಕ್ರಿಯೆ ಉತ್ತಮಗೊಂಡು ಮನಸ್ಸು ಪ್ರಶಾಂತಗೊಳ್ಳುತ್ತದೆ. ಮಕ್ಕಳು ಕೂಡ ಈ ಆಸನ ಮಾಡುವುದು ತುಂಬಾ ಒಳ್ಳೆಯದು.

ತಾಡಾಸನ ಅಥವಾ ಉದ್ಧವ ತಾಡಾಸನ:

ಉದ್ಧವ ತಾಡಾಸನವನ್ನು ಪರ್ವತ ಭಂಗಿ ಎಂದು ಕರೆಯಲಾಗುತ್ತದೆ. ಈ ಆಸನವು ಕರುಳಿನ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಈ ಭಂಗಿಯು ಮಗುವಿನ ಸ್ನಾಯುಗಳಿಗೆ ವಿಶ್ರಾಂತಿ ಒದಗಿಸುತ್ತದೆ ಜೊತೆಗೆ ಮಕ್ಕಳ ಮನಸ್ಸು ನಿರಾಳ ಮಾಡಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 8:25 pm, Thu, 20 June 24

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!