AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಹೊತ್ತು ಸೌತೆಕಾಯಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೋ, ಕೆಟ್ಟದ್ದೋ? ತಜ್ಞರು ಏನಂತಾರೆ ಇಲ್ಲಿದೆ ಮಾಹಿತಿ

ಸೌತೆಕಾಯಿ(Cucumber) ಎಂದರೆ ಬಹುತೇಕ ಎಲ್ಲರಿಗೂ ಇಷ್ಟ, ಹೀಗಾಗಿ ಸಮಯ ನೋಡದೆ ನಿಮಗೆ ತಿನ್ನಬೇಕು ಎನಿಸಿದಾಗಲೆಲ್ಲಾ ತಿನ್ನುತ್ತೀರಿ ಅದು ತಪ್ಪು

ರಾತ್ರಿ ಹೊತ್ತು ಸೌತೆಕಾಯಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೋ, ಕೆಟ್ಟದ್ದೋ? ತಜ್ಞರು ಏನಂತಾರೆ ಇಲ್ಲಿದೆ ಮಾಹಿತಿ
ಸೌತೆಕಾಯಿ
ನಯನಾ ರಾಜೀವ್
|

Updated on:Jul 14, 2023 | 2:02 PM

Share

ಸೌತೆಕಾಯಿ(Cucumber) ಎಂದರೆ ಬಹುತೇಕ ಎಲ್ಲರಿಗೂ ಇಷ್ಟ, ಹೀಗಾಗಿ ಸಮಯ ನೋಡದೆ ನಿಮಗೆ ತಿನ್ನಬೇಕು ಎನಿಸಿದಾಗಲೆಲ್ಲಾ ತಿನ್ನುತ್ತೀರಿ ಅದು ತಪ್ಪು. ಸೌತೆಕಾಯಿಯಲ್ಲಿ ಬಹಳಷ್ಟು ನೀರಿನ ಅಂಶವಿರುವ ಕಾರಣ, ಬೇಸಿಗೆಯಲ್ಲಿ ಜನರು ಸೌತೆಕಾಯಿಯನ್ನು ಸಲಾಡ್ ಅಥವಾ ಸಂಜೆಯ ಹೊತ್ತು ಸೇವಿಸುತ್ತಾರೆ.ರೋಗ್ಯ ತಜ್ಞರ ಪ್ರಕಾರ, ಸೌತೆಕಾಯಿ ತಿನ್ನುವುದು ದೇಹವನ್ನು ಹೈಡ್ರೇಟ್ ಆಗಿ ಇಡಲು ಬಹಳ ಮುಖ್ಯ. ಸೌತೆಕಾಯಿಯಲ್ಲಿ ವಿಟಮಿನ್ ಬಿ, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್ ಮತ್ತು ತಾಮ್ರವು ಸಮೃದ್ಧವಾಗಿದೆ, ಆದ್ದರಿಂದ ಇದನ್ನು ತಿಂದ ನಂತರ ನೀವು ಇಡೀ ಸಮಯ ಹೈಡ್ರೇಟೆಡ್ ಆಗಿರುತ್ತೀರಿ. ದೇಹಕ್ಕೆ ಪೋಷಕಾಂಶಗಳ ಕೊರತೆಯ ಜೊತೆಗೆ ರೋಗಗಳಿಂದ ಮುಕ್ತಿ ಸಿಗುತ್ತದೆ.

ಆದರೆ ಇದನ್ನು ತಿನ್ನುವುದರಿಂದ ಹಲವಾರು ಅನಾನುಕೂಲತೆಗಳಿವೆ ಎಂದು ನಿಮಗೆ ತಿಳಿದಿದೆಯೇ? ಅದಕ್ಕಾಗಿಯೇ ರಾತ್ರಿಯಲ್ಲಿ ಸೌತೆಕಾಯಿಯನ್ನು ತಿನ್ನುವುದನ್ನು ಹೆಚ್ಚಾಗಿ ನಿಷೇಧಿಸಲಾಗಿದೆ.

ಪೌಷ್ಟಿಕಾಂಶಯುಕ್ತ ಸೌತೆಕಾಯಿಯನ್ನು ಜನರು ಹಸಿಯಾಗಿ ತಿನ್ನಲು ಇಷ್ಟಪಡುತ್ತಾರೆ, ಇಲ್ಲದಿದ್ದರೆ ಸಲಾಡ್ ಅಥವಾ ಇತರೆ ತರಕಾರಿಯೊಂದಿಗೆ ಬೆರೆಸಿ ತಿನ್ನಲಾಗುತ್ತದೆ. ಸೌತೆಕಾಯಿಯಲ್ಲಿ ವಿಟಮಿನ್ ಮತ್ತು ಆ್ಯಂಟಿಆಕ್ಸಿಡೆಂಟ್ ಸಮೃದ್ಧವಾಗಿದೆ. ಇದರಲ್ಲಿ ಹಲವು ರೀತಿಯ ಪೋಷಕಾಂಶಗಳಿದ್ದು, ದೇಹ ಮತ್ತು ಮನಸ್ಸನ್ನು ತಂಪಾಗಿರಿಸುತ್ತದೆ.

ರಾತ್ರಿ ಊಟದ ಜೊತೆ ಸೌತೆಕಾಯಿಯನ್ನು ತಿನ್ನುವವರು ಬಹಳ ಮಂದಿ ಇದ್ದಾರೆ, ಸಂಜೆ ಊಟದ ಬದಲು ಸೌತೆಕಾಯಿ ತಿಂದು ಮಲಗುವ ಬಹಳಷ್ಟು ಜನರಿದ್ದಾರೆ. ಆದರೆ ರಾತ್ರಿ ಹೊತ್ತು ಸೌತೆಕಾಯಿ ತಿನ್ನುವ ಅಭ್ಯಾಸವನ್ನು ಬಿಡಬೇಕು.

ಸೌತೆಕಾಯಿ ಜೀರ್ಣವಾಗಲು ಬಹಳ ಸಮಯ ತೆಗೆದುಕೊಳ್ಳುತ್ತದೆ ಮತ್ತು ಇದು ಹೊಟ್ಟೆಗೆ ತುಂಬಾ ಭಾರವಾಗಿರುತ್ತದೆ, ಅದು ನಿಮ್ಮ ನಿದ್ರೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಸೌತೆಕಾಯಿಯಲ್ಲಿ ನೀರು ಹೇರಳವಾಗಿರುವ ಕಾರಣ ರಾತ್ರಿ ಇದನ್ನು ತಿಂದು ಮಲಗಿದರೆ ಹಲವು ಬಾರಿ ಬಾತ್ ರೂಮ್​ಗೆ ಹೋಗಬೇಕಾಗಬಹುದು.

ಮತ್ತಷ್ಟು ಓದಿ: ಋತುಚಕ್ರದ ಆರೋಗ್ಯ ಸಮಸ್ಯೆಗಳು ಈಶಾನ್ಯದ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬಂದಿದೆ:ಸಂಶೋಧನೆ

ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರಿಗೆ ಸೌತೆಕಾಯಿ ಹಾನಿಕಾರಕ. ಅವರು ಅದನ್ನು ತಿನ್ನುವುದನ್ನು ತಪ್ಪಿಸಬೇಕು. ಕ್ಯುಕುರ್ಬಿಟಾಸಿನ್ ಎಂಬ ಪ್ರಬಲ ಅಂಶವು ಸೌತೆಕಾಯಿಯಲ್ಲಿ ಕಂಡುಬರುತ್ತದೆ, ಇದು ಹೊಟ್ಟೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಜೀರ್ಣಕ್ರಿಯೆಯಲ್ಲಿ ಸ್ವಲ್ಪ ತೊಂದರೆಯಾದರೆ ಗ್ಯಾಸ್ ಸಮಸ್ಯೆ ಕಾಡುತ್ತದೆ. ಕೆರಳಿಸುವ ಕರುಳಿನ ಸಹಲಕ್ಷಣಗಳು (IBS) ಹೊಂದಿರುವ ಜನರು ತಮ್ಮ ಆಹಾರದಲ್ಲಿ ಸೌತೆಕಾಯಿಯನ್ನು ಸೇರಿಸದಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಸೌತೆಕಾಯಿಯನ್ನು ತಿನ್ನಬೇಡಿ ಎಂದು ನಾವು ನಿಮಗೆ ಹೇಳುತ್ತಿಲ್ಲ, ಬದಲಿಗೆ ನೀವು ರಾತ್ರಿಯ ಊಟಕ್ಕೆ ಮುಂಚಿತವಾಗಿ ಸೌತೆಕಾಯಿಯನ್ನು ತಿನ್ನಬಹುದು . ರಾತ್ರಿ ಊಟಕ್ಕೆ 20-30 ನಿಮಿಷಗಳ ಮೊದಲು ಸೌತೆಕಾಯಿಯನ್ನು ಸೇವಿಸಿ. ರಾತ್ರಿಯಲ್ಲಿ ಲಘು ಮತ್ತು ಆರೋಗ್ಯಕರ ಆಹಾರವನ್ನು ಸೇವಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:01 pm, Fri, 14 July 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ