AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜಾ ತೆಂಗಿನಕಾಯಿ ನಿಜಕ್ಕೂ ಆರೋಗ್ಯಕ್ಕೆ ಪ್ರಯೋಜನಕಾರಿಯೇ?

ಪೂಜಾ ಕಾರ್ಯಗಳಿಂದ ಹಿಡಿದು ತರಹೇವಾರಿ ಅಡುಗೆಯವರೆಗೆ ಹಸಿ ತೆಂಗಿನಕಾಯಿಯನ್ನು ಬಳಸಲಾಗುತ್ತದೆ. ಇದರಿಂದ ತಯಾರಿಸಿದಂತಹ ಬಗೆಬಗೆಯ ಖಾದ್ಯ, ಭಕ್ಷ್ಯಗಳನ್ನು ನೀವು ಸಹ ಸವಿದಿರುತ್ತೀರಿ ಅಲ್ವಾ. ಆದ್ರೆ ಈ ಹಸಿ ತೆಂಗಿನಕಾಯಿ ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯದೇ, ಇದನ್ನು ತಿನ್ನುವುದರಿಂದ ಲಭಿಸುವ ಪ್ರಯೋಜನಗಳಾದರೂ ಏನು ಎಂಬುದನ್ನು ತಿಳಿಯಿರಿ.

ತಾಜಾ ತೆಂಗಿನಕಾಯಿ ನಿಜಕ್ಕೂ ಆರೋಗ್ಯಕ್ಕೆ ಪ್ರಯೋಜನಕಾರಿಯೇ?
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jul 27, 2025 | 4:38 PM

Share

ಸೀಯಾಳ ಅಥವಾ ಎಳನೀರು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಎಂಬ ವಿಚಾರ ಎಲ್ಲರಿಗೂ ತಿಳಿದೇ ಇದೆ. ಈ ನೈಸರ್ಗಿಕ ಪಾನೀಯ ಚರ್ಮದಿಂದ ಹಿಡಿದು ಕೂದಲ ಆರೋಗ್ಯವರೆಗೆ ಸಾಕಷ್ಟು ಪ್ರಯೋಜನಗಳನ್ನು ಹೊಂದಿದೆ. ಇದರಂತೆಯೇ ಹಸಿ ತೆಂಗಿನಕಾಯಿಯೂ ಪ್ರಯೋಜನಕಾರಿಯೇ? ಪೂಜಾ ಕಾರ್ಯಗಳಿಂದ ಹಿಡಿದು ತರಹೇವಾರಿ ಅಡುಗೆಯವರೆಗೆ ಬಳಕೆಯಾಗುವ ಬಹುಪಯೋಗಿ ತೆಂಗಿನಕಾಯಿ (fresh coconut) ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯದೇ?  ಈ ಬಗ್ಗೆ ಡಾ. ಸುನೀತಾ ಸಾಯಮ್ಮಗಾರು (Sunita Sayammagaru) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ವಿವರಣೆಯನ್ನು ನೀಡಿದ್ದಾರೆ. ಇವರು ಹೇಳಿರುವ ಪ್ರಕಾರ ತಾಜಾ ತೆಂಗಿನಕಾಯಿ ಸೇವನೆ ಒಳ್ಳೇದೋ ಅಥವಾ ಕೆಟ್ಟದ್ದೋ ಎಂಬುದನ್ನು ನೋಡೋಣ ಬನ್ನಿ.

ತಾಜಾ ತೆಂಗಿನಕಾಯಿ ನಿಜಕ್ಕೂ ಆರೋಗ್ಯಕ್ಕೆ ಪ್ರಯೋಜನಕಾರಿಯೇ?

ವಿವಿಧ ಭಕ್ಷ್ಯ, ಖಾದ್ಯಗಳ ತಯಾರಿಯಿಂದ ಹಿಡಿದು ಪೂಜಾ ಕಾರ್ಯಗಳವರೆಗೆ ಬಹುಪಯೋಗಿಯಾಗಿರುವ ತಾಜಾ ತೆಂಗಿನಕಾಯಿ ಆರೋಗ್ಯಕ್ಕೆ ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂಬ ಮಾಹಿತಿಯನ್ನು ಡಾ. ಸುನೀತಾ ಸಾಯಮ್ಮಗಾರು ತಮ್ಮ ಎಕ್ಸ್‌ ಖಾತೆಯಲ್ಲಿ ತಿಳಿಸಿಕೊಟ್ಟಿದ್ದಾರೆ.

ಇದನ್ನೂ ಓದಿ
Image
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ
Image
ಪ್ರತಿ ರಾತ್ರಿ ಎರಡು ಬೆಳ್ಳುಳ್ಳಿ ಎಸಳು ತಿಂದರೆ, ಈ ಎಲ್ಲಾ ಕಾಯಿಲೆಗಳು ಮಾಯ
Image
ನೆನೆಸಿಟ್ಟ ವಾಲ್ನಟ್ಸ್ ತಿನ್ನುವ ಅಭ್ಯಾಸ ನಿಮಗಿದ್ರೆ ಈ ಸ್ಟೋರಿ ಓದಿ
Image
ಪ್ರತಿನಿತ್ಯ  ಒಂದು ಲವಂಗ ಸೇವನೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತೆ!

ಅವರು ಹೇಳುವಂತೆ, ಇದರ ಪೌಷ್ಠಿಕಾಂಶದ ಬಗ್ಗೆ ನೋಡುವುದಾದರೆ, 100 ಗ್ರಾಂ ತಾಜಾ ತೆಂಗಿನಕಾಯಿಯಲ್ಲಿ  354 ಕ್ಯಾಲೋರಿ, 15 ಗ್ರಾಂ ಕಾರ್ಬೋಹೈಡ್ರೇಟ್‌, 9 ಗ್ರಾಂ ಫೈಬರ್‌ 9,  ಪ್ರೋಟೀನ್‌ 3.3 ಗ್ರಾಂ (100 ಮಿಲಿ ಲಿ ಹಾಲಿಗೆ ಸಮ), ಕೊಬ್ಬು 33 ಗ್ರಾಂ ಮತ್ತು ಮೀಡಿಯಂ ಚೈನ್‌ ಟ್ರೈಗ್ಲಿಸರೈಡ್‌ (MTC) 30 ಗ್ರಾಂ ಇದೆ. ಈ  MCT ಕೊಬ್ಬು ನಷ್ಟ ಮತ್ತು ತೂಕ ನಷ್ಟಕ್ಕೆ ಸಹಕಾರಿ ಎಂಬುದು ಇತ್ತೀಚಿನ ಸಂಶೋಧನೆಯಲ್ಲಿ ತಿಳಿದು ಬಂದಿದೆ ಎಂಬುದನ್ನು ಅವರು ಹೇಳಿದ್ದಾರೆ. ಇನ್ನೂ ತಾಜಾ ತೆಂಗಿನಕಾಯಿಯಲ್ಲಿ ಖನಿಜಗಳು ಮತ್ತು ಜೀವಸತ್ವಗಳು ಎಷ್ಟಿದೆ ಎಂಬುದನ್ನು ನೋಡುವುದುದಾರೆ,  ತಾಜಾ ತೆಂಗಿನಕಾಯಿಯಲ್ಲಿ ತಾಮ್ರ, ಸೆಲೆನಿಯಮ್‌, ಸತು, ಪೊಟ್ಯಾಸಿಯಮ್‌, ಕ್ಯಾಲ್ಸಿಯಂ ಮತ್ತು ಕಬ್ಬಿಣ ಇದೆ. ಇನ್ನೂ ವಿಟಮಿನ್‌ ಬಿ 12, 2, 3, 6, 9 ಮತ್ತು ವಿಟಮಿನ್‌ ಸಿ ಮತ್ತು ಇ ಕೂಡ ಇದೆ.

ಇಷ್ಟೆಲ್ಲಾ ಪೋಷಕಾಂಶಗಳಿಂದ ಕೂಡಿರುವ ತಾಜಾ ತೆಂಗಿನಕಾಯಿಯನ್ನು ಸೇವನೆ ಮಾಡುವುದು ಉತ್ತಮ. ಆದರೆ, ಇದನ್ನು ದಿನಕ್ಕೆ 100 ಗ್ರಾಂ ಸೇವಿಸುವ ಬದಲು ದಿನಕ್ಕೆ 30 ರಿಂದ 40 ಗ್ರಾಂ ಸೇವಿಸಬೇಕು.  ಊಟದ ಭಾಗವಾಗಿ ಅಥವಾ ತಿಂಡಿಯ ರೂಪದಲ್ಲೂ ಇದನ್ನು ಸೇವನೆ ಮಾಡಬಹುದು. ಇದರ ಸೇವನೆ ಹೊಟ್ಟೆಗೆ ತೃಪ್ತಿಯನ್ನು ನೀಡುವುದು ಮಾತ್ರವಲ್ಲದೆ, ಇದು ಜಂಕ್‌ ಫುಡ್‌ ಹಾಗೂ ಹೆಚ್ಚಿನ ಕಾರ್ಬ್‌ ಆಹಾರಗಳ ಅತಿಯಾದ ಸೇವನೆಯನ್ನು ಕೂಡಾ ತಪ್ಪಿಸುತ್ತದೆ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಇಲ್ಲಿದೆ ನೋಡಿ:

ಹಸಿ ತೆಂಗಿನಕಾಯಿಯ ಆರೋಗ್ಯ ಪ್ರಯೋಜನಗಳು:

ರೋಗನಿರೋಧಕ ಶಕ್ತಿ: ಹಸಿ ತೆಂಗಿನಕಾಯಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಬಹುದು. ತೆಂಗಿನಕಾಯಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ ಅಂಶಗಳು ಇರುವುದರಿಂದ ಇದು ನಿಮ್ಮನ್ನು ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ.

 ಬೊಜ್ಜು ಕಡಿಮೆ ಮಾಡುತ್ತದೆ: ಹಸಿ ತೆಂಗಿನಕಾಯಿ ತೂಕ ಇಳಿಸಿಕೊಳ್ಳಲು ಸಹಕಾರಿ. ತೆಂಗಿನಕಾಯಿಯಲ್ಲಿರುವ ಟ್ರೈಗ್ಲಿಸರೈಡ್‌ಗಳು ದೇಹದಲ್ಲಿನ ಕೊಬ್ಬನ್ನು ವೇಗವಾಗಿ ಸುಡಲು ಮತ್ತು ಹಸಿವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ. ಇದರಿಂದಾಗಿ ತೂಕವನ್ನು ನಿಯಂತ್ರಿಸಬಹುದು.

ಮೆದುಳನ್ನು ಚುರುಕುಗೊಳಿಸಲು ಸಹಕಾರಿ:  ಹಸಿ ತೆಂಗಿನಕಾಯಿ ದೇಹಕ್ಕೆ ಮಾತ್ರವಲ್ಲದೆ ಮೆದುಳಿಗೆ ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಹೌದು ಇದು ನೆನಪಿನ ಶಕ್ತಿಯನ್ನು ಹೆಚ್ಚಿಸಲು ತುಂಬಾನೇ ಸಹಕಾರಿ.  ಇದರಲ್ಲಿ ಕಬ್ಬಿಣ ಮತ್ತು ವಿಟಮಿನ್ ಬಿ6 ಇದ್ದು, ಇದು ಮೆದುಳನ್ನು ಚುರುಕುಗೊಳಿಸುತ್ತದೆ ಮತ್ತು ಸ್ಮರಣಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ, ಎಷ್ಟು ದಪ್ಪವಿದ್ದರೂ ತೆಳ್ಳ ಆಗಬಹುದು

ಚರ್ಮ ಹಾಗೂ ಕೂದಲಿಗೆ  ಪ್ರಯೋಜನಕಾರಿ: ಹಸಿ ತೆಂಗಿನಕಾಯಿಯಲ್ಲಿ ಜೀವಸತ್ವಗಳ ಜೊತೆಗೆ, ಬಹಳಷ್ಟು ಉತ್ಕರ್ಷಣ ನಿರೋಧಕ ಅಂಶಗಳಿವೆ.ಇದು ಚರ್ಮಕ್ಕೆ ಮತ್ತು ಕೂದಲಿಗೆ ಸಾಕಷ್ಟು ಪೋಷಣೆಯನ್ನು ನೀಡುತ್ತದೆ. ಇದರಲ್ಲಿ ಕಂಡುಬರುವ ವಿಟಮಿನ್ ಇ ಚರ್ಮವನ್ನು ಆರೋಗ್ಯಕರ ಮತ್ತು ಹೊಳೆಯುವಂತೆ ಮಾಡುತ್ತದೆ. ಮತ್ತು ಹಸಿ ತೆಂಗಿನಕಾಯಿಯಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕಗಳು ಸ್ವತಂತ್ರ ರಾಡಿಕಲ್‌ಗಳನ್ನು ತಡೆಯುವ ಮೂಲಕ ಕೂದಲಿನ ಬೆಳವಣಿಗೆಯನ್ನು ವೇಗಗೊಳಿಸುತ್ತವೆ.

ಜೀರ್ಣಕ್ರಿಯೆಗೆ ಸಹಕಾರಿ: ಹಸಿ ತೆಂಗಿನಕಾಯಿ ಪೋಷಕಾಂಶಗಳು ಆಹಾರವನ್ನು ವೇಗವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದು ಹೊಟ್ಟೆಯ ಆರೋಗ್ಯ ಮತ್ತು ಕರುಳಿನ ಚಲನೆಯನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಕೂಡಾ  ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು