AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲಸಿನ ಹಣ್ಣಿನ ಬೀಜಗಳನ್ನು ಎಸೆಯುತ್ತಿದ್ದೀರಾ? ಇದರ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನ ತಿಳಿದ್ರೆ ಶಾಕ್ ಆಗ್ತೀರಾ?

ಹಲಸಿನ ಹಣ್ಣು ತಿಂದ ನಂತರ ಜನರು ಹೆಚ್ಚಾಗಿ ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಇದರಲ್ಲಿ ಅಪಾರ ಆರೋಗ್ಯ ಪ್ರಯೋಜನಗಳಿವೆ. ಅವುಗಳಲ್ಲಿರುವ ಪ್ರೋಟೀನ್, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ, ತೂಕ ನಷ್ಟ, ಹೃದಯದ ಆರೋಗ್ಯವನ್ನು ರಕ್ಷಿಸುವುದು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗಾದರೆ ಇದರ ಸೇವನೆಯಿಂದ ಸಿಗುವ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹಲಸಿನ ಹಣ್ಣಿನ ಬೀಜಗಳನ್ನು ಎಸೆಯುತ್ತಿದ್ದೀರಾ? ಇದರ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನ ತಿಳಿದ್ರೆ ಶಾಕ್ ಆಗ್ತೀರಾ?
Jackfruit SeedsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 17, 2026 | 10:04 PM

Share

ಹಲಸಿನ ಹಣ್ಣು (Jackfruit) ರುಚಿ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾದ ಹಣ್ಣು ಎಂಬುದು ತಿಳಿದ ವಿಚಾರ. ಆದರೆ ಹೆಚ್ಚಿನವರು ಹಣ್ಣನ್ನು ತಿಂದ ನಂತರ ಅದರ ಬೀಜಗಳನ್ನು ತ್ಯಾಜ್ಯವೆಂದು ಭಾವಿಸಿ ಎಸೆಯುತ್ತಾರೆ. ಇನ್ನು ಕೆಲವರು ಇದರಿಂದ ಕೆಲವು ರೆಸಿಪಿಗಳನ್ನು ತಯಾರಿಸುತ್ತಾರೆ. ಆದರೆ ವಾಸ್ತವದಲ್ಲಿ, ಹಲಸಿನ ಬೀಜಗಳು (Jackfruit Seeds) ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ನೈಸರ್ಗಿಕ ಸೂಪರ್‌ಫುಡ್‌ಗಳಾಗಿವೆ. ಇವುಗಳಲ್ಲಿ ಫೈಬರ್, ಪ್ರೋಟೀನ್, ಪೊಟ್ಯಾಸಿಯಂ, ಕಬ್ಬಿಣ ಹಾಗೂ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಹಾಗಾದರೆ ಇದರ ಸೇವನೆಯಿಂದ ಸಿಗುವ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. ಹಲಸಿನ ಹಣ್ಣನ್ನು ತಿಂದು ಬೀಜ ಎಸೆಯುವ ಮುನ್ನ ಇದು ಎಷ್ಟು ಉಪಯೋಗಕಾರಿ ಎಂಬುದನ್ನು ತಿಳಿದುಕೊಳ್ಳಿ.

ಜೀರ್ಣಕ್ರಿಯೆಗೆ ಉತ್ತಮ

ಹಲಸಿನ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ನಾರು (ಫೈಬರ್) ಇರುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಮಲಬದ್ಧತೆ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ, ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ಉತ್ತೇಜಿಸಿ ಹೊಟ್ಟೆಯ ಆರೋಗ್ಯವನ್ನು ಕಾಪಾಡುತ್ತದೆ.

ಹೃದಯ ಆರೋಗ್ಯಕ್ಕೆ ಸಹಕಾರಿ

ಈ ಬೀಜಗಳಲ್ಲಿ ಇರುವ ಪೊಟ್ಯಾಸಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ. ಫೈಬರ್ ಅಂಶವು ಕೆಟ್ಟ ಕೊಲೆಸ್ಟ್ರಾಲ್ (LDL) ಮಟ್ಟವನ್ನು ಕಡಿಮೆ ಮಾಡಿ ಹೃದಯದ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸುತ್ತದೆ. ಇದರಿಂದ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯ ಕೂಡ ಕಡಿಮೆಯಾಗಬಹುದು.

ತೂಕ ನಿಯಂತ್ರಣಕ್ಕೆ ನೆರವಾಗುತ್ತದೆ

ಹಲಸಿನ ಬೀಜಗಳಲ್ಲಿ ಪ್ರೋಟೀನ್ ಮತ್ತು ಫೈಬರ್ ಸಮೃದ್ಧವಾಗಿರುವುದರಿಂದ ಹೊಟ್ಟೆ ತುಂಬಿದ ಅನುಭವ ಹೆಚ್ಚು ಕಾಲ ಇರುತ್ತದೆ. ಇದರಿಂದ ಅನಗತ್ಯ ತಿಂಡಿ ತಿನ್ನುವುದು ಕಡಿಮೆಯಾಗಿ ತೂಕ ನಿಯಂತ್ರಣಕ್ಕೆ ಸಹಾಯವಾಗುತ್ತದೆ.

ಇದನ್ನೂ ಓದಿ: ಮಧುಮೇಹಿಗಳೇ ಊಟಕ್ಕೂ ಮುನ್ನ ಒಂದು ನೆಲ್ಲಿಕಾಯಿ ತಿಂದು ನೋಡಿ! ದೇಹದಲ್ಲಾಗುವ ಬದಲಾವಣೆ ನಿಮಗೆ ತಿಳಿಯುತ್ತೆ

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಕಬ್ಬಿಣ, ಜಿಂಕ್ ಮತ್ತು ಇತರೆ ಖನಿಜಾಂಶಗಳು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ. ಇದರಿಂದ ಋತುಬದ್ಧ ಸೋಂಕುಗಳು ಮತ್ತು ಸಾಮಾನ್ಯ ಅನಾರೋಗ್ಯಗಳಿಂದ ರಕ್ಷಣೆ ಪಡೆಯಬಹುದು.

ಚರ್ಮದ ಆರೋಗ್ಯ ಕಾಪಾಡುತ್ತದೆ

ಹಲಸಿನ ಬೀಜಗಳಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಫ್ರೀ ರಾಡಿಕಲ್‌ಗಳ ಹಾನಿಯನ್ನು ಕಡಿಮೆ ಮಾಡುತ್ತವೆ.

ಹೇಗೆ ಸೇವಿಸಬಹುದು?

ಹಲಸಿನ ಬೀಜಗಳನ್ನು ನೀರಿನಲ್ಲಿ ಬೇಯಿಸಿ ತಿನ್ನಬಹುದು ಅಥವಾ ಸ್ವಲ್ಪ ಹುರಿದು ಆರೋಗ್ಯಕರ ಸ್ನ್ಯಾಕ್ ಆಗಿ ಸೇವಿಸಬಹುದು. ಕರಿ, ಸೂಪ್ ಅಥವಾ ಇತರೆ ಅಡುಗೆಗಳಲ್ಲಿ ಕೂಡ ಸೇರಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ