AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲ್ಲದ ಅನ್ನವನ್ನು ಎಂದಾದರೂ ತಿಂದಿದ್ದೀರಾ? ಇಲ್ಲ ಎಂದರೆ ನಿಮಗೆ ಈ ಕಾಯಿಲೆ ಬರುವುದು ಫಿಕ್ಸ್

ಬಹಳಷ್ಟು ಜನರು ಸಿಹಿತಿಂಡಿಗಳನ್ನು ತಿನ್ನಲು ಇಷ್ಟಪಡುತ್ತಾರೆ. ಈ ರೀತಿ ತಿನ್ನುವುದು ಒಳ್ಳೆಯದಲ್ಲ. ಆದರೆ, ಸಿಹಿತಿಂಡಿಗಳನ್ನು ಇಷ್ಟಪಡುವವರು ಬೆಲ್ಲದ ಅನ್ನವನ್ನು ನಿಯಮಿತವಾಗಿ ಸೇವಿಸಿದರೆ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ದಿನದ ಊಟದ ನಂತರ ಒಂದು ಸಣ್ಣ ತುಂಡು ಬೆಲ್ಲವನ್ನು ಬಾಯಿಗೆ ಹಾಕಿದರೆ, ಜೀರ್ಣಕಾರಿ ಸಮಸ್ಯೆಗಳ ಜೊತೆಗೆ. ಇದು ದೇಹದಲ್ಲಿನ ಅನೇಕ ರೋಗಗಳನ್ನು ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ. ಪ್ರತಿದಿನ ಒಂದು ಕಪ್ ಬೆಲ್ಲದ ಅನ್ನವನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳು ಇಲ್ಲಿವೆ.

ಬೆಲ್ಲದ ಅನ್ನವನ್ನು ಎಂದಾದರೂ ತಿಂದಿದ್ದೀರಾ? ಇಲ್ಲ ಎಂದರೆ ನಿಮಗೆ ಈ ಕಾಯಿಲೆ ಬರುವುದು ಫಿಕ್ಸ್
ಸಾಂದರ್ಭಿಕ ಚಿತ್ರImage Credit source: Getty Images
Follow us
ಪ್ರೀತಿ ಭಟ್​, ಗುಣವಂತೆ
|

Updated on: May 10, 2025 | 7:08 PM

ಸಿಹಿತಿಂಡಿ (sweet) ತಿನ್ನುವುದಕ್ಕೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ? ಆದರೆ ಹೊರಗೆ ಸಿಗುವ ಸಿಹಿ ತಿಂಡಿಗಳನ್ನು ಪದೇ ಪದೇ ಸೇವನೆ ಮಾಡುವುದು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಸಿಹಿತಿಂಡಿಗಳನ್ನು ಇಷ್ಟಪಡುವವರು ಪಂಜಾಬ್‌ನ ಅತ್ಯಂತ ಜನಪ್ರಿಯ ಖಾದ್ಯವಾದ ಬೆಲ್ಲದ ಅನ್ನ (Jaggery Rice) ಸೇವನೆ ಮಾಡಬಹುದು. ಇದು ಸಿಹಿ ತಿನ್ನಬೇಕು ಎಂಬ ನಿಮ್ಮ ಆಸೆಯನ್ನು ಪೂರೈಸುವುದರ ಜೊತೆಗೆ ಅದ್ಭುತ ಆರೋಗ್ಯ (Health) ಪ್ರಯೋಜನಗಳನ್ನು ಕೂಡ ನೀಡುತ್ತದೆ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಪ್ರತಿದಿನ ಊಟವಾದ ನಂತರ ಒಂದು ಸಣ್ಣ ತುಂಡು ಬೆಲ್ಲವನ್ನು ಬಾಯಿಗೆ ಹಾಕಿದರೆ, ಜೀರ್ಣಕಾರಿ ಸಮಸ್ಯೆಗಳ ಜೊತೆಗೆ ಇದು ದೇಹದಲ್ಲಿನ ಅನೇಕ ರೋಗಗಳನ್ನು ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ. ಅಷ್ಟು ಶಕ್ತಿ ಬೆಲ್ಲಕ್ಕಿದೆ. ಇಂತಹ ಬೆಲ್ಲ ಉಪಯೋಗಿಸಿ ಮಾಡುವ ಬೆಲ್ಲದ ಅನ್ನವನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ಸಾಮಾನ್ಯವಾಗಿ ಬೆಲ್ಲದ ಅನ್ನವನ್ನು ಜಗ್ಗರಿ ರೈಸ್, ಚಾವಲ್ ಬಾತ್, ಗುರ್ ವೇಲ್ ಚಾವಲ್ ಎಂದು ಕರೆಯಲಾಗುತ್ತದೆ. ಈ ರೀತಿ ಬೆಲ್ಲ ಮತ್ತು ಅನ್ನದ ಮಿಶ್ರಣ ಅದರ ಜೊತೆಗೆ ನಿಮಗಿಷ್ಟವಾದಲ್ಲಿ ಡ್ರೈ ಫ್ರೂಟ್ಸ್ ಮತ್ತು ಏಲಕ್ಕಿ ಪುಡಿಯನ್ನು, ಸ್ವಲ್ಪ ಉಪ್ಪನ್ನು ಸೇರಿಸಿಕೊಳ್ಳಬಹುದು. ಇದನ್ನು ಸಿಂಪಲ್ಲಾಗಿ ಮತ್ತು ಸರಳವಾಗಿ ಮಾಡಿಕೊಳ್ಳಬಹುದಾದ ಸಿಹಿ ತಿಂಡಿಯಾದ್ದರಿಂದ ಧಿಡೀರ್ ಆಗಿ ಮಾಡಬಹುದು. ಅದಲ್ಲದೆ ಇದು ಬಾಯಿಗೆ ರುಚಿ ನೀಡುವುದು ಮಾತ್ರವಲ್ಲ, ದೇಹಕ್ಕೆ ಅಗತ್ಯವಾದ ಸಾಕಷ್ಟು ಪೋಷಕಾಂಶಗಳನ್ನು ನೀಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ತೂಕ ಕಡಿಮೆ ಮಾಡಿ, ಮಲಬದ್ಧತೆಯ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಹಾಗಾಗಿ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ದೇಹದಿಂದ ತ್ಯಾಜ್ಯವನ್ನು ಹೊರಹಾಕುತ್ತದೆ.

ಬೆಲ್ಲದ ಅನ್ನ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿ?

  • ನಾವು ಸೇವನೆ ಮಾಡುವ ಬೆಲ್ಲದ ಅನ್ನದಲ್ಲಿ ನಮ್ಮ ದೇಹಕ್ಕೆ ಬೇಕಾಗುವ ಕಬ್ಬಿಣದ ಅಂಶ ಸಾಕಷ್ಟು ಪ್ರಮಾಣದಲ್ಲಿ ಸಿಗುತ್ತದೆ. ಇದು ಕ್ಯಾಲ್ಸಿಯಂ ಮತ್ತು ಇತರ ಪೋಷಕಾಂಶಗಳನ್ನು ಹೊಂದಿರುವುದರಿಂದ ಮೂಳೆಗೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ. ಅಲ್ಲದೆ, ಈ ಬೆಲ್ಲದ ಅಕ್ಕಿಯನ್ನು ತಿನ್ನುವುದು ಹಿಮೋಗ್ಲೋಬಿನ್ ಉತ್ಪಾದನೆಗೂ ಕೂಡ ಸಹಾಯ ಮಾಡುತ್ತದೆ.
  • ಬೆಲ್ಲದ ಅನ್ನ ಸೇವನೆ ಮಾಡುವುದರಿಂದ, ಅದರಲ್ಲಿರುವ ಪೊಟ್ಯಾಸಿಯಮ್ ಅಂಶ ದೇಹಕ್ಕೆ ಸಿಗುತ್ತದೆ. ಜೊತೆಗೆ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಆಯಾಸವನ್ನು ಕಡಿಮೆ ಆಗುತ್ತದೆ. ತ್ವರಿತ ಶಕ್ತಿಯನ್ನು ನೀಡುತ್ತದೆ. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ.
  • ಸಂಧಿವಾತ ಮತ್ತು ಕೀಲು ನೋವಿನಿಂದ ಬಳಲುತ್ತಿರುವವರು, ಬೆಲ್ಲದ ಅನ್ನವನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಇದರಲ್ಲಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿರುವುದರಿಂದ ಇದು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
  • ಅಲ್ಲದೆ, ಬೆಲ್ಲದ ಅನ್ನ ಸೇವನೆ ಮಾಡುವುದರಿಂದ ದೇಹಕ್ಕೆ ಅಗತ್ಯವಿರುವ ರಂಜಕ ಶಕ್ತಿ ಸಿಗುತ್ತದೆ. ಜೊತೆಗೆ ಇದರಲ್ಲಿರುವ ಮ್ಯಾಂಗನೀಸ್, ಸತು ಮತ್ತು ತಾಮ್ರದ ಅಂಶ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯಲು ಸಹಾಯ ಮಾಡುತ್ತದೆ. ಆದರೆ ಈ ಬೆಲ್ಲದ ಅನ್ನವನ್ನು ಸೇವನೆ ಮಾಡುವವರು ಇದನ್ನು ಅತಿಯಾಗಿ ತಿನ್ನಬಾರದು. ಅದರಲ್ಲಿಯೂ ಮಧುಮೇಹ ಇರುವವರು ಬೆಲ್ಲದ ಅನ್ನ ಸೇವನೆ ಮಾಡದಿರುವುದು ತುಂಬಾ ಒಳ್ಳೆಯದು.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇದನ್ನೂ ಓದಿ
Image
ಪ್ರತಿದಿನ ನೀವು ಮಾಡುವ ಈ ತಪ್ಪುಗಳೇ ರಾತ್ರಿ ನಿದ್ರೆಯನ್ನು ಹಾಳುಮಾಡುತ್ತೆ
Image
ಮಹಿಳೆಯರೇ ಈ ರೀತಿ ಲಕ್ಷಣ ಕಂಡು ಬಂದಾಗ ನಿರ್ಲಕ್ಷಿಸಬೇಡಿ
Image
ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ
Image
ಕಣ್ಣುಗಳಲ್ಲಿ ಕಂಡುಬರುವ ತುರಿಕೆ ಈ ರೋಗದ ಮುನ್ಸೂಚನೆ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ