AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಬೇಸಿಗೆಯಲ್ಲಿ ಬೆಲ್ಲದ ನೀರು ಕುಡಿದರೆ ಆ ಕಾಯಿಲೆಗಳು ದೂರ!

ಸುಡು ಬಿಸಿಲಿನ ಬೇಸಿಗೆಯನ್ನು ಯಾರು ಕೂಡ ಇಷ್ಟ ಪಡಲ್ಲ. ಈ ಋತುವಿನಲ್ಲಿ ಹೆಚ್ಚಿನವರು ಮನೆಯೊಳಗೆ ಇರಲು ಇಷ್ಟ ಪಡುತ್ತಾರೆ. ತಣ್ಣನೆಯ ಆಹಾರವನ್ನು ಸೇವಿಸಲು ಇಷ್ಟ ಪಡುವುದು ಸಹಜ. ಅದಲ್ಲದೇ ಬೇಸಿಗೆಯಲ್ಲಿ ಸ್ವಲ್ಪ ಹೊರಗಡೆ ಹೋಗಿ ಬಂದರೂ ಕೂಡ ಬಾಯಾರಿಕೆ ದಣಿವಾಗುವುದು ಸಹಜ. ಹೀಗಾಗಿ ದಣಿವಾರಿಸಿಕೊಳ್ಳಲು ತಂಪು ಪಾನೀಯಗಳನ್ನು ಸೇವಿಸುವವರೇ ಹೆಚ್ಚು. ಆದರೆ ಬೇಸಿಗೆಯಲ್ಲಿ ಬೆಲ್ಲ ನೀರು ಕುಡಿಯುವುದರಿಂದ ಆರೋಗ್ಯ ಲಾಭಗಳಿವೆ ಎನ್ನುವುದು ಅನೇಕರಿಗೆ ತಿಳಿದಿಲ್ಲ.

Health Care Tips in Kannada : ಬೇಸಿಗೆಯಲ್ಲಿ ಬೆಲ್ಲದ ನೀರು ಕುಡಿದರೆ ಆ ಕಾಯಿಲೆಗಳು ದೂರ!
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 26, 2024 | 10:52 AM

Share

ಬೆಲ್ಲವು ಸಿಹಿಕಾರಕವಾಗಿದ್ದು, ಬಾಯಿಗೆ ಒಂದು ತುಂಡು ಬೆಲ್ಲ ಹಾಕಿಕೊಂಡರೆ ಸಾಕು ರಿಲ್ಯಾಕ್ಸ್ ಎನಿಸುತ್ತದೆ. ಎಲ್ಲರಿಗೂ ತಿಳಿದಿರುವಂತೆ ಸಕ್ಕರೆಗೆ ಹೋಲಿಸಿದರೆ ಬೆಲ್ಲವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹೀಗಾಗಿ ಹೆಚ್ಚಿನವರು ಅಡುಗೆ ಹಾಗೂ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಬೆಲ್ಲವನ್ನು ಹೇರಳವಾಗಿ ಬಳಸುತ್ತಾರೆ. ಈ ಬೆಲ್ಲದಲ್ಲಿ ವಿಟಮಿನ್ ಬಿ1, ಬಿ6, ಸಿ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ, ಕಾರ್ಬೋಹೈಡ್ರೇಟ್, ಸೋಡಿಯಂ ಪೋಷಕಾಂಶಗಳು ಹೇರಳವಾಗಿದ್ದು, ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ..

ಬೆಲ್ಲ ನೀರು ಸೇವನೆಯಿಂದ ಆಗುವ ಲಾಭಗಳಿವು

* ರಕ್ತವನ್ನು ಶುದ್ಧೀಕರಿಸುತ್ತದೆ : ಬೇಸಿಗೆಯಲ್ಲಿ ಬೆಲ್ಲದ ನೀರು ಕುದಿಯುವುದರಿಂದ ರಕ್ತ ಶುದ್ದಿಕರಿಸಿ ಆರೋಗ್ಯ ಸಮಸ್ಯೆಯು ಬಾರದಂತೆ ನೋಡಿಕೊಳ್ಳುತ್ತದೆ.

* ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿ : ಬೆಲ್ಲದಲ್ಲಿ ಸತು, ಸೆಲೆನಿಯಮ್ ಅಂಶವು ಹೇರಳವಾಗಿದ್ದು, ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚು ಮಾಡಿ ರೋಗ ನಿರೋಧಕ ಶಕ್ತಿಯನ್ನು ವರ್ಧಿಸುತ್ತದೆ.

* ಮಲಬದ್ಧತೆ ಸಮಸ್ಯೆಯನ್ನು ದೂರವಾಗಿಸುತ್ತದೆ : ಈ ಸಮಯದಲ್ಲಿ ದೇಹದಲ್ಲಿ ನೀರಿನಂಶವು ಕಡಿಮೆಯಾಗಿ ಮಲಬದ್ಧತೆ ಸಮಸ್ಯೆಯು ಕಾಡುವುದಿದೆ. ಬೆಲ್ಲ ನೀರು ಸೇವನೆಯಿಂದ ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

ಇದನ್ನೂ ಓದಿ: ಬೆಲೆ ಕಟ್ಟಲಾಗದ ಬೌದ್ಧಿಕ ಆಸ್ತಿಯ ರಕ್ಷಣೆ ನಮ್ಮೆಲ್ಲರ ಹೊಣೆ!

* ದೇಹದಲ್ಲಿರುವ ವಿಷಕಾರಿ ಅಂಶಗಳು ಹೊರಹಾಕಲು ಸಹಕಾರಿ: ಬೆಲ್ಲ ತಿನ್ನುವುದರಿಂದ ದೇಹವನ್ನು ಡಿಟಾಕ್ಸ್ ಮಾಡುವುದಲ್ಲದೇ ಲಿವರ್‌ನ ಆರೋಗ್ಯವನ್ನು ಕಾಪಾಡುತ್ತದೆ. ದೇಹದ ಪ್ರಮುಖ ಅಂಗಗಳಾದ ಅನ್ನನಾಳ, ಶ್ವಾಸಕೋಶ, ಕರುಳನ್ನು ಶುದ್ಧ ಮಾಡಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.

* ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ: ಬೆಲ್ಲದಲ್ಲಿ ಪೊಟಾಷ್ಯಿಯಂ, ಸೋಡಿಯಂ ಅಂಶವು ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ