AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಬೇಸಿಗೆಯಲ್ಲಿ ಬೆಲ್ಲದ ನೀರು ಕುಡಿದರೆ ಆ ಕಾಯಿಲೆಗಳು ದೂರ!

ಸುಡು ಬಿಸಿಲಿನ ಬೇಸಿಗೆಯನ್ನು ಯಾರು ಕೂಡ ಇಷ್ಟ ಪಡಲ್ಲ. ಈ ಋತುವಿನಲ್ಲಿ ಹೆಚ್ಚಿನವರು ಮನೆಯೊಳಗೆ ಇರಲು ಇಷ್ಟ ಪಡುತ್ತಾರೆ. ತಣ್ಣನೆಯ ಆಹಾರವನ್ನು ಸೇವಿಸಲು ಇಷ್ಟ ಪಡುವುದು ಸಹಜ. ಅದಲ್ಲದೇ ಬೇಸಿಗೆಯಲ್ಲಿ ಸ್ವಲ್ಪ ಹೊರಗಡೆ ಹೋಗಿ ಬಂದರೂ ಕೂಡ ಬಾಯಾರಿಕೆ ದಣಿವಾಗುವುದು ಸಹಜ. ಹೀಗಾಗಿ ದಣಿವಾರಿಸಿಕೊಳ್ಳಲು ತಂಪು ಪಾನೀಯಗಳನ್ನು ಸೇವಿಸುವವರೇ ಹೆಚ್ಚು. ಆದರೆ ಬೇಸಿಗೆಯಲ್ಲಿ ಬೆಲ್ಲ ನೀರು ಕುಡಿಯುವುದರಿಂದ ಆರೋಗ್ಯ ಲಾಭಗಳಿವೆ ಎನ್ನುವುದು ಅನೇಕರಿಗೆ ತಿಳಿದಿಲ್ಲ.

Health Care Tips in Kannada : ಬೇಸಿಗೆಯಲ್ಲಿ ಬೆಲ್ಲದ ನೀರು ಕುಡಿದರೆ ಆ ಕಾಯಿಲೆಗಳು ದೂರ!
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 26, 2024 | 10:52 AM

Share

ಬೆಲ್ಲವು ಸಿಹಿಕಾರಕವಾಗಿದ್ದು, ಬಾಯಿಗೆ ಒಂದು ತುಂಡು ಬೆಲ್ಲ ಹಾಕಿಕೊಂಡರೆ ಸಾಕು ರಿಲ್ಯಾಕ್ಸ್ ಎನಿಸುತ್ತದೆ. ಎಲ್ಲರಿಗೂ ತಿಳಿದಿರುವಂತೆ ಸಕ್ಕರೆಗೆ ಹೋಲಿಸಿದರೆ ಬೆಲ್ಲವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹೀಗಾಗಿ ಹೆಚ್ಚಿನವರು ಅಡುಗೆ ಹಾಗೂ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಬೆಲ್ಲವನ್ನು ಹೇರಳವಾಗಿ ಬಳಸುತ್ತಾರೆ. ಈ ಬೆಲ್ಲದಲ್ಲಿ ವಿಟಮಿನ್ ಬಿ1, ಬಿ6, ಸಿ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ, ಕಾರ್ಬೋಹೈಡ್ರೇಟ್, ಸೋಡಿಯಂ ಪೋಷಕಾಂಶಗಳು ಹೇರಳವಾಗಿದ್ದು, ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ..

ಬೆಲ್ಲ ನೀರು ಸೇವನೆಯಿಂದ ಆಗುವ ಲಾಭಗಳಿವು

* ರಕ್ತವನ್ನು ಶುದ್ಧೀಕರಿಸುತ್ತದೆ : ಬೇಸಿಗೆಯಲ್ಲಿ ಬೆಲ್ಲದ ನೀರು ಕುದಿಯುವುದರಿಂದ ರಕ್ತ ಶುದ್ದಿಕರಿಸಿ ಆರೋಗ್ಯ ಸಮಸ್ಯೆಯು ಬಾರದಂತೆ ನೋಡಿಕೊಳ್ಳುತ್ತದೆ.

* ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿ : ಬೆಲ್ಲದಲ್ಲಿ ಸತು, ಸೆಲೆನಿಯಮ್ ಅಂಶವು ಹೇರಳವಾಗಿದ್ದು, ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚು ಮಾಡಿ ರೋಗ ನಿರೋಧಕ ಶಕ್ತಿಯನ್ನು ವರ್ಧಿಸುತ್ತದೆ.

* ಮಲಬದ್ಧತೆ ಸಮಸ್ಯೆಯನ್ನು ದೂರವಾಗಿಸುತ್ತದೆ : ಈ ಸಮಯದಲ್ಲಿ ದೇಹದಲ್ಲಿ ನೀರಿನಂಶವು ಕಡಿಮೆಯಾಗಿ ಮಲಬದ್ಧತೆ ಸಮಸ್ಯೆಯು ಕಾಡುವುದಿದೆ. ಬೆಲ್ಲ ನೀರು ಸೇವನೆಯಿಂದ ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

ಇದನ್ನೂ ಓದಿ: ಬೆಲೆ ಕಟ್ಟಲಾಗದ ಬೌದ್ಧಿಕ ಆಸ್ತಿಯ ರಕ್ಷಣೆ ನಮ್ಮೆಲ್ಲರ ಹೊಣೆ!

* ದೇಹದಲ್ಲಿರುವ ವಿಷಕಾರಿ ಅಂಶಗಳು ಹೊರಹಾಕಲು ಸಹಕಾರಿ: ಬೆಲ್ಲ ತಿನ್ನುವುದರಿಂದ ದೇಹವನ್ನು ಡಿಟಾಕ್ಸ್ ಮಾಡುವುದಲ್ಲದೇ ಲಿವರ್‌ನ ಆರೋಗ್ಯವನ್ನು ಕಾಪಾಡುತ್ತದೆ. ದೇಹದ ಪ್ರಮುಖ ಅಂಗಗಳಾದ ಅನ್ನನಾಳ, ಶ್ವಾಸಕೋಶ, ಕರುಳನ್ನು ಶುದ್ಧ ಮಾಡಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.

* ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ: ಬೆಲ್ಲದಲ್ಲಿ ಪೊಟಾಷ್ಯಿಯಂ, ಸೋಡಿಯಂ ಅಂಶವು ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್