AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಣ್ಣಿನ ಸೀಸನ್ ಮುಗಿಯುವ ಮೊದಲು ತಿನ್ನಿ, ಇದ್ರಲ್ಲಿ ಸಿಗುವ ಆರೋಗ್ಯ ಪ್ರಯೋಜನ ಯಾವುದರಲ್ಲೂ ಇಲ್ಲ

ನೇರಳೆ ಹಣ್ಣು ಅಥವಾ ಜಾಮೂನ್ ಬಗ್ಗೆ ಸಾಮಾನ್ಯವಾಗಿ ಎಲ್ಲರೂ ಕೇಳಿರುತ್ತಾರೆ. ಕೆಲವರು ಅದರ ರುಚಿಯನ್ನು ನೋಡಿರಬಹುದು. ಆದರೆ ಎಂದಾದರೂ ಇದನ್ನು ಸೇವನೆ ಮಾಡಿದರೆ ಯಾವ ರೀತಿ ಪ್ರಯೋಜನ ಸಿಗುತ್ತದೆ ಎಂಬುದನ್ನು ಯೋಚನೆ ಮಾಡಿದ್ದೀರಾ, ನಿಮಗೆ ತಿಳಿದಿರಲಿ, ಇಂದಿನ ಮಕ್ಕಳಲ್ಲಿ ಅರ್ಧಕ್ಕಿಂತ ಹೆಚ್ಚು ಜನರಿಗೆ ಈ ಹಣ್ಣು ಹೇಗಿರುತ್ತದೆ ಎಂಬುದೇ ತಿಳಿದಿಲ್ಲ ಇದರ ಪರಿಣಾಮ ಮಕ್ಕಳು ಈ ಹಣ್ಣನ್ನು ಸೇವನೆ ಮಾಡುವುದು ದೂರದ ಮಾತು ಅದನ್ನು ನೋಡಿಯೂ ಇರುವುದಿಲ್ಲ. ಆದರೆ ಇಂತಹ ಹಣ್ಣುಗಳಲ್ಲಿಯೇ ಹೇರಳವಾಗಿರುವ ಆರೋಗ್ಯ ಪ್ರಯೋಜನಗಳಿರುತ್ತವೆ ಹಾಗಾಗಿ ಈ ಹಣ್ಣು ಮಾರುಕಟ್ಟೆಗೆ ಬಂದಾಗ ತಪ್ಪದೆ ಸೇವನೆ ಮಾಡಿ.

ಈ ಹಣ್ಣಿನ ಸೀಸನ್ ಮುಗಿಯುವ ಮೊದಲು ತಿನ್ನಿ, ಇದ್ರಲ್ಲಿ ಸಿಗುವ ಆರೋಗ್ಯ ಪ್ರಯೋಜನ ಯಾವುದರಲ್ಲೂ ಇಲ್ಲ
ನೇರಳೆ ಹಣ್ಣು
ಪ್ರೀತಿ ಭಟ್​, ಗುಣವಂತೆ
|

Updated on: Jun 14, 2025 | 5:28 PM

Share

ಋತುಮಾನಕ್ಕೆ ಅನುಗುಣವಾಗಿ ಮಾರುಕಟ್ಟೆಗಳಿಗೆ ಸೀಸನ್ ಫ್ರೂಟ್ (Seasonal Fruit) ಗಳು ಆಗಮಿಸುತ್ತವೆ. ಬಳಿಕ ಅದು ನಮಗೆ ಬೇಕೆಂದರೂ ಸಿಗುವುದಿಲ್ಲ ಹಾಗಾಗಿ ವರ್ಷ ಪೂರ್ತಿ ಸಿಗುವ ಹಣ್ಣನ್ನು ಪ್ರತಿನಿತ್ಯ ಸೇವನೆ ಮಾಡುವುದಕ್ಕಿಂತ ಕಾಲೋಚಿತವಾಗಿ ಸಿಗುವ ಹಣ್ಣುಗಳನ್ನು ಹೆಚ್ಚೆಚ್ಚು ಸೇವನೆ ಮಾಡಿ. ನಾವು ಸೇಬು, ಕಿತ್ತಳೆ, ಮುಸಂಬಿ ಹಣ್ಣುಗಳ ಹೊರತಾಗಿ ಬೇರೆ ಯಾವ ಹಣ್ಣುಗಳನ್ನು ಹೆಚ್ಚಾಗಿ ಸೇವನೆ ಮಾಡುವುದಿಲ್ಲ. ಆದರೆ ಅದು ತಪ್ಪು. ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನಬೇಕು ಅದರಲ್ಲಿಯೂ ನಮ್ಮಲ್ಲಿಯೇ ಬೆಳೆಯುವ ಹಣ್ಣುಗಳು ಮಾರುಕಟ್ಟೆಗೆ ಬಂದಾಗ ಅವುಗಳನ್ನು ಎಂದಿಗೂ ತಿನ್ನದೆ ಇರಬಾರದು. ಇವು ನಮಗೆ ಬೇಕಾದಾಗ ಸಿಗುವುದಿಲ್ಲ ಬದಲಾಗಿ ಅವು ಬಂದಾಗ ನಾವು ಸೇವನೆ ಮಾಡಬೇಕಾಗುತ್ತದೆ. ಅದರಲ್ಲಿಯೂ ಇವುಗಳಲ್ಲಿ ಪೋಷಕಾಂಶಗಳು ಹೇರಳವಾಗಿದ್ದು ನಮ್ಮ ಆರೋಗ್ಯ (Health) ಕಾಪಾಡಲು ಸಹಾಯ ಮಾಡುತ್ತದೆ. ಇಂತಹ ಹಣ್ಣುಗಳಲ್ಲಿ ನೇರಳೆ ಹಣ್ಣು (Jamun Fruit) ಅಥವಾ ಜಾಮೂನ್ ಕೂಡ ಒಂದು. ಇದರಲ್ಲಿ ವಿಟಮಿನ್ ಗಳು ಸಮೃದ್ಧವಾಗಿದ್ದು ನಮ್ಮ ಊಹೆಗೂ ನಿಲುಕದಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಾದರೆ ಇದನ್ನು ಸೇವನೆ ಮಾಡಿದರೆ ಯಾವ ರೀತಿ ಲಾಭಗಳಿವೆ ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಿ.

ಆಯುರ್ವೇದ ತಜ್ಞ ಕಿರಣ್ ಗುಪ್ತಾ ಅವರು ತಿಳಿಸಿರುವ ಮಾಹಿತಿ ಪ್ರಕಾರ, ನೇರಳೆ ಹಣ್ಣಿನ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ. ಅಲ್ಲದೆ ನೇರಳೆ ಹಣ್ಣಿನಲ್ಲಿ ವಿಟಮಿನ್ ಸಿ, ಬಿ12, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿದ್ದು, ಖನಿಜ ಮತ್ತು ನಾರಿನಾಂಶದ ಉತ್ತಮ ಮೂಲವಾಗಿದೆ. ಆದ್ದರಿಂದ, ಇದನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸಿಕೊಳ್ಳುವುದು ನಮ್ಮ ಒಟ್ಟಾರೆ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ ಎಂದು ಅವರು ಹೇಳುತ್ತಾರೆ .

ಇದನ್ನೂ ಓದಿ: ನೇರಳೆ ಹಣ್ಣು ತಿಂದು ಅದರ ಬೀಜ ಎಸೆಯುವ ಮೊದಲು ಅದರ ಉಪಯೋಗ ತಿಳಿಯಿರಿ

ಇದನ್ನೂ ಓದಿ
Image
ಮಲಬದ್ಧತೆಯಿಂದ ಮುಕ್ತಿ ಪಡೆಯಲು ಈ ಎಲೆಯ ರಸ ಸೇವನೆ ಮಾಡಿ ಸಾಕು!
Image
ಇದಕ್ಕೆ ಹೇಳೋದು ವಾರದಲ್ಲಿ ಒಮ್ಮೆಯಾದರೂ ಮಶ್ರೂಮ್ ತಿನ್ನಿ ಅಂತ
Image
ಪಾಪ್‌ಕಾರ್ನ್ vs ಬಾಳೆಹಣ್ಣಿನ ಚಿಪ್ಸ್ ಯಾವುದು ಆರೋಗ್ಯಕರ?
Image
ಮಧುಮೇಹದಿಂದ ಮಲಬದ್ಧತೆವರೆಗೆ ಎಲ್ಲಾ ಸಮಸ್ಯೆಗೂ ಈ ಬಳ್ಳಿಯೇ ಅಮೃತ

ನೇರಳೆ ಹಣ್ಣಿನ ಸೇವನೆಯಿಂದ ಸಿಗುವ ಪ್ರಯೋಜನಗಳು:

  • ಜಾಮೂನ್ ದೇಹಕ್ಕೆ ತಂಪು ನೀಡುತ್ತದೆ. ಈ ಹಣ್ಣಿನ ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜಾಮೂನ್ ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ.
  • ನೇರಳೆ ಅಥವಾ ಜಾಮೂನ್ ಹಣ್ಣು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಈ ಹಣ್ಣುಗಳು ಆಂಥೋಸಯಾನಿನ್‌ಗಳು ಎಂಬ ಅಂಶವನ್ನು ಹೊಂದಿದ್ದು, ಇದನ್ನು ಸೇವನೆ ಮಾಡುವುದು ನಮ್ಮ ಜೀವಕೋಶಗಳಿಗೆ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.
  • ಈ ಹಣ್ಣುಗಳಲ್ಲಿ ಕಬ್ಬಿಣದ ಅಂಶ ಹೇರಳವಾಗಿದ್ದು ಇದು ರಕ್ತದ ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಇದು ರಕ್ತಹೀನತೆಯನ್ನು ಕೂಡ ಸರಿದೂಗಿಸುತ್ತದೆ.
  • ನೇರಳೆ ಅಥವಾ ಜಾಮೂನ್ ಹಣ್ಣಿನಲ್ಲಿ ಕ್ಯಾಲೋರಿ ತುಂಬಾ ಕಡಿಮೆ ಇರುವುದರಿಂದ, ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಸಹ ಇದು ಸಹಾಯ ಮಾಡುತ್ತದೆ. ಏಕೆಂದರೆ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೈಬರ್ ಅಂಶವಿದೆ. ಪರಿಣಾಮವಾಗಿ, ಇದನ್ನು ತಿಂದ ನಂತರ, ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದರಿಂದ ಅತಿಯಾಗಿ ತಿನ್ನುವ ಅಭ್ಯಾಸ ನಿಯಂತ್ರಣಕ್ಕೆ ಬರುತ್ತದೆ. ಹಾಗಾಗಿ ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
  • ಇದರಲ್ಲಿ ಆಂಟಿಆಕ್ಸಿಡೆಂಟ್‌ಗಳು ಮತ್ತು ವಿಟಮಿನ್ ಸಿ ಇದ್ದು, ಇದು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಒಂದು ದಿನಕ್ಕೆ ಸುಮಾರು 200 ಗ್ರಾಂ ನೇರಳೆ ಹಣ್ಣನು ಆರೋಗ್ಯವಂತ ವ್ಯಕ್ತಿ ಸೇವಿಸಬಹುದು ಎಂದು ತಜ್ಞರು ಹೇಳಿದ್ದಾರೆ. ಆದರೂ ಕೂಡ, ನಿಮ್ಮ ದೇಹದ ಅಗತ್ಯಗಳಿಗೆ ಅನುಗುಣವಾಗಿ ಇದನ್ನು ಸೀಮಿತ ಪ್ರಮಾಣದಲ್ಲಿ ಸೇವನೆ ಮಾಡುವುದು ಬಹಳ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್