AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ನಿಧನದಿಂದ ಹೃದಯ ತಪಾಸಣೆಗೆಂದು ಜಯದೇವ ಆಸ್ಪತ್ರೆಗೆ ಆಗಮಿಸುತ್ತಿರುವ ಜನರು; ಡಾ. ಸಿ ಎನ್ ಮಂಜುನಾಥ್ ನೀಡಿದ ಸಲಹೆಗಳು ಇಲ್ಲಿವೆ

ಆರೋಗ್ಯ ತಪಾಸಣೆಗಾಗಿ ಜಯದೇವ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಇದರಲ್ಲಿ ಜಿಮ್ ಮಾಡೊವರೆ ಹೆಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಪುನೀತ್ ನಿಧನದಿಂದ ಹೃದಯ ತಪಾಸಣೆಗೆಂದು ಜಯದೇವ ಆಸ್ಪತ್ರೆಗೆ ಆಗಮಿಸುತ್ತಿರುವ ಜನರು; ಡಾ. ಸಿ ಎನ್ ಮಂಜುನಾಥ್ ನೀಡಿದ ಸಲಹೆಗಳು ಇಲ್ಲಿವೆ
ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್
Follow us
TV9 Web
| Updated By: sandhya thejappa

Updated on:Nov 01, 2021 | 2:25 PM

ಬೆಂಗಳೂರು: ನಟ ಪುನೀತ್ ರಾಜ್​ಕುಮಾರ್ ಹಠಾತ್ ವಿಧಿವಶ ಹಿನ್ನೆಲೆ ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಾದಂತೆ ಕಾಣಿಸುತ್ತಿದೆ. ಆರೋಗ್ಯ ತಪಾಸಣೆಗಾಗಿ ಜನರು ಆಸ್ಪತ್ರೆಗಳತ್ತ ಆಗಮಿಸುತ್ತಿದ್ದಾರೆ. ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಜನರು ಆಗಮಿಸಿ ಹೃದಯ ಸಂಬಂಧ ತಪಾಸಣೆಗೆ ಮುಂದಾಗುತ್ತಿದ್ದಾರೆ. ಸಣ್ಣಪುಟ್ಟ ಸಮಸ್ಯೆ ಇರುವವರೂ ಹೃದಯ ತಪಾಸಣೆ ಮಾಡಿಕೊಳ್ಳುತ್ತಿದ್ದಾರೆ. ಜಯದೇವ ಆಸ್ಪತ್ರೆಗೆ ಇವತ್ತು ಒಂದೇ ದಿನಕ್ಕೆ ಸುಮಾರು 1,270 ಜನರು ಆರೋಗ್ಯ ತಪಾಸಣೆಗೆಂದು ಬಂದಿದ್ದಾರೆ.

ಆರೋಗ್ಯ ತಪಾಸಣೆಗಾಗಿ ಜಯದೇವ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಇದರಲ್ಲಿ ಜಿಮ್ ಮಾಡುವವರೆ ಹೆಚ್ಚಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಕಾಲಿಕ ಅಗಲಿಕೆ ಜನರಿಗೆ ಭಯ ಹುಟ್ಟಿಸಿರುವುದು ಸ್ಪಷ್ಟವಾಗಿದೆ. ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಸ್ಪತ್ರೆಯತ್ತ ಬರುತ್ತಿದ್ದು, ಜಯದೇವ ಆಸ್ಪತ್ರೆ ಹೌಸ್ ಫುಲ್ ಆಗಿದೆ.

ವೈದ್ಯರ ಸಲಹೆ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ ಸುದ್ದಿಗೋಷ್ಠಿ ನಡೆಸಿ, ಹೃದಯಕ್ಕೆ ಸಂಬಂಧಿಸಿದ ಕೆಲ ಸಲಹೆಗಳನ್ನು ನೀಡಿದ್ದಾರೆ. ವ್ಯಾಯಾಮ ಮಾಡುವುದು ತುಂಬಾ ಒಳ್ಳೆಯ ಅಭ್ಯಾಸ. ಆದರೆ ಅತಿರೇಖವಾಗಿ ವರ್ಕೌಟ್ ಮಾಡುವುದು ಒಳ್ಳೆಯದಲ್ಲ. ಉದಾಹರಣೆಗೆ 30 ಕೆಜಿ ಭಾರ ಎತ್ತುವ ಸಾಮರ್ಥ್ಯವನ್ನು ಹೊಂದಿರುವ ವ್ಯಕ್ತಿ 70 ಕೆಜಿ ಭಾರವನ್ನು ಎತ್ತಬಾರದು. ವ್ಯಾಯಾಮದ ಜೊತೆಗೆ ಮಿತವಾದ ಆಹಾರವನ್ನು ಸೇವಿಸಬೇಕು. ಒಂದೆರೆಡು ಕೇಸ್​ಗಳಿಂದ ಜಿಮ್ ಮಾಡುವುದು ಬೇಡ ಅಂತ ಹೇಳುವುದು ಸರಿಯಲ್ಲ. ಆದರೆ ಮಿತವಾಗಿರಬೇಕು. ಪ್ರೋಟೀನ್ ಆಹಾರವನ್ನು ಸೇರಿಸಬೇಕು. ಸೇವಿಸುವ ಆಹಾರದಲ್ಲಿ ಕಾಳುಗಳು ಹೆಚ್ಚಿರಬೇಕು. ಮೊಟ್ಟೆ ಸೇವಿಸಬೇಕು ಅಂತ ತಿಳಿಸಿದರು.

ದೇಹದ ತೂಕ ಕಡಿಮೆ ಇರುತ್ತದೆ. ಆದರೆ ಹೊಟ್ಟೆ ಮುಂದೆ ಬಂದಿರುತ್ತದೆ. ಇದು ಸಕ್ಕರೆ ಕಾಯಿಲೆ ಮತ್ತು ಹೃದಯಕ್ಕೆ ಹೆಚ್ಚು ಸಮಸ್ಯೆಯಾಗುತ್ತದೆ. ಹೀಗಾಗಿ ದಿನಕ್ಕೆ 40 ನಿಮಿಷ ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡಿದ ಡಾ. ಸಿ ಎನ್ ಮಂಜುನಾಥ್, ನಿಮ್ಮ ನಿಮ್ಮ ಶರೀರಕ್ಕೆ ಅನುಗುಣವಾಗಿ, ವಯಸ್ಸಿಗೆ ತಕ್ಕಂತೆ ವ್ಯಾಯಾಮ ಮಾಡಬೇಕು ಎಂದರು.

ಇದನ್ನೂ ಓದಿ

ಪುನೀತ್​ ಅಂತ್ಯಕ್ರಿಯೆ ಮರುದಿನ ಹೇಗಿದೆ ಶಿವಣ್ಣನ ದಿನಚರಿ? ನೋವು ನುಂಗಿಕೊಂಡು ಮುಂದಿನ ಹೆಜ್ಜೆ ಇಟ್ಟ ಶಿವರಾಜ್​ಕುಮಾರ್

‘ನನ್ನ ಮಗ ಸತ್ತರೂ ಇಷ್ಟು ಬೇಜಾರು ಆಗುತ್ತಿರಲಿಲ್ಲ’; ‘ರಾಜಕುಮಾರ’ ಚಿತ್ರ ನೋಡಿ ಮಹಿಳಾ ಅಭಿಮಾನಿ ಕಣ್ಣೀರು

Published On - 2:09 pm, Mon, 1 November 21

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!