AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

ಎರಡು ವರ್ಷ ರಾಜ್ಯಕ್ಕೆ ಕಷ್ಟವಿದ್ದಾಗ ಇವರ ಸೇವೆ ಪಡೆದು, ಈಗ ಎಕಾಏಕಿ ಬೇಡ ಎನ್ನುವುದು ಸರಿಯಲ್ಲ. ಆದಷ್ಟು ಇವರ ಸೇವೆಯನ್ನು ಮುಂದುವರೆಸಬೇಕು ಹಾಗೂ ಬಿಬಿಎಂಪಿ ವತಿಯಿಂದ ಬೆಂಗಳೂರಿನ ಎಲ್ಲ ವಾರ್ಡುಗಳಲ್ಲಿ ತೆರೆಯಲಿರುವ ನಮ್ಮ ಕ್ಲಿನಿಕ್ ಗಳಿಗೆ ಆದರೂ ಇವರ ಸೇವೆಯನ್ನು ಪಡೆದುಕೊಳ್ಳಬೇಕು - ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ

BBMP: ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
ಮತ್ತೆ ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on:Mar 22, 2022 | 7:26 PM

Share

ಬೆಂಗಳೂರು: ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಇಂದು ಮತ್ತೊಮ್ಮೆ ಕಿಡಿಕಾರಿದ್ದಾರೆ. ಕೋವಿಡ್ 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್ ಮತ್ತು ದಂತ ವೈದ್ಯರನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿತ್ತು. ಆದರೆ ಈಗ ಕೊರೊನಾ ಇಲ್ಲವಾಗಿದ್ದು, ಈ ವೈದ್ಯರ ಅಗತ್ಯ ಬಿಬಿಎಂಪಿ ಬೇಡವಾಗಿದೆ. ಹಾಗಾಗಿ ಅವರನ್ನೆಲ್ಲ ಸಾರಾಸಗಟಾಗಿ ಮನೆಗೆ ಹೋಗಿ ಎಂದಿದೆ. ಇದನ್ನು ಪ್ರಶ್ನಿಸಿ, ಹೀಗೆ ಮಾಡುವುದು ಯಾವ ನ್ಯಾಯ? ಎಂದು ಕುಮಾರಸ್ವಾಮಿ BBMP ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಲಾ ಬಾಲಕಿಯೊಬ್ಬಳು ಬಿಬಿಎಂಪಿ ಬೇಜವಾಬ್ದಾರಿತನದಿಂದಾಗಿ ಮೃತಪಟ್ಟ ಹಿನ್ನೆಲೆಯಲ್ಲಿ BBMP ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು (JDS leader HD Kumaraswamy) ಟ್ವೀಟ್​ ಮಾಡಿ, ಮೊದಲು BBMP ಯನ್ನು ಸ್ವಚ್ಛಗೊಳಿಸಬೇಕು ಎಂದು ಗುಡುಗಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್​ ಸಾರಾಂಶ ಹೀಗಿದೆ:

ಆಗತ್ಯ ಇದ್ದಾಗ ಕೆಲಸ ಮಾಡಿಸಿಕೊಂಡು, ಅಗತ್ಯ ಇಲ್ಲದಿದ್ದಾಗ ಮನೆಗೆ ಹೋಗಿ ಎನ್ನುವುದು ಯಾವ ನ್ಯಾಯ? ಕೋವಿಡ್ 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್, ದಂತ ವೈದ್ಯರನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿತ್ತು.

ಆಗತ್ಯ ಇದ್ದಾಗ ಕೆಲಸ ಮಾಡಿಸಿಕೊಂಡು, ಅಗತ್ಯ ಇಲ್ಲದಿದ್ದಾಗ ಮನೆಗೆ ಹೋಗಿ ಎನ್ನುವುದು ಯಾವ ನ್ಯಾಯ? ಕೋವಿಡ್ 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್, ದಂತ ವೈದ್ಯರನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿತ್ತು. 1/3 https://t.co/WiefhbpO9e

ಎರಡು ವರ್ಷ ರಾಜ್ಯಕ್ಕೆ ಕಷ್ಟವಿದ್ದಾಗ ಇವರ ಸೇವೆ ಪಡೆದು, ಈಗ ಎಕಾಏಕಿ ಬೇಡ ಎನ್ನುವುದು ಸರಿಯಲ್ಲ. ಆದಷ್ಟು ಇವರ ಸೇವೆಯನ್ನು ಮುಂದುವರೆಸಬೇಕು ಹಾಗೂ ಬಿಬಿಎಂಪಿ ವತಿಯಿಂದ ಬೆಂಗಳೂರಿನ ಎಲ್ಲ ವಾರ್ಡುಗಳಲ್ಲಿ ತೆರೆಯಲಿರುವ ನಮ್ಮ ಕ್ಲಿನಿಕ್ ಗಳಿಗೆ ಆದರೂ ಇವರ ಸೇವೆಯನ್ನು ಪಡೆದುಕೊಳ್ಳಬೇಕು. 2/3

ಉತ್ಸಾಹಿ ತರುಣರಾದ ಇವರೆಲ್ಲರೂ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವುದರಲ್ಲಿ ಸಂಶಯವಿಲ್ಲ. ಎರಡು ವರ್ಷಗಳ ತುರ್ತು ಸಂದರ್ಭದಲ್ಲಿ ಕೆಲಸ ಮಾಡಿದ ಅನುಭವ ಕೂಡ ಇವರಿಗಿದೆ. @CMofKarnataka ಅವರು ಇವರಿಗೆ ಅನುಕೂಲ ಮಾಡಿಕೊಡಬೇಕು. 3/3

Published On - 7:23 pm, Tue, 22 March 22

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ