AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

ಎರಡು ವರ್ಷ ರಾಜ್ಯಕ್ಕೆ ಕಷ್ಟವಿದ್ದಾಗ ಇವರ ಸೇವೆ ಪಡೆದು, ಈಗ ಎಕಾಏಕಿ ಬೇಡ ಎನ್ನುವುದು ಸರಿಯಲ್ಲ. ಆದಷ್ಟು ಇವರ ಸೇವೆಯನ್ನು ಮುಂದುವರೆಸಬೇಕು ಹಾಗೂ ಬಿಬಿಎಂಪಿ ವತಿಯಿಂದ ಬೆಂಗಳೂರಿನ ಎಲ್ಲ ವಾರ್ಡುಗಳಲ್ಲಿ ತೆರೆಯಲಿರುವ ನಮ್ಮ ಕ್ಲಿನಿಕ್ ಗಳಿಗೆ ಆದರೂ ಇವರ ಸೇವೆಯನ್ನು ಪಡೆದುಕೊಳ್ಳಬೇಕು - ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ

BBMP: ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
ಮತ್ತೆ ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: ಸಾಧು ಶ್ರೀನಾಥ್​|

Updated on:Mar 22, 2022 | 7:26 PM

Share

ಬೆಂಗಳೂರು: ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಇಂದು ಮತ್ತೊಮ್ಮೆ ಕಿಡಿಕಾರಿದ್ದಾರೆ. ಕೋವಿಡ್ 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್ ಮತ್ತು ದಂತ ವೈದ್ಯರನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿತ್ತು. ಆದರೆ ಈಗ ಕೊರೊನಾ ಇಲ್ಲವಾಗಿದ್ದು, ಈ ವೈದ್ಯರ ಅಗತ್ಯ ಬಿಬಿಎಂಪಿ ಬೇಡವಾಗಿದೆ. ಹಾಗಾಗಿ ಅವರನ್ನೆಲ್ಲ ಸಾರಾಸಗಟಾಗಿ ಮನೆಗೆ ಹೋಗಿ ಎಂದಿದೆ. ಇದನ್ನು ಪ್ರಶ್ನಿಸಿ, ಹೀಗೆ ಮಾಡುವುದು ಯಾವ ನ್ಯಾಯ? ಎಂದು ಕುಮಾರಸ್ವಾಮಿ BBMP ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಲಾ ಬಾಲಕಿಯೊಬ್ಬಳು ಬಿಬಿಎಂಪಿ ಬೇಜವಾಬ್ದಾರಿತನದಿಂದಾಗಿ ಮೃತಪಟ್ಟ ಹಿನ್ನೆಲೆಯಲ್ಲಿ BBMP ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು (JDS leader HD Kumaraswamy) ಟ್ವೀಟ್​ ಮಾಡಿ, ಮೊದಲು BBMP ಯನ್ನು ಸ್ವಚ್ಛಗೊಳಿಸಬೇಕು ಎಂದು ಗುಡುಗಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್​ ಸಾರಾಂಶ ಹೀಗಿದೆ:

ಆಗತ್ಯ ಇದ್ದಾಗ ಕೆಲಸ ಮಾಡಿಸಿಕೊಂಡು, ಅಗತ್ಯ ಇಲ್ಲದಿದ್ದಾಗ ಮನೆಗೆ ಹೋಗಿ ಎನ್ನುವುದು ಯಾವ ನ್ಯಾಯ? ಕೋವಿಡ್ 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್, ದಂತ ವೈದ್ಯರನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿತ್ತು.

ಆಗತ್ಯ ಇದ್ದಾಗ ಕೆಲಸ ಮಾಡಿಸಿಕೊಂಡು, ಅಗತ್ಯ ಇಲ್ಲದಿದ್ದಾಗ ಮನೆಗೆ ಹೋಗಿ ಎನ್ನುವುದು ಯಾವ ನ್ಯಾಯ? ಕೋವಿಡ್ 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್, ದಂತ ವೈದ್ಯರನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿತ್ತು. 1/3 https://t.co/WiefhbpO9e

ಎರಡು ವರ್ಷ ರಾಜ್ಯಕ್ಕೆ ಕಷ್ಟವಿದ್ದಾಗ ಇವರ ಸೇವೆ ಪಡೆದು, ಈಗ ಎಕಾಏಕಿ ಬೇಡ ಎನ್ನುವುದು ಸರಿಯಲ್ಲ. ಆದಷ್ಟು ಇವರ ಸೇವೆಯನ್ನು ಮುಂದುವರೆಸಬೇಕು ಹಾಗೂ ಬಿಬಿಎಂಪಿ ವತಿಯಿಂದ ಬೆಂಗಳೂರಿನ ಎಲ್ಲ ವಾರ್ಡುಗಳಲ್ಲಿ ತೆರೆಯಲಿರುವ ನಮ್ಮ ಕ್ಲಿನಿಕ್ ಗಳಿಗೆ ಆದರೂ ಇವರ ಸೇವೆಯನ್ನು ಪಡೆದುಕೊಳ್ಳಬೇಕು. 2/3

ಉತ್ಸಾಹಿ ತರುಣರಾದ ಇವರೆಲ್ಲರೂ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವುದರಲ್ಲಿ ಸಂಶಯವಿಲ್ಲ. ಎರಡು ವರ್ಷಗಳ ತುರ್ತು ಸಂದರ್ಭದಲ್ಲಿ ಕೆಲಸ ಮಾಡಿದ ಅನುಭವ ಕೂಡ ಇವರಿಗಿದೆ. @CMofKarnataka ಅವರು ಇವರಿಗೆ ಅನುಕೂಲ ಮಾಡಿಕೊಡಬೇಕು. 3/3

Published On - 7:23 pm, Tue, 22 March 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!