AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀಲು ನೋವು, ಮೊಣಕಾಲುಗಳ ಊತ: ಮಕ್ಕಳಲ್ಲೂ ಕಂಡು ಬರುತ್ತಿದೆ ಈ ಸಮಸ್ಯೆ, ಅಧ್ಯಯನದ ವರದಿ ಇಲ್ಲಿದೆ

ಮಕ್ಕಳಲ್ಲಿ ಕೀಲುಗಳಲ್ಲಿ ನೋವು, ಮೊಣಕಾಲುಗಳ ಬಿಗಿತ ಅಥವಾ ಊತ ಹೀಗೆ ಅನೇಕ ಆರೋಗ್ಯ ಸಮಸ್ಯೆಗಳು ಪತ್ತೆಯಾಗುತ್ತಿದೆ. ಈ ಬಗ್ಗೆ ಪೋಷಕರು ನಿರ್ಲಕ್ಷ ಮಾಡದೇ ವೈದ್ಯರನ್ನು ಸಂಪರ್ಕಿಸಿ, ಪರೀಕ್ಷೆ ಮಾಡಿಸಿಕೊಳ್ಳಿ. ಇದನ್ನು ಎಂದಿಗೂ ಲಘುವಾಗಿ ತೆಗೆದುಕೊಳ್ಳಬೇಡಿ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

ಕೀಲು ನೋವು, ಮೊಣಕಾಲುಗಳ ಊತ: ಮಕ್ಕಳಲ್ಲೂ ಕಂಡು ಬರುತ್ತಿದೆ ಈ ಸಮಸ್ಯೆ, ಅಧ್ಯಯನದ ವರದಿ ಇಲ್ಲಿದೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 31, 2023 | 6:12 PM

Share

ಇತ್ತೀಚಿನ ದಿನಗಳಲ್ಲಿ ಸಂಧಿವಾತವು ವಯಸ್ಕರನ್ನು ಮಾತ್ರ ಬಾಧಿಸುತ್ತಿಲ್ಲ, ಬದಲಾಗಿ ಮಕ್ಕಳಲ್ಲಿಯೂ ಕಂಡು ಬರುತ್ತಿದೆ. ತಜ್ಞರ ಪ್ರಕಾರ, ಯುವಕರ ಜೊತೆಗೆ ಮಕ್ಕಳಲ್ಲಿಯೂ ಸಹ ಜುವೆನೈಲ್ ಇಡಿಯೋಪತಿಕ್ ಆರ್ಥ್ರೈಟಿಸ್ (juvenile idiopathic arthritis) ಎಂಬ ಸಂಧಿವಾತದಿಂದ ಬಳಲುತ್ತಿದ್ದಾರೆ. ವೈದ್ಯರ ಪ್ರಕಾರ, ಈ ಸಂಧಿವಾತ ಪ್ರತಿ ವರ್ಷ ಹತ್ತು ಸಾವಿರ ಹದಿಹರೆಯದವರಲ್ಲಿ ಒಬ್ಬರ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಕಳವಳಕಾರಿ ವಿಷಯವನ್ನು ಅಧ್ಯಯಯನದಿಂದ ಬಹಿರಂಗಗೊಂಡಿದೆ. ಮಕ್ಕಳ ಕೀಲುಗಳಲ್ಲಿ ನೋವು, ಮೊಣಕಾಲುಗಳ ಬಿಗಿತ ಅಥವಾ ಊತದದಿಂದ ಬಳಲುತ್ತಿದ್ದಾರೆ. ಅದನ್ನು ಲಘುವಾಗಿ ತೆಗೆದುಕೊಳ್ಳದೆಯೇ, ಮೊದಲು ವೈದ್ಯರನ್ನು ಸಂಪರ್ಕಿಸಿ. ವೈದ್ಯರು ನೀಡಿರುವ ಮಾಹಿತಿ ಪ್ರಕಾರ, ರುಮಟಾಯ್ಡ್ ಸಂಧಿವಾತವು ವಯಸ್ಕರ ಜನಸಂಖ್ಯೆಯಲ್ಲಿ ಸುಮಾರು 1% ರಷ್ಟು ಪರಿಣಾಮ ಬೀರುವ ಪ್ರಚಲಿತ ಸ್ಥಿತಿಯಾಗಿದ್ದು, ಮಕ್ಕಳಲ್ಲಿ ಕಂಡು ಬರುವ ಅದೇ ಸ್ಥಿತಿಯನ್ನು ಜುವೆನೈಲ್ ಇಡಿಯೋಪತಿಕ್ ಆರ್ಥ್ರೈಟಿಸ್ ಎಂದು ಕರೆಯಲಾಗುತ್ತದೆ.

ಆಸ್ಟರ್ ಸಿಎಂಐ ಆಸ್ಪತ್ರೆಯ ಕನ್ಸಲ್ಟೆಂಟ್ (ಪೀಡಿಯಾಟ್ರಿಕ್ ಇಮ್ಯುನಾಲಜಿ ಮತ್ತು ರುಮಟಾಲಜಿ) ಡಾ. ಸಾಗರ್ ಭಟ್ಟಾಡ್, 2 ರಿಂದ 3 ವರ್ಷ ಮತ್ತು 16 ವರ್ಷದವರೆಗಿನ ಮಕ್ಕಳು ಜುವೆನೈಲ್ ಇಡಿಯೋಪತಿಕ್ ಸಂಧಿವಾತದಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ, “ನಾನು ಪ್ರತಿ ತಿಂಗಳು 15 ಹೊಸ ರೋಗಿಗಳನ್ನು ನೋಡುತ್ತೇನೆ. ಅವರು ಜುವೆನೈಲ್ ಇಡಿಯೋಪತಿಕ್ ಸಂಧಿವಾತದಿಂದ ಬಳಲುತ್ತಿದ್ದಾರೆ. ಅವುಗಳಲ್ಲಿ 20% ಮಕ್ಕಳಲ್ಲಿ ತಡವಾಗಿ ಅವರಿಗೆ ಚಿಕಿತ್ಸೆ ನೀಡಿರುವುದರಿಂದ, ದೀರ್ಘಕಾಲದ ಪ್ರಕರಣಗಳು (ದೇಹದ ವಿರೂಪಗಳೊಂದಿಗೆ) ಕಂಡುಬರುತ್ತಿದೆ” ಎಂದು ಡಾ. ಸಾಗರ್ ಮಾಹಿತಿ ನೀಡಿದ್ದಾರೆ.

ಹಾಗಾಗಿ ಜುಲೈ ತಿಂಗಳನ್ನು ಸಂಧಿವಾತ ಜಾಗೃತಿ ತಿಂಗಳು ಎಂದು ಆಚರಿಸುವುದರೊಂದಿಗೆ, ಈ ರೋಗದ ಬಗ್ಗೆ ನಿರ್ಲಕ್ಷಿಸಬಾರದು ಎಂಬ ಧ್ಯೇಯ ವಾಕ್ಯದೊಂದಿಗೆ ವೈದ್ಯರು ಜಾಗೃತಿ ಮೂಡಿಸುತ್ತಿದ್ದಾರೆ. ಬೆಳೆಯುತ್ತಿರುವ (3 ರಿಂದ 8) ಮಕ್ಕಳು ಆಗಾಗ ಕೀಲು ನೋವುಗಳ ಬಗ್ಗೆ ತಮ್ಮ ಪೋಷಕರಲ್ಲಿ ದೂರುತ್ತಿದ್ದಾರೆ, ಆದರೆ ಅದನ್ನು ಪೋಷಕರು ಗಂಭೀರವಾಗಿ ಪರಿಗಣಿಸುವುದಿಲ್ಲ ಏಕೆಂದರೆ ಆ ವಯಸ್ಸಿನಲ್ಲಿ ಸಂಧಿವಾತ ಸಂಭಾವಿಸಲಾರದು ಎಂದು ಅವರು ಭಾವಿಸುತ್ತಾರೆ. ವೈದ್ಯರ ಪ್ರಕಾರ, ಮೊಣಕಾಲುಗಳ ಊತವು ಜುವೆನೈಲ್ (ಚಿಕ್ಕ ವಯಸ್ಸಿನ) ಇಡಿಯೋಪತಿಕ್ ಸಂಧಿವಾತದ ಮೊದಲ ಲಕ್ಷಣ ಅಥವಾ ಚಿಹ್ನೆಯಾಗಿದೆ. ಡಾ. ಸಾಗರ್ ಅವರು ತಮ್ಮ ಆಸ್ಪತ್ರೆಯಲ್ಲಿ ಐದು ವರ್ಷಗಳಲ್ಲಿ 500 ಮಕ್ಕಳು ಜುವೆನೈಲ್ ಇಡಿಯೋಪತಿಕ್ ಸಂಧಿವಾತದಿಂದ ಬಳಲುತ್ತಿದ್ದಾರೆ ಎಂಬ ತಿಳಿಸಿದ್ದಾರೆ.

ಇದನ್ನೂ ಓದಿ: ಚಳಿಗಾಲದಲ್ಲಿ ಕೀಲು ನೋವು ಕಾಡುತ್ತಿದೆಯೇ?; ಸಂಧಿವಾತವನ್ನು ನಿಯಂತ್ರಿಸಲು ನೈಸರ್ಗಿಕ ಪರಿಹಾರ ಇಲ್ಲಿದೆ

ಜುವೆನೈಲ್ ಇಡಿಯೋಪತಿಕ್ ಆರ್ಥ್ರೈಟಿಸ್ ಒಂದು ಸ್ವಯಂ ನಿರೋಧಕ ಕಾಯಿಲೆಯಾಗಿದ್ದು, ಇದು ಹಲವಾರು ತಿಂಗಳುಗಳವರೆಗೆ ನಮ್ಮನ್ನು ಕಾಡುತ್ತದೆ. ಒಂದು ಮಗು, ವಿಶೇಷವಾಗಿ ಬೆಳೆಯುವ ವಯಸ್ಸಿನಲ್ಲಿ, ದೇಹದ ಅಂಗಗಳು ಸಮರ್ಪಕವಾಗಿ ಬೆಳೆಯದಿರುವುದು. ಇನ್ನೂ ಅನೇಕ ಶಾಶ್ವತ ಸಮಸ್ಯೆಗಳಿಂದ ಬಳಲುತ್ತದೆ. ಇದೆಲ್ಲದರಿಂದ ಶಾಲೆಯಲ್ಲಿ ಮುಜುಗರಕ್ಕೆ ಅಥವಾ ಅಪಹಾಸ್ಯಕ್ಕೆ ಒಳಲಾಗಿ ಮಾಸಿಕವಾಗಿ ಕುಗ್ಗಿ ಶಾಲೆಗೆ ಹೋಗಲು ಹಿಂಜರಿಯಬಹುದು. ಈ ಎಲ್ಲ ಅಂಶಗಳು ಜೀವನದ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಕಾಲಾನಂತರದಲ್ಲಿ ಇದಕ್ಕೆ ಚಿಕಿತ್ಸೆ ಲಭ್ಯವಿದ್ದಾಗ ಮಾತ್ರ, ಮಕ್ಕಳು ಆರೋಗ್ಯಕರ ವಯಸ್ಕರಾಗಿ ಬೆಳೆಯಲು ಸಾಧ್ಯ.

“ಸ್ಥಿತಿ ಹದಗೆಡುವುದನ್ನು ತಪ್ಪಿಸಲು ಆರಂಭಿಕ ಹಂತದಲ್ಲಿ ಅದನ್ನು ಗುರುತಿಸುವುದು ಮುಖ್ಯವಾಗಿರುತ್ತದೆ. ಮತ್ತು ಇದು ಚಿಕಿತ್ಸೆಗೂ ಸಹಾಯವಾಗುತ್ತದೆ ಎಂದು ಡಾ. ಸಾಗರ್ ಹೇಳಿದ್ದಾರೆ. ಜುವೆನೈಲ್ ಇಡಿಯೋಪತಿಕ್ ಸಂಧಿವಾತದಲ್ಲಿ, ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಸಾಮಾನ್ಯವಾಗಿ ಸೋಂಕುಗಳ ವಿರುದ್ಧ ಹೋರಾಡಲು ಮತ್ತು ಕಡಿತ ಮತ್ತು ಗಾಯವನ್ನು ಗುಣಪಡಿಸಲು ಸಹಾಯ ಮಾಡುವುದಿಲ್ಲ, ಬದಲಾಗಿ ಅವು ಕೆಲವು ಆರೋಗ್ಯಕರ ಕೋಶಗಳು ಮತ್ತು ಅಂಗಾಂಶಗಳ ಮೇಲೆ ತಪ್ಪಾಗಿ ದಾಳಿ ಮಾಡುತ್ತದೆ ಎಂದು ಅಧ್ಯಯನಗಳು ವಿವರಿಸಿವೆ. ಹಾಗಾಗಿ ಮೊದಲು ಎಚ್ಛೆತ್ತುಕೊಂಡು, ನಿರ್ಲಕ್ಷ್ಯ ಮಾಡದೇ ವೈದ್ಯರನ್ನು ಸಂಪರ್ಕಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!