Women Health: ಹೆರಿಗೆಯ ನಂತರ ಲೈಂಗಿಕ ಜೀವನ ಎಷ್ಟು ಕಷ್ಟ? ನಟಿ ಕಲ್ಕಿ ಕೊಚ್ಲಿನ್ ಮುಕ್ತ ಮಾತು

ಕಲ್ಕಿ ಕೊಚ್ಲಿನ್ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಹೆರಿಗೆ ತನ್ನ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಿತು, ಜೊತೆಗೆ ಹೆರಿಗೆಯ ನಂತರ ಲೈಂಗಿಕ ಜೀವನ ಎಷ್ಟು ಕಷ್ಟ ಎಂಬುದರ ಬಗ್ಗೆ ಹಿಂಜರಿಯದೆ ಮುಕ್ತವಾಗಿ ಮಾತನಾಡಿದ್ದಾರೆ.

Women Health: ಹೆರಿಗೆಯ ನಂತರ ಲೈಂಗಿಕ ಜೀವನ ಎಷ್ಟು ಕಷ್ಟ? ನಟಿ ಕಲ್ಕಿ ಕೊಚ್ಲಿನ್ ಮುಕ್ತ ಮಾತು
Kalki Koechlin
Follow us
|

Updated on:Oct 22, 2024 | 5:39 PM

ಇತ್ತೀಚಿನ ಸಂದರ್ಶನವೊಂದರಲ್ಲಿ, ಕಲ್ಕಿ ಕೊಚ್ಲಿನ್ ಹೆರಿಗೆಯ ನಂತರ ತನ್ನ ಲೈಂಗಿಕ ಜೀವನದಲ್ಲಿ ಆದ ಬದಲಾವಣೆಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ನನ್ನ ಮಗಳಿಗೆ ಜನ್ಮ ನೀಡಿದ ಸಮಯದಲ್ಲಿ ನನ್ನ ಖಾಸಗಿ ಅಂಗಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದಂತೆ ಭಾಸವಾಗಿತ್ತು. ಸಹಜ ಸ್ಥಿತಿಗೆ ಮರಳಲು ನನಗೆ ಬಹಳ ಸಮಯ ಹಿಡಿಯಿತು, ನಾನು ನಿಧಾನವಾಗಿ ಲೈಂಗಿಕ ಜೀವನಕ್ಕೆ ಮರಳಿದಾಗ, ಅದು ನನಗೆ ತುಂಬಾ ನೋವಿನಿಂದ ಕೂಡಿತ್ತು. ಆ ಸಮಯದಲ್ಲಿ ನಾನು ನನ್ನ ಸಂಗಾತಿಯೊಂದಿಗೆ ಆತ್ಮೀಯವಾಗಿರಲು ಹೆದರುತ್ತಿದ್ದೆ. ನಾನು ಈ ಸಂಪೂರ್ಣ ಘಟನೆಯನ್ನು ನೆನಪಿಸಿಕೊಳ್ಳುತ್ತೇನೆ ಏಕೆಂದರೆ ಯಾವ ಹೆಣ್ಣು ಕೂಡ ಈ ಕುರಿತು ಮುಕ್ತವಾಗಿ ಮಾತನಾಡಲು ಹಿಂಜರಿಯುತ್ತಾರೆ. ಈ ಬಗ್ಗೆ ಅರಿವು ಮೂಡಿಸಲು ಮಾತನಾಡುತ್ತಿರುವೆ ಎಂದು ಹೇಳಿಕೊಂಡಿದ್ದಾರೆ.

ಹೆರಿಗೆಯ ನಂತರ ಪ್ರತೀ ಹೆಣ್ಣಿಗೂ ಮುಖ್ಯವಾಗಿ ತನ್ನ ಗಂಡನ ಬೆಂಬಲ ಅಗತ್ಯವಿರುತ್ತದೆ. ನನ್ನ ಮಗುವಿನ ಜನನದ ನಂತರ ನಾನು ಕೆಲವು ಸಮಸ್ಯೆಗಳನ್ನು ಎದುರಿಸಿದೆ. ಇದರಿಂದಾಗಿ ನಾನು ಮತ್ತೆ ಸ್ತ್ರೀರೋಗತಜ್ಞರ ಬಳಿಗೆ ಹೋಗಿ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಹೆರಿಗೆಯ ನಂತರ ಲೈಂಗಿಕ ಜೀವನವನ್ನು ಪುನರಾರಂಭಿಸುವುದು ಪ್ರತೀ ಮಹಿಳೆಗೆ ಸವಾಲಿನ ಕೆಲಸ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಗೆ ಈ ರೋಗಗಳಿದ್ದಾಗ ಗರ್ಭಧರಿಸಬಾರದು; ಇಲ್ಲಿದೆ ಡಾ. ಮಂಜು ವರ್ಮಾ ನೀಡಿರುವ ಸಲಹೆ

ಇದಲ್ಲದೇ ಸ್ತ್ರೀರೋಗ ತಜ್ಞ ಡಾ.ನ್ಯಾನ್ಸಿ ನಾಗ್‌ಪಾಲ್ ಹೇಳುವಂತೆ, ಹೆರಿಗೆಯ ನಂತರ ಮಹಿಳೆಯರು ಹೆಚ್ಚಾಗಿ ದೈಹಿಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಲೈಂಗಿಕ ಸಮಯದಲ್ಲಿ ನೋವು ಅಥವಾ ಅಸ್ವಸ್ಥತೆಯನ್ನು ಹೊಂದಿರುತ್ತಾರೆ. ಈ ಅವಧಿಯಲ್ಲಿ ಪಾಲುದಾರರ ಭಾವನಾತ್ಮಕ ಬೆಂಬಲ ಬಹಳ ಮುಖ್ಯ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Tue, 22 October 24

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್