AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪು ಜೀರಿಗೆಯಲ್ಲಿ ಕೊವಿಡ್ ಸೋಂಕು ತಡೆಗಟ್ಟುವ ಸಾಮರ್ಥ್ಯವಿದೆ: ವರದಿ

Kalonji Seeds: ಕಪ್ಪು ಜೀರಿಗೆ ಅಸ್ತಮಾ, ಸಂಧಿವಾತ ಮತ್ತು ಅರ್ಜಿಯಂತಹ ಸಮಸ್ಯೆಗಳಿಗೆ ಚಿಕಿತ್ಸೆಯಾಗಿ ಬಳಸಲಾಗುತ್ತದೆ. ನಿಗೆಲ್ಲಾ ಸಟಿವಾ ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್ ಮತ್ತು ಮಧುಮೇಹ ಚಿಕಿತ್ಸೆಯಲ್ಲಿ ಸಹಾಯಕಾರಿಯಾಗಿದೆ.

ಕಪ್ಪು ಜೀರಿಗೆಯಲ್ಲಿ ಕೊವಿಡ್ ಸೋಂಕು ತಡೆಗಟ್ಟುವ ಸಾಮರ್ಥ್ಯವಿದೆ: ವರದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 05, 2021 | 4:17 PM

Share

ಆಸ್ಟ್ರೇಲಿಯಾದ ಸಂಶೋಧಕರು ಇತ್ತೀಚೆಗೆ ಕಲೋಂಜಿ ಬೀಜಗಳನ್ನು (ಕಪ್ಪು ಜೀರಿಗೆ) ಕೊವಿಡ್19 ಸೋಂಕಿನ ಚಿಕಿತ್ಸೆಯಲ್ಲಿ ಬಳಸಬಹುದು ಎಂದು ಕಂಡು ಹಿಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಕೊಲೋಂಜಿಯ ಬೀಜಗಳನ್ನು ನಿಗೆಲ್ಲಾ ಸಟಿವಾ ಎಂದು ಕರೆಯಲಾಗುತ್ತದೆ. ಉತ್ತರ ಆಫ್ರಿಕಾ ಮತ್ತು ಪಶ್ಚಿಮ ಏಷ್ಯಾದಲ್ಲಿ ಇದನ್ನು ಬೆಳೆಯಲಾಗುತ್ತದೆ. ಉರಿಯೂತ ಮತ್ತು ಸೋಂಕುಗಳ ನಿವಾರಣೆಗೆ ವೈದ್ಯಕೀಯವಾಗಿಯೂ ಸಹ ಇದನ್ನು ಬಳಸಲಾಗುತ್ತಿದೆ. ಸಿಡ್ನಿಯಲ್ಲಿರುವ ಯುನಿವರ್ಸಿಟಿ ಆಫ್ ಟೆಕ್ನಾಲಜಿ ತಂಡವು ಕೊವಿಡ್19 ಸಾಂಕ್ರಾಮಿಕ ರೋಗದ ವೈರಸ್ಅನ್ನು ತಡೆಗಟ್ಟುವ ಸಾಮರ್ಥ್ಯ ನಿಗೆಲ್ಲಾ ಸಟಿವಾದಲ್ಲಿದೆ ಎಂದು ತಿಳಿಸಿದ್ದಾರೆ.

ಫೆನೆಲ್ ಫ್ಲವರ್ ಎಂದು ಕರೆಯಲ್ಪಡುವ ಈ ಸಸ್ಯದ ಬೀಜಗಳನ್ನು ಶ್ವಾಸಕೋಶ ಸಂಬಂಧಿ ಖಾಯಿಲೆಗೆ ಬಳಸಲಾಗುತ್ತದೆ ಎಂದು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾದ ಖನೀಜ್ ಫತಿಮಾ ಶಾದ್ ಹೇಳಿದ್ದಾರೆ. ಕೊವಿಡ್ 19 ಸಾಂಕ್ರಾಮಿಕದಿಂದ ಆಸ್ಪತ್ರೆಗೆ ದಾಖಲಾಗುವ ಹಾಗೂ ಅನಾರೋಗ್ಯ ಪೀಡಿತ ರೋಗಿಗಳ ಮೇಲೆ ಪರಿಣಾಮ ಬೀರುವ ಸೈಟೊಕಿನ್ಅನ್ನು ತಡೆಯಬಹುದು ಎಂದು ಶಾದ್ ಹೇಳಿದ್ದಾರೆ.

ಈ ಅಧ್ಯಯನವನ್ನು ಕ್ಲಿನಿಕ್ ಮತ್ತು ಎಕ್ಸ್ಪೆರಿಮೆಂಟಲ್ ಫಾರ್ಮಲಜಿ ಜರ್ನಲ್​ನಲ್ಲಿ ಪ್ರಕಟಿಸಲಾಗಿದೆ. ಥೈಮೊಕ್ವಿನೋನ್ಅನ್ನು ಪ್ರಯೋಗಾಲಯದಲ್ಲಿ ಅಧ್ಯಯನ ಕೈಗೊಳ್ಳಲಾಗಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿಯಂತ್ರಿಸಬಲ್ಲದು ಎಂಬುದು ಅಧ್ಯಯನಗಳಿಂದ ತಿಳಿದು ಬಂದಿದೆ. ದೇಹದಲ್ಲಿನ ಉರಿಯೂತದ ಪರ ಉತ್ಪತ್ತಿಯಾಗುವ ರಾಸಾಯನಿಕಗಳ ಬಿಡುಗಡೆಯನ್ನು ಇದು ತಡೆಯುತ್ತದೆ ಎಂಬುದು ವರದಿಯಾಗಿದೆ.

ಇದು ಅಸ್ತಮಾ, ಸಂಧಿವಾತ ಮತ್ತು ಅರ್ಜಿಯಂತಹ ಸಮಸ್ಯೆಗಳಿಗೆ ಚಿಕಿತ್ಸೆಯಾಗಿ ಬಳಸಲಾಗುತ್ತದೆ. ನಿಗೆಲ್ಲಾ ಸಟಿವಾ ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್ ಮತ್ತು ಮಧುಮೇಹ ಚಿಕಿತ್ಸೆಯಲ್ಲಿ ಸಹಾಯಕಾರಿಯಾಗಿದೆ. ಸ್ಟ್ಯಾಫಿಲೋಕೊಕಸ್ ಔರಿಯಸ್ನಂತಹ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವ ಶಕ್ತಿ ಕಪ್ಪು ಜೀರಿಗೆಗಿದೆ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ:

Kalonji Seeds: ಕಪ್ಪು ಜೀರಿಗೆಯಲ್ಲಿದೆ ನಿಮಗೆ ತಿಳಿಯದ ಪ್ರಮುಖ ಆರು ಪ್ರಯೋಜಗಳು

Health Benefits: ನೆನೆಸಿದ ಕಡಲೆಕಾಳು ನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ