AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪು ಜೀರಿಗೆಯಲ್ಲಿ ಕೊವಿಡ್ ಸೋಂಕು ತಡೆಗಟ್ಟುವ ಸಾಮರ್ಥ್ಯವಿದೆ: ವರದಿ

Kalonji Seeds: ಕಪ್ಪು ಜೀರಿಗೆ ಅಸ್ತಮಾ, ಸಂಧಿವಾತ ಮತ್ತು ಅರ್ಜಿಯಂತಹ ಸಮಸ್ಯೆಗಳಿಗೆ ಚಿಕಿತ್ಸೆಯಾಗಿ ಬಳಸಲಾಗುತ್ತದೆ. ನಿಗೆಲ್ಲಾ ಸಟಿವಾ ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್ ಮತ್ತು ಮಧುಮೇಹ ಚಿಕಿತ್ಸೆಯಲ್ಲಿ ಸಹಾಯಕಾರಿಯಾಗಿದೆ.

ಕಪ್ಪು ಜೀರಿಗೆಯಲ್ಲಿ ಕೊವಿಡ್ ಸೋಂಕು ತಡೆಗಟ್ಟುವ ಸಾಮರ್ಥ್ಯವಿದೆ: ವರದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 05, 2021 | 4:17 PM

Share

ಆಸ್ಟ್ರೇಲಿಯಾದ ಸಂಶೋಧಕರು ಇತ್ತೀಚೆಗೆ ಕಲೋಂಜಿ ಬೀಜಗಳನ್ನು (ಕಪ್ಪು ಜೀರಿಗೆ) ಕೊವಿಡ್19 ಸೋಂಕಿನ ಚಿಕಿತ್ಸೆಯಲ್ಲಿ ಬಳಸಬಹುದು ಎಂದು ಕಂಡು ಹಿಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಕೊಲೋಂಜಿಯ ಬೀಜಗಳನ್ನು ನಿಗೆಲ್ಲಾ ಸಟಿವಾ ಎಂದು ಕರೆಯಲಾಗುತ್ತದೆ. ಉತ್ತರ ಆಫ್ರಿಕಾ ಮತ್ತು ಪಶ್ಚಿಮ ಏಷ್ಯಾದಲ್ಲಿ ಇದನ್ನು ಬೆಳೆಯಲಾಗುತ್ತದೆ. ಉರಿಯೂತ ಮತ್ತು ಸೋಂಕುಗಳ ನಿವಾರಣೆಗೆ ವೈದ್ಯಕೀಯವಾಗಿಯೂ ಸಹ ಇದನ್ನು ಬಳಸಲಾಗುತ್ತಿದೆ. ಸಿಡ್ನಿಯಲ್ಲಿರುವ ಯುನಿವರ್ಸಿಟಿ ಆಫ್ ಟೆಕ್ನಾಲಜಿ ತಂಡವು ಕೊವಿಡ್19 ಸಾಂಕ್ರಾಮಿಕ ರೋಗದ ವೈರಸ್ಅನ್ನು ತಡೆಗಟ್ಟುವ ಸಾಮರ್ಥ್ಯ ನಿಗೆಲ್ಲಾ ಸಟಿವಾದಲ್ಲಿದೆ ಎಂದು ತಿಳಿಸಿದ್ದಾರೆ.

ಫೆನೆಲ್ ಫ್ಲವರ್ ಎಂದು ಕರೆಯಲ್ಪಡುವ ಈ ಸಸ್ಯದ ಬೀಜಗಳನ್ನು ಶ್ವಾಸಕೋಶ ಸಂಬಂಧಿ ಖಾಯಿಲೆಗೆ ಬಳಸಲಾಗುತ್ತದೆ ಎಂದು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾದ ಖನೀಜ್ ಫತಿಮಾ ಶಾದ್ ಹೇಳಿದ್ದಾರೆ. ಕೊವಿಡ್ 19 ಸಾಂಕ್ರಾಮಿಕದಿಂದ ಆಸ್ಪತ್ರೆಗೆ ದಾಖಲಾಗುವ ಹಾಗೂ ಅನಾರೋಗ್ಯ ಪೀಡಿತ ರೋಗಿಗಳ ಮೇಲೆ ಪರಿಣಾಮ ಬೀರುವ ಸೈಟೊಕಿನ್ಅನ್ನು ತಡೆಯಬಹುದು ಎಂದು ಶಾದ್ ಹೇಳಿದ್ದಾರೆ.

ಈ ಅಧ್ಯಯನವನ್ನು ಕ್ಲಿನಿಕ್ ಮತ್ತು ಎಕ್ಸ್ಪೆರಿಮೆಂಟಲ್ ಫಾರ್ಮಲಜಿ ಜರ್ನಲ್​ನಲ್ಲಿ ಪ್ರಕಟಿಸಲಾಗಿದೆ. ಥೈಮೊಕ್ವಿನೋನ್ಅನ್ನು ಪ್ರಯೋಗಾಲಯದಲ್ಲಿ ಅಧ್ಯಯನ ಕೈಗೊಳ್ಳಲಾಗಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿಯಂತ್ರಿಸಬಲ್ಲದು ಎಂಬುದು ಅಧ್ಯಯನಗಳಿಂದ ತಿಳಿದು ಬಂದಿದೆ. ದೇಹದಲ್ಲಿನ ಉರಿಯೂತದ ಪರ ಉತ್ಪತ್ತಿಯಾಗುವ ರಾಸಾಯನಿಕಗಳ ಬಿಡುಗಡೆಯನ್ನು ಇದು ತಡೆಯುತ್ತದೆ ಎಂಬುದು ವರದಿಯಾಗಿದೆ.

ಇದು ಅಸ್ತಮಾ, ಸಂಧಿವಾತ ಮತ್ತು ಅರ್ಜಿಯಂತಹ ಸಮಸ್ಯೆಗಳಿಗೆ ಚಿಕಿತ್ಸೆಯಾಗಿ ಬಳಸಲಾಗುತ್ತದೆ. ನಿಗೆಲ್ಲಾ ಸಟಿವಾ ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್ ಮತ್ತು ಮಧುಮೇಹ ಚಿಕಿತ್ಸೆಯಲ್ಲಿ ಸಹಾಯಕಾರಿಯಾಗಿದೆ. ಸ್ಟ್ಯಾಫಿಲೋಕೊಕಸ್ ಔರಿಯಸ್ನಂತಹ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವ ಶಕ್ತಿ ಕಪ್ಪು ಜೀರಿಗೆಗಿದೆ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ:

Kalonji Seeds: ಕಪ್ಪು ಜೀರಿಗೆಯಲ್ಲಿದೆ ನಿಮಗೆ ತಿಳಿಯದ ಪ್ರಮುಖ ಆರು ಪ್ರಯೋಜಗಳು

Health Benefits: ನೆನೆಸಿದ ಕಡಲೆಕಾಳು ನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ