AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kargil Vijay Diwas 2024: ಯೋಧರು ಹೆಚ್ಚಾಗಿ ಸೇವನೆ ಮಾಡುವ ಆಹಾರಗಳು ಯಾವುವು? ನಿವೃತ್ತ ಸೇನಾಧಿಕಾರಿ ಪರಮೇಶ್ವರ್ ಹೇಳಿದ್ದೇನು?

ನಾವಿಲ್ಲಿ ಇಷ್ಟು ಸುರಕ್ಷಿತವಾಗಿರಲು ನಮ್ಮ ಯೋಧರು ಕಾರಣ. ಹಾಗಾದರೆ ಅವರ ಆಹಾರ ಪದ್ಧತಿ ಹೇಗಿರಬಹುದು? ಯಾವ ರೀತಿಯ ಆಹಾರ ಸೇವನೆ ಮಾಡಬಹುದು? ತಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಂಡಿರಬಹುದು ಎಂದು ಯೋಚಿಸಿದ್ದೀರಾ? ಶತ್ರುಗಳಿಂದ ಬರುವ ಗುಂಡುಗಳಿಗಿಂತ ಅಪಾಯಕಾರಿಯಾಗಿರುವ ಹವಾಮಾನದಲ್ಲಿ ಬದುಕುವುದು ಸುಲಭದ ಮಾತಲ್ಲ. ಮೈನಸ್ 40- 50 ಡಿಗ್ರಿ ತಾಪಮಾನ ಇರುವಲ್ಲಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರೆ ಆಹಾರ ಪದ್ಧತಿ, ವ್ಯಾಯಾಮ ಎಲ್ಲವೂ ಕಟ್ಟುನಿಟ್ಟಾಗಿ ಇದ್ದರೆ ಮಾತ್ರ ಸಾಧ್ಯವಾಗುತ್ತದೆ.

Kargil Vijay Diwas 2024: ಯೋಧರು ಹೆಚ್ಚಾಗಿ ಸೇವನೆ ಮಾಡುವ ಆಹಾರಗಳು ಯಾವುವು? ನಿವೃತ್ತ ಸೇನಾಧಿಕಾರಿ ಪರಮೇಶ್ವರ್ ಹೇಳಿದ್ದೇನು?
ಯೋಧರ ಜತೆಗೆ ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಔತಣಕೂಟ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Jul 25, 2024 | 3:33 PM

Share

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅನೇಕ ರೀತಿಯಲ್ಲಿ ಹರಸಾಹಸ ಪಡುತ್ತೇವೆ. ಆದರೆ ನಾವಿಲ್ಲಿ ಇಷ್ಟು ಸುರಕ್ಷಿತವಾಗಿರಲು ನಮ್ಮ ಯೋಧರು ಕಾರಣ. ಹಾಗಾದರೆ ಅವರ ಆಹಾರ ಪದ್ಧತಿ ಹೇಗಿರಬಹುದು? ಯಾವ ರೀತಿಯ ಆಹಾರ ಸೇವನೆ ಮಾಡಬಹುದು? ತಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಂಡಿರಬಹುದು ಎಂದು ಯೋಚಿಸಿದ್ದೀರಾ? ಶತ್ರುಗಳಿಂದ ಬರುವ ಗುಂಡುಗಳಿಗಿಂತ ಅಪಾಯಕಾರಿಯಾಗಿರುವ ಹವಾಮಾನದಲ್ಲಿ ಬದುಕುವುದು ಸುಲಭದ ಮಾತಲ್ಲ. ಮೈನಸ್ 40- 50 ಡಿಗ್ರಿ ತಾಪಮಾನ ಇರುವಲ್ಲಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರೆ ಆಹಾರ ಪದ್ಧತಿ, ವ್ಯಾಯಾಮ ಎಲ್ಲವೂ ಕಟ್ಟುನಿಟ್ಟಾಗಿ ಇದ್ದರೆ ಮಾತ್ರ ಸಾಧ್ಯವಾಗುತ್ತದೆ.

ನಿವೃತ್ತ ಸೇನಾಧಿಕಾರಿ ಪರಮೇಶ್ವರ್ ಎನ್. ಹೆಗಡೆ ಅವರು ಹೇಳುವ ಪ್ರಕಾರ, ಯೋಧರ ಆಹಾರ ವೈವಿಧ್ಯತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುತ್ತದೆ. ಅಗತ್ಯ ಖಾದ್ಯ ಮತ್ತು ಪೌಷ್ಟಿಕಾಂಶ ಸೇರಿಸಲಾಗುತ್ತದೆ. ಜೊತೆಗೆ ಅವರಿಗೆ ಬೇಕಾದ ಆಯ್ಕೆಗಳನ್ನು ಕೂಡ ನೀಡಲಾಗುತ್ತದೆ. ಅಂದರೆ ಸಸ್ಯಾಹಾರಿಗಳು ಮತ್ತು ಮಾಂಸಾಹಾರಿಗಳಿಗೆ ಪ್ರತ್ಯೇಕ ಆಹಾರವಿರುತ್ತದೆ. ಪ್ರತಿದಿನವೂ ಒಂದೊಂದು ರೀತಿಯ ಆಹಾರವಿರುತ್ತದೆ, ಇಲ್ಲಿ ಆಯ್ಕೆ ನಮ್ಮದಾಗಿರುತ್ತದೆ. ಅಲ್ಲಿ ಕೊಡುವ ಆಹಾರ ಆರೋಗ್ಯಕ್ಕೆ ಪೂರಕವಾಗಿರುತ್ತದೆ ಹಾಗಾಗಿ ಒಳ್ಳೆಯ ರೀತಿಯಲ್ಲಿ ನಮ್ಮ ಆಹಾರ ಸೇವನೆ ಮಾಡುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ”.

ಆಹಾರ ಕ್ರಮ ಹೇಗಿರುತ್ತದೆ?

“ಹಾಲು, ಮೊಟ್ಟೆ ಮತ್ತು ಬಾಳೆಹಣ್ಣು ಇದ್ದೇ ಇರುತ್ತದೆ. ಇವು ದೈಹಿಕ ಶಕ್ತಿ ನೀಡುತ್ತವೆ. ಅಲ್ಲದೆ ಪ್ರತಿದಿನವೂ ಯೋಧರಿಗೆ ಸಮತೋಲಿತ ಆಹಾರ ನೀಡಲಾಗುತ್ತದೆ. ಪನೀರ್, ಕೋಳಿ ಮತ್ತು ಮೀನು ಹೀಗೆ ಪ್ರೋಟೀನ್, ಕ್ಯಾಲ್ಸಿಯಂ ಇರುವ ಆಹಾರಗಳನ್ನು ಕೂಡ ನೀಡಲಾಗುತ್ತದೆ. ಇದೆಲ್ಲದರ ಜೊತೆಗೆ ಋತುಮಾನದ ಹಣ್ಣು ಮತ್ತು ತರಕಾರಿಯನ್ನು ನೀಡಲಾಗುತ್ತದೆ. ಕಾಲೋಚಿತ ಪದಾರ್ಥಗಳು ಆರೋಗ್ಯಕ್ಕೆ ಅಗತ್ಯ ಪೋಷಣೆ ನೀಡುತ್ತವೆ. ಇವೆಲ್ಲವೂ ಕೆಮ್ಮು ಮತ್ತು ಶೀತ, ಜ್ವರದಂತಹ ಸಮಸ್ಯೆ ಕಡಿಮೆ ಮಾಡುತ್ತವೆ.”

ಇದನ್ನೂ ಓದಿ: ನಿಮ್ಮ ಪ್ರೀತಿ ಪಾತ್ರರಿಗೆ ಈ ಸಂದೇಶ ಕಳುಹಿಸಿ ಭಾರತೀಯ ಸೈನ್ಯದ ಗೆಲುವನ್ನು ಸ್ಮರಿಸಿ

ಯಾವ ಆಹಾರ ಒಳ್ಳೆಯದು?

ಯೋಧರು ಹೆಚ್ಚಾಗಿ ಒಣ ಹಣ್ಣುಗಳು, ಅಗಸೆ ಬೀಜಗಳು, ಆಮ್ಲಾ, ಅರಿಶಿನಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು ಇವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೆ ವಿಟಮಿನ್ ಸಿ ಹೇರಳವಾಗಿರುವ ಆಹಾರ ಸೇವಿಸಬೇಕು ಇದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಇದು ಯೋಧರಿಗೆ ಮಾತ್ರವಲ್ಲ ಎಲ್ಲರೂ ಕೂಡ ಪಾಲಿಸುವುದು ಒಳ್ಳೆಯದು.” ಎಂದು ಅವರು ಹೇಳುತ್ತಾರೆ.

Published On - 10:23 am, Wed, 24 July 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ