Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಸಾರದಿಂದ ಬಳಲುತ್ತಿರುವ ರಾಜ್ಯದ 1.32 ಲಕ್ಷ ಜನರು: ವೈದ್ಯರ ಕಳವಳ

ಕರ್ನಾಟಕದಲ್ಲಿ ಈ ವರ್ಷ ತೀವ್ರ ಅತಿಸಾರ ಕಾಯಿಲೆಯಿಂದ 1.32 ಲಕ್ಷ ಜನರು ಬಳಲುತ್ತಿದ್ದಾರೆ. ಮೇ ಮತ್ತು ಜೂನ್‌ನಲ್ಲಿ ಗರಿಷ್ಠ ಮಟ್ಟವನ್ನು ಗಮನಿಸಿದರೆ, ಕಲುಷಿತ ನೀರಿನಿಂದ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಅತಿಸಾರದಿಂದ ಬಳಲುತ್ತಿರುವ ರಾಜ್ಯದ 1.32 ಲಕ್ಷ ಜನರು: ವೈದ್ಯರ ಕಳವಳ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Dec 11, 2023 | 7:02 PM

ಬೆಂಗಳೂರು, ಡಿಸೆಂಬರ್ 11​: ಕರ್ನಾಟಕದಲ್ಲಿ ಈ ವರ್ಷ ತೀವ್ರ ಅತಿಸಾರ ಕಾಯಿಲೆ (Acute diarrhoeal disease)ಯಿಂದ 1.32 ಲಕ್ಷ ಜನರು ಬಳಲುತ್ತಿದ್ದಾರೆ. ಮೇ ಮತ್ತು ಜೂನ್‌ನಲ್ಲಿ ಗರಿಷ್ಠ ಮಟ್ಟವನ್ನು ಗಮನಿಸಿದರೆ, ಕಲುಷಿತ ನೀರಿನಿಂದ (Contaminated water) ಜನರು ಅನಾರೋಗ್ಯಕ್ಕೆ ಒಳಗಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ವೈದ್ಯರು (Doctors) ಅಭಿಪ್ರಾಯಪಟ್ಟಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಮುಖ್ಯಸ್ಥ ಡಾ.ಪರ್ವೇಶ್ ಕುಮಾರ್ ಜೈನ್ ಮಾತನಾಡಿ, ಬೇಸಿಗೆ ಮತ್ತು ಮಳೆಗಾಲದಲ್ಲಿ ಹೆಚ್ಚಿನ ಎಸಿಡಿ ಪ್ರಕರಣಗಳು ಕಂಡುಬರುತ್ತವೆ. ಏಕೆಂದರೆ ಮಳೆಗಾಲದಲ್ಲಿ ನೀರು ಮತ್ತು ಆಹಾರವು ಹೆಚ್ಚಾಗಿ ಕಲುಷಿತಗೊಳ್ಳುತ್ತದೆ. ಬೇಸಿಗೆಯಲ್ಲಿ ಸುಲಭವಾಗಿ ಹಳಸಿ ಹೋಗುತ್ತದೆ. ಅಂತಹ ಆಹಾರ ಮತ್ತು ನೀರಿನ ಸೇವನೆಯು ಅತಿಸಾರದ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಎಂದು ಹೇಳಿದರು.

ಆದಾಗ್ಯೂ, ಈ ರೋಗವು ಮಾರಣಾಂತಿಕವಲ್ಲ ಮತ್ತು ಹೆಚ್ಚಿನ ಸಂದರ್ಭಗಳಲ್ಲಿ ಸ್ವಯಂ-ಸೀಮಿತವಾಗಿರುತ್ತದೆ. ಶೇ 90 ರಷ್ಟು ಪ್ರಕರಣಗಳನ್ನು ಸಾಮಾನ್ಯ ವೈದ್ಯರ ಮಟ್ಟದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಮತ್ತು ಕೆಲವು ತೀವ್ರತರವಾದ ಪ್ರಕರಣಗಳಿಗೆ ಮಾತ್ರ ತಜ್ಞರ ಚಿಕಿತ್ಸೆ ಅಗತ್ಯವಿರುತ್ತದೆ ಎಂದರು.

ಇದನ್ನೂ ಓದಿ: ಅತಿಸಾರವನ್ನು ತಡೆಯುವ ಸುಲಭ ವಿಧಾನಗಳು ಇಲ್ಲಿವೆ

ರಾಜ್ಯ ಕಣ್ಗಾವಲು ಘಟಕವು ನವೆಂಬರ್ 27 ರಿಂದ ಡಿಸೆಂಬರ್ 3 ರವರೆಗೆ ಬಿಡುಗಡೆ ಮಾಡಿದ ಇತ್ತೀಚಿನ ಸಾಪ್ತಾಹಿಕ ಸಾಂಕ್ರಾಮಿಕ ರೋಗಗಳ ವರದಿಯು ಕರ್ನಾಟಕದಾದ್ಯಂತ 2,667 ಪ್ರಕರಣಗಳು ವರದಿಯಾಗಿವೆ. ಮಳೆಗಾಲದಲ್ಲಿ ಪ್ರವಾಹ ಮತ್ತು ಮಳೆ ನೀರಿನಿಂದ ತುಂಬಿ ಹರಿಯುವ ಚರಂಡಿಗಳು ಉಕ್ಕಿ ಹರಿಯುತ್ತವೆ. ಇಂತಹ ಸಂದರ್ಭಗಳಲ್ಲಿ, ಅಂತರ್ಜಲವು ಕೂಡ ಕಲುಷಿತಗೊಳ್ಳುತ್ತದೆ. ಕಲುಷಿತಗೊಂಡ ನೀರು ಮತ್ತು ಈ ನೀರಿನಿಂದ ಬಳೆದ ಆಹಾರ ಸೇವನೆಯಿಂದ ಟೈಫಾಯಿಡ್ ಅಥವಾ ಅತಿಸಾರದಂತಹ ಸೋಂಕು ಉಲ್ಬಣಗೊಳ್ಳುತ್ತದೆ.

ಬೆಂಗಳೂರಿನಂತಹ ನಗರದಲ್ಲಿ ಅಂತರ್ಜಲ ಮಟ್ಟ ಕುಸಿದಿದೆ, ಹೆಚ್ಚಿನ ಜನಸಂಖ್ಯೆಯ ಜನರು ಟ್ಯಾಂಕರ್ ನೀರನ್ನು ಅವಲಂಬಿಸಿದ್ದಾರೆ. ಟ್ಯಾಂಕರ್‌ ನೀರಿನ ಮೂಲ ಮತ್ತು ಅವಧಿಯ ಬಗ್ಗೆ ಜನರಿಗೆ ತಿಳಿದಿಲ್ಲದ ಕಾರಣ ಅತಿಸಾರ ಉಂಟಾಗುತ್ತಿದೆ ಎಂದು ವೈದ್ಯರು ನೀರಿನ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಾರೆ.

ಅತಿಸಾರದ ಲಕ್ಷಣಗಳು

ಉಬ್ಬಿದ ಹೊಟ್ಟೆ, ಸೆಳೆತ, ತೆಳುವಾದ ಅಥವಾ ನೀರಿನಂಶದ ಮಲ, ವಾಕರಿಕೆ, ವಾಂತಿ, ಮಲದ ಮೂಲಕ ರಕ್ತ ಹೊರಬರುವುದು. ತೂಕ ಇಳಿಕೆ ಮತ್ತು ಜ್ವರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:57 pm, Mon, 11 December 23

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್