AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅತಿಯಾದ ಕೂದಲು ಉದುರುವಿಕೆ ನಿಮ್ಮನ್ನು ಕಾಡುತ್ತಿದೆಯೇ ? ಇಲ್ಲಿದೆ ಪ್ರಮುಖ ಆಹಾರ ಕ್ರಮಗಳು

ನೀವು ನಿಮ್ಮ ಕೂದಲಿಗೆ ಯಾವ ಶ್ಯಾಂಪೂ,  ಎಣ್ಣೆ ಬಳಸುತ್ತೀರಿ ಎಂಬುದು ಮಾತ್ರ ಮುಖ್ಯವಾಗುವುದಿಲ್ಲ. ಬದಲಾಗಿ ನೀವು ಸೇವಿಸುವ ಆಹಾರ ಕ್ರಮಗಳು ಕೂಡ ಮುಖ್ಯವಾಗುತ್ತದೆ. ಆದ್ದರಿಂದ ರೂಢಿಸಿಕೊಳ್ಳಬೇಕಾದ ಪ್ರಮುಖ ಆಹಾರ ಕ್ರಮಗಳು ಇಲ್ಲಿವೆ.

Health Tips: ಅತಿಯಾದ ಕೂದಲು ಉದುರುವಿಕೆ ನಿಮ್ಮನ್ನು ಕಾಡುತ್ತಿದೆಯೇ  ? ಇಲ್ಲಿದೆ ಪ್ರಮುಖ ಆಹಾರ ಕ್ರಮಗಳು
Hair Health
TV9 Web
| Edited By: |

Updated on:Oct 28, 2022 | 5:09 PM

Share

ಉದ್ದನೆಯ ದಟ್ಟವಾದ ಆರೋಗ್ಯಕರ ಕೂದಲನ್ನು ಎಲ್ಲರೂ ಬಯಸುವುದು ಸಾಮಾನ್ಯ. ಆದರೆ ಅದನ್ನು ಪೋಷಿಸುವುದು ಸುಲಭದ ಕೆಲಸವಲ್ಲ. ಕೂದಲು ಆರೋಗ್ಯಕರವಾಗಿ ಮತ್ತು ಬಲವಾಗಿ ಬೆಳೆಯಲು ಸರಿಯಾದ ಪೋಷಣೆಯ ಅಗತ್ಯವಿದೆ. ಆದ್ದರಿಂದ ನೀವು ನಿಮ್ಮ ಆಹಾರ ಕ್ರಮದಲ್ಲಿ ರೂಢಿಸಿಕೊಳ್ಳಬೇಕಾದ ಪ್ರಮುಖ ಅಂಶಗಳ ಕುರಿತು ಮಾಹಿತಿ ಇಲ್ಲಿದೆ.

ಇಂದು ಜಾಹೀರಾತುಗಳಿಗೆ ಮರುಳಾಗಿ ಸಾಕಷ್ಟು ದುಡ್ಡು ಖರ್ಚು ಮಾಡಿ ಮೋಸ ಹೋಗುವ ಸಾಕಷ್ಟು ಉದಾಹರಣೆಗಳಿವೆ. ಇದರಿಂದ ಆರ್ಥಿಕವಾಗಿ ಮೋಸ ಹೋಗುವುದು ಮಾತ್ರವಲ್ಲ ಕೂದಲಿನ ಮೇಲೂ ಸಾಕಷ್ಟು ಪರಿಣಾಮ ಬೀರುವುದನ್ನು ಕಾಣಬಹುದು.

ನೀವು ನಿಮ್ಮ ಕೂದಲಿಗೆ ಯಾವ ಶ್ಯಾಂಪೂ,  ಎಣ್ಣೆ ಬಳಸುತ್ತೀರಿ ಎಂಬುದು ಮಾತ್ರ ಮುಖ್ಯವಾಗುವುದಿಲ್ಲ. ಬದಲಾಗಿ ನೀವು ಸೇವಿಸುವ ಆಹಾರ ಕ್ರಮಗಳು ಕೂಡ ಮುಖ್ಯವಾಗುತ್ತದೆ. ಆದ್ದರಿಂದ ನಿಮ್ಮ ದಿನ ನಿತ್ಯದ ಜೀವನದಲ್ಲಿ ನಿಮ್ಮ ಕೂದಲಿನ ಆರೋಗ್ಯಕ್ಕಾಗಿ ರೂಢಿಸಿಕೊಳ್ಳಬೇಕಾದ ಪ್ರಮುಖ ಆಹಾರ ಕ್ರಮಗಳು ಇಲ್ಲಿವೆ.

ಪೌಷ್ಟಿಕಾಂಶಭರಿತ ಆಹಾರವು ಹೆಚ್ಚು ಪರಿಣಾಮಕಾರಿಯಾಗಿದ್ದು, ನಿಮ್ಮ ಕೂದಲಿಗೆ ಕೊಬ್ಬಿನಾಮ್ಲಗಳು, ವಿಟಮಿನ್ ಸಿ, ಸತು, ಕಬ್ಬಿಣ ಮತ್ತು ಇತರ ಮಲ್ಟಿವಿಟಮಿನ್‌ಗಳನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಇದು ಉದುರುವಿಕೆಯನ್ನು ತಡೆಗಟ್ಟಿ, ಕೂದಲು ದಪ್ಪ ಮತ್ತು ಉದ್ದವಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಪ್ರಮುಖ 5 ಆಹಾರಗಳು:

  1. ಸೊಪ್ಪುಗಳು: ಸೊಪ್ಪು ತರಕಾರಿಗಳು ಪೌಷ್ಟಿಕಾಂಶಭರಿತ ಆಹಾರಗಳಲ್ಲಿ ಪ್ರಮುಖವಾದುದಾಗಿದ್ದು, ಇದರಿಂದ ಕೂದಲಿಗೆ ಸಾಕಷ್ಟು ಪ್ರಯೋಜನಗಳಿವೆ. ಸೊಪ್ಪು, ಹಸಿರು ತರಕಾರಿಗಳು ಕೂದಲಿನ ಬೆಳವಣಿಗೆಗೆ ಸಹಾಯಕವಾಗಿದೆ. ಇದರಲ್ಲಿ ಕೂದಲಿನ ಬೆಳವಣೆಗೆಗೆ ಬೇಕಾಗುವ ವಿಟಮಿನ್ ಸಿ ಮತ್ತು ವಿಟಮಿನ್ ಎ, ಕಬ್ಬಿಣಾಂಶಗಳಿದ್ದು, ಅತ್ಯಂತ ಪ್ರಯೋಜನವನ್ನು ನೀಡುತ್ತದೆ.
  2. ಮೊಟ್ಟೆಗಳು: ನಮ್ಮ ಕೂದಲು ಆರೋಗ್ಯಕರವಾಗಿ ಮತ್ತು ದಪ್ಪವಾಗಿ ಬೆಳೆಯಲು ಪ್ರೋಟೀನ್ ಅಗತ್ಯವಿರುತ್ತದೆ ಮತ್ತು ಮೊಟ್ಟೆಗಳು ಪ್ರೋಟೀನ್ ಪಡೆಯಲು ಉತ್ತಮ ಮೂಲವಾಗಿದೆ. ಕೂದಲು ಉದುರುವಿಕೆಯನ್ನು ತಡೆಯಲು ಅಗತ್ಯವಿರುವ ಪ್ರೋಟೀನ್ ಮತ್ತು ಬಯೋಟಿನ್‌ಗಳನ್ನು ಮೊಟ್ಟೆಗಳು ಹೊಂದಿದ್ದು ಕೂದಲು ಉದ್ದನೆ ಬೆಳೆಯಲು ಸಾಹಯಕವಾಗಿದೆ.
  3. ಬೆರ್ರಿ ಹಣ್ಣುಗಳು: ಬೆರ್ರಿ ಹಣ್ಣುಗಳು ರೋಗ ನಿರೋಧಕ ಶಕ್ತಿ ಹಾಗು ವಿಟಮಿನ್ ಸಿ ಅಂಶವನ್ನು ಹೊಂದಿದ್ದು, ಕೂದಲಿನ ಬೇರುಗಳ ಮೇಲೆ ನೇರವಾಗಿ ಪರಿಣಾಮ ಬೀರಿ ಕೂದಲು ಬಲವಾಗಿರಲು ಸಹಾಯ ಮಾಡುತ್ತದೆ. ಆದ್ದರಿಂದ ನಿಮ್ಮ ಕೂದಲಿನ ಆರೋಗ್ಯಕ್ಕಾಗಿ ದೈನಂದಿನ ಆಹಾರದಲ್ಲಿ ಯಾವುದೇ ರೀತಿಯ ಬೆರ್ರಿ ಹಣ್ಣುಗಳನ್ನು ಸೇವಿಸುವುದು ಉತ್ತಮ.
  4. ಬಾದಾಮಿ: ಬಾದಾಮಿಯು ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್ ಇ ನಂತಹ ಅತ್ಯುತ್ತಮ ಪೋಷಕಾಂಶಗಳನ್ನು ಒಳಗೊಂಡಿದ್ದು,ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಇದಲ್ಲದೆ, ಬಾದಾಮಿ ಕೂದಲಿಗೆ ರಕ್ಷಣಾತ್ಮಕ ತಡೆಗೋಡೆಯಾಗಿ ಧೂಳು ಮಾಲಿನ್ಯಗಳಿಂದ ರಕ್ಷಣೆ ನೀಡುತ್ತದೆ.
  5. ಚಿಯಾ(ಕಾಮ ಕಸ್ತೂರಿ) ಬೀಜಗಳು: ಚಿಯಾ ಬೀಜಗಳು ಕೂದಲಿಗೆ ಪೌಷ್ಟಿಕಾಂಶವನ್ನು ಒದಗಿಸುತ್ತವೆ. ಇದು ಬಲವಾದ ಮತ್ತು ದಟ್ಟವಾದ ಕೂದಲನ್ನು ಪಡೆಯಲು ಸಹಾಯ ಮಾಡುತ್ತದೆ. ಅಲ್ಲದೆ, ಚಿಯಾ ಬೀಜಗಳಲ್ಲಿ ಇರುವ ತಾಮ್ರವು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ಇದು ನೆತ್ತಿಯ ಭಾಗವನ್ನು ಯಾವುದೇ ಸೋಂಕಿನಿಂದ ರಕ್ಷಿಸುತ್ತದೆ ಮತ್ತು ನೆತ್ತಿಯನ್ನು ತಂಪಾಗಿಡುತ್ತದೆ.

(ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.)

ಆರೋಗ್ಯಕ್ಕೆ ಸಂಬಂಧಿಸಿದ ಸುದ್ಧಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 5:08 pm, Fri, 28 October 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ