AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Health: ಅತಿಯಾದ ಸಕ್ಕರೆ, ಉಪ್ಪು ಸೇವನೆಯಿಂದ ಕಿಡ್ನಿ ಮೇಲಾಗುವ ಪರಿಣಾಮವೇನು?

ಕಿಡ್ನಿಯ ಆರೋಗ್ಯಕ್ಕೆ ನಾವು ಸೇವಿಸುವ ಆಹಾರವೂ ಕಾರಣವಾಗುತ್ತದೆ. ಹೀಗಾಗಿ, ಕಿಡ್ನಿಯ ಆರೋಗ್ಯವನ್ನು ಹೆಚ್ಚಿಸುವ ಆಹಾರಗಳನ್ನು ಆಯ್ಕೆ ಮಾಡಿಕೊಳ್ಳುವುದು ಬಹಳ ಮುಖ್ಯ. ಅತಿಯಾಗಿ ಸಕ್ಕರೆ ಮತ್ತು ಉಪ್ಪು ಸೇವನೆ ಮಾಡುವುದರಿಂದ ಕಿಡ್ನಿಯ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ಕುರಿತು ಮಾಹಿತಿ ಇಲ್ಲಿದೆ.

Kidney Health: ಅತಿಯಾದ ಸಕ್ಕರೆ, ಉಪ್ಪು ಸೇವನೆಯಿಂದ ಕಿಡ್ನಿ ಮೇಲಾಗುವ ಪರಿಣಾಮವೇನು?
ಕಿಡ್ನಿಯ ಆರೋಗ್ಯImage Credit source: istock
Follow us
ಸುಷ್ಮಾ ಚಕ್ರೆ
|

Updated on: Apr 20, 2024 | 5:14 PM

ನಾವು ಏನು ಕುಡಿಯುತ್ತೇವೆ, ಏನು ತಿನ್ನುತ್ತೇವೆ ಎಲ್ಲವೂ ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ನಾವು ಕೆಲವೊಮ್ಮೆ ಅದನ್ನು ಗ್ರಹಿಸಲು ವಿಫಲರಾಗುತ್ತೇವೆ. ನಮ್ಮ ದೇಹದಲ್ಲಿನ ಹುರುಳಿ ಆಕಾರದ ಚೀಲಗಳಾದ ಮೂತ್ರಪಿಂಡಗಳು (Kidney) ನಾವು ಸೇವಿಸುವ ಆಹಾರದಿಂದ ಪ್ರಭಾವಿತವಾಗಿರುವ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ನಾವು ಸೇವಿಸುವ ಆಹಾರ ಮೂತ್ರಪಿಂಡಗಳ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ನಮ್ಮ ದೇಹದಲ್ಲಿನ ಎಲ್ಲಾ ಖನಿಜಗಳನ್ನು ಸಮತೋಲನಗೊಳಿಸಲು ರಕ್ತದೊತ್ತಡವನ್ನು (Blood Pressure Control) ನಿಯಂತ್ರಿಸಲು ಸಹಾಯ ಮಾಡುತ್ತದೆ.

ಹೆಚ್ಚು ಉಪ್ಪು ಮತ್ತು ಸಕ್ಕರೆ ಮೂತ್ರಪಿಂಡಗಳಿಗೆ ಏಕೆ ಹಾನಿಕಾರಕ?:

ಹೆಚ್ಚು ಉಪ್ಪು, ಸಕ್ಕರೆ ಮತ್ತು ಮಾಂಸವನ್ನು ಸೇವಿಸುವುದರಿಂದ ಮೂತ್ರಪಿಂಡಗಳ ಮೇಲೆ ಹೆಚ್ಚುವರಿ ಒತ್ತಡವನ್ನು ಉಂಟುಮಾಡಬಹುದು. ಇದು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದು ದೀರ್ಘಕಾಲದ ಕಿಡ್ನಿ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಇದರ ಬದಲು ಹಣ್ಣುಗಳು, ತರಕಾರಿಗಳು, ಧಾನ್ಯಗಳಂತಹ ಸಸ್ಯ ಆಧಾರಿತ ಆಹಾರವನ್ನು ತಿನ್ನುವುದರಿಂದ ನಮ್ಮ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುತ್ತದೆ ಮತ್ತು ಮೂತ್ರಪಿಂಡಗಳ ಮೇಲಿನ ಹೆಚ್ಚುವರಿ ಹೊರೆಯನ್ನು ಕಡಿಮೆ ಮಾಡುತ್ತದೆ. ಈ ರೀತಿಯ ಆಹಾರವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ, ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ನಮ್ಮ ಮೂತ್ರಪಿಂಡಗಳು ಒತ್ತಡವಿಲ್ಲದೆ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.

ಇದನ್ನೂ ಓದಿ: Smoking Effect: ಧೂಮಪಾನದಿಂದ ನಿಮ್ಮ ಕಿಡ್ನಿಯ ಮೇಲಾಗುವ ಪರಿಣಾಮಗಳೇನು?

ನಮ್ಮ ಮೂತ್ರಪಿಂಡಗಳನ್ನು ಆರೋಗ್ಯಕರವಾಗಿಡಲು ಸೋಡಿಯಂ, ಸಕ್ಕರೆ ಮತ್ತು ಪ್ರೊಟೀನ್ ಅನ್ನು ಮಿತವಾಗಿ ಸೇವನೆ ಮಾಡುವುದು ಮುಖ್ಯ. ವಿಶೇಷವಾಗಿ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವವರಿಗೆ ಪೊಟ್ಯಾಸಿಯಮ್ ಮತ್ತು ರಂಜಕದ ಸಮತೋಲನವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಸಂಸ್ಕರಿಸಿದ ಆಹಾರಗಳ ಬದಲಿಗೆ ನೈಸರ್ಗಿಕ ಆಹಾರವನ್ನು ಸೇವಿಸುವುದರಿಂದ ನಮ್ಮ ಮೂತ್ರಪಿಂಡಗಳು ಆರೋಗ್ಯಕರವಾಗಿರಲು ಸಹಾಯ ಮಾಡುತ್ತದೆ. ನಾವು ಸೇವಿಸುವ ಆಹಾರದಲ್ಲಿ ಹೆಚ್ಚು ಉಪ್ಪು ಅಥವಾ ಸಕ್ಕರೆ ಅಡಗಿದೆಯೇ ಎಂದು ನೋಡಲು ಯಾವಾಗಲೂ ಆಹಾರ ಉತ್ಪನ್ನಗಳ ಮೇಲೆ ಪೌಷ್ಟಿಕಾಂಶದ ಲೇಬಲ್ ಅನ್ನು ಪರಿಶೀಲಿಸಬೇಕು. ಅಲ್ಲದೆ, ಸಾಕಷ್ಟು ನೀರು ಸೇವಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಇದು ನಮ್ಮ ದೇಹದಿಂದ ವಿಷವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ ಮತ್ತು ನಮ್ಮ ಮೂತ್ರಪಿಂಡಗಳು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ