Kidney Health: ಮಳೆಗಾಲದಲ್ಲಿ ಕಿಡ್ನಿ ಆರೈಕೆ ಹೇಗಿರಬೇಕು? ಇಲ್ಲಿವೆ ಟಿಪ್ಸ್

ಮುಂಗಾರು ಎಂಬುದು ಬಿಸಿಲಿನಿಂದ ನೆಮ್ಮದಿ ನೀಡುವುದಷ್ಟೇ ಅಲ್ಲದೆ ಹಲವು ರೋಗಗಳಿಗೂ ಆಹ್ವಾನ ನೀಡುತ್ತದೆ. ಮಳೆಗಾಲದಲ್ಲಿ ಕಿಡ್ನಿ( Kidney)ಆರೋಗ್ಯವನ್ನು ಕಾಪಾಡಿಕೊಳ್ಳುವ ಸವಾಲು ಕೂಡ ಇದೆ.

Kidney Health: ಮಳೆಗಾಲದಲ್ಲಿ ಕಿಡ್ನಿ ಆರೈಕೆ ಹೇಗಿರಬೇಕು? ಇಲ್ಲಿವೆ ಟಿಪ್ಸ್
Kidney
Follow us
| Updated By: ನಯನಾ ರಾಜೀವ್

Updated on: Jun 23, 2022 | 8:00 AM

ಮುಂಗಾರು ಎಂಬುದು ಬಿಸಿಲಿನಿಂದ ನೆಮ್ಮದಿ ನೀಡುವುದಷ್ಟೇ ಅಲ್ಲದೆ ಹಲವು ರೋಗಗಳಿಗೂ ಆಹ್ವಾನ ನೀಡುತ್ತದೆ. ಮಳೆಗಾಲದಲ್ಲಿ ಕಿಡ್ನಿ( Kidney)ಆರೋಗ್ಯವನ್ನು ಕಾಪಾಡಿಕೊಳ್ಳುವ ಸವಾಲು ಕೂಡ ಇದೆ. ಕಿಡ್ನಿಯು ದೇಹದ ಅತ್ಯಂತ ಸೂಕ್ಷ್ಮವಾದ ಅಂಗ. ಹೆಚ್ಚಿನವರು ಈ ಅಂಗದ ಬಗ್ಗೆ ಹೆಚ್ಚು ಕಾಳಜಿವಹಿಸುವುದಿಲ್ಲ. ಆದರೆ ನಮ್ಮನ್ನು ಆರೋಗ್ಯವಂತರಾಗಿಡುವ ಅನೇಕ ಕಾರ್ಯಗಳನ್ನು ಕಿಡ್ನಿ ಮಾಡುತ್ತದೆ. ನಮ್ಮ ಜೀವನ ಶೈಲಿ, ಆಹಾರ ಕ್ರಮಗಳು ಕೆಲವು ಅಪಾಯಗಳನ್ನು ತಂದೊಡ್ಡುತ್ತವೆ.

ಮಳೆಗಾಲದಲ್ಲಿ ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ? ವ್ಯಾಯಾಮ ಮಾಡಿ: ನಿತ್ಯ ನೀವು ವ್ಯಾಯಾಮ ಮಾಡುವುದರಿಂದ ದೇಹದಲ್ಲಿನ ಕೊಬ್ಬಿನಾಂಶ ಕರಗಿಸುತ್ತದೆ, ಹಾಗೆಯೇ ರಕ್ತದೊತ್ತಡವನ್ನು ಕೂಡ ನಿಯಂತ್ರಿಸಬಹುದಾಗಿದೆ.

ಆಹಾರದಲ್ಲಿ ಹಣ್ಣುಗಳು ಮತ್ತು ತರಕಾರಿಗಳಿರಲಿ ಆಹಾರದಲ್ಲಿ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಕಿಡ್ನಿ ಸಮಸ್ಯೆಗಳು ದೂರವಾಗಲಿವೆ. ಪಪ್ಪಾಯಿ, ಸೇಬು, ಪೇರಳೆ ಇತರೆ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿ ಸಕ್ಕರೆ ಅಂಶ ಕೂಡ ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ಮಧುಮೇಹ ಹಾಗೂ ಬಿಪಿ ಇರುವವರಿಗೆ ಕಿಡ್ನಿ ಸಮಸ್ಯೆ ಹೆಚ್ಚು ಮಧುಮೇಹ ಹಾಗೂ ಬಿಪಿ ಸಮಸ್ಯೆ ಇರುವವರಿಗೆ ಕಿಡ್ನಿ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕುಟುಂಬದಲ್ಲಿ ಅನುವಂಶಿಕವಾಗಿ ರಕ್ತದೊತ್ತಡ ಅಥವಾ ಮಧುಮೇಹದ ಸಮಸ್ಯೆಯಿದ್ದರೆ, ಪದೇ ಪದೇ ರಕ್ತದೊತ್ತಡವನ್ನು ಪರೀಕ್ಷಿಸಿಕೊಳ್ಳಬೇಕು.

ಹೆಚ್ಚು ನೀರು ಸೇವನೆ ಅಗತ್ಯ ಉತ್ತಮ ಆರೋಗ್ಯಕ್ಕಾಗಿ ನೀರನ್ನು ಹೆಚ್ಚೆಚ್ಚು ಕುಡಿಯಬೇಕು. ನಿತ್ಯ ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಿರಿ ಅಥವಾ ಇತರೆ ಹಣ್ಣಿನ ರಸಗಳನ್ನು ಕೂಡ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು. ಮೂತ್ರವಿಸರ್ಜನೆ ಹೆಚ್ಚು ಮಾಡುವುದರಿಂದ ದೇಹದಲ್ಲಿರುವ ಟಾಕ್ಸಿನ್ ಹೊರ ಹೋಗುತ್ತದೆ. ಇದರಿಂದ ಮೂತ್ರಪಿಂಡದಲ್ಲಿರುವ ಸೋಡಿಯಂ ಮತ್ತು ಯೂರಿಯಾ ಅಂಶಗಳು ಕೂಡ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ