AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diet Tips for Kidney : ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಹಣ್ಣುಗಳನ್ನು ಸೇವಿಸಿ

ಅನಾರೋಗ್ಯಕರ ಜೀವನ, ಅನಿಯಮಿತ ಆಹಾರ ಪದ್ಧತಿ, ದೈಹಿಕ ಚಟುವಟಿಕೆಯ ಕೊರತೆ ಹೀಗೆ ಬದಲಾದ ಜೀವನ ಶೈಲಿಯಿಂದ ಕಾಡುವ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಇತ್ತೀಚೆಗಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ನಿಂದ ಬಳಲುತ್ತಿರುವವರ ಸಂಖ್ಯೆಯು ಹೆಚ್ಚಾಗಿದೆ. ಕಿಡ್ನಿ ಸ್ಟೋನ್ ಕಂಡು ಬಂದ ಪ್ರಾರಂಭದಲ್ಲೇ ಆಹಾರ ಕ್ರಮದಲ್ಲಿ ಕೆಲವು ಬದಲಾವಣೆಗಳು ಮಾಡಿಕೊಂಡರೆ ಮೂತ್ರ ಪಿಂಡದ ಕಲ್ಲಿನ ಸಮಸ್ಯೆಯಿಂದ ಸುಲಭವಾಗಿ

Diet Tips for Kidney : ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಹಣ್ಣುಗಳನ್ನು ಸೇವಿಸಿ
ಸಾಯಿನಂದಾ
| Edited By: |

Updated on: May 03, 2024 | 3:14 PM

Share

ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಮೂತ್ರ ಪಿಂಡದ ಕಲ್ಲಿನ ಸಮಸ್ಯೆಯು ಕಾಣಿಸಿಕೊಳ್ಳುತ್ತಿದೆ. ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಆಕ್ಸಲೇಟ್ ಮತ್ತು ಕ್ಯಾಲ್ಸಿಯಂ ಕಲ್ಲುಗಳ ರಚನೆಗೆ ಕಾರಣವಾಗಬಹುದು. ಕಿಡ್ನಿ ಸ್ಟೋನ್ ಗಳಾದಾಗ ಹಳದಿ ಅಥವಾ ಕೆಂಪು ಬಣ್ಣದ ಮೂತ್ರ, ಕೆಳ ಬೆನ್ನು ನೋವು ಮತ್ತು ವಾಕರಿಕೆಯಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಮೂತ್ರಪಿಂಡದ ಕಲ್ಲಿನ ಸಮಸ್ಯೆಯು ಶುರುವಾದ ಆರಂಭದಲ್ಲೇ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದುಕೊಳ್ಳದಿದ್ದರೆ ಚೇತರಿಕೆಗೆ ಶಸ್ತ್ರಚಿಕಿತ್ಸೆ ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ.

ಕಿಡ್ನಿ ಸ್ಟೋನ್ ಸಮಸ್ಯೆಗೆ ಆಹಾರ ಕ್ರಮವು ಹೀಗಿರಲಿ:

* ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ : ಕಿಡ್ನಿ ಸಮಸ್ಯೆಗಳನ್ನು ತಡೆಯಲು ಸಾಕಷ್ಟು ನೀರು ಕುಡಿಯುವ ಅಭ್ಯಾಸವು ಬೆಳೆಸುವುದು ಒಳ್ಳೆಯದು. ದಿನಕ್ಕೆ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿದಾಗ ಮೂತ್ರಪಿಂಡಗಳ ಕಾರ್ಯವು ದೇಹದಿಂದ ವಿಷವನ್ನು ತೆಗೆದುಹಾಕುವ ಕೆಲಸ ಮಾಡುತ್ತದೆ.

* ಸಿಟ್ರಸ್ ಹಣ್ಣುಗಳ ಸೇವನೆ: ನಿಂಬೆಹಣ್ಣು, ಕಿತ್ತಳೆ, ಮುಸಂಬಿಗಳಂತಹ ಹಣ್ಣುಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಈ ಸಿಟ್ರಸ್ ಹಣ್ಣುಗಳು ಡಿಟಾಕ್ಸಿಫೈಯರ್ ಗಳಾಗಿ ಕಾರ್ಯನಿರ್ವಹಿಸುತ್ತವೆ. ಇದು ಮೂತ್ರಪಿಂಡವು ಸರಿಯಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಿದೆ.

* ಆಹಾರ ಪದಾರ್ಥಗಳಲ್ಲಿ ಉಪ್ಪು ಬಳಕೆ ಮಿತವಾಗಿರಲಿ : ಕೆಲವರು ತಮ್ಮ ಆಹಾರ ಗಳಲ್ಲಿ ಅತಿಯಾದ ಉಪ್ಪನ್ನು ಸೇವಿಸುತ್ತಾರೆ. ಅತಿಯಾದ ಉಪ್ಪಿನಾಂಶಯುಕ್ತ ಆಹಾರಗಳ ಸೇವನೆಯು ಮೂತ್ರಪಿಂಡದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಉಪ್ಪಿನಲ್ಲಿ ಸೋಡಿಯಂ ಅಂಶವನ್ನು ಮೂತ್ರಪಿಂಡಗಳಿಂದ ದೇಹದಿಂದ ಹೊರ ಹಾಕಲು ಸಾಧ್ಯವಾಗುವುದಿಲ್ಲ. ಈ ಉಪ್ಪು ಕಿಡ್ನಿ ಸ್ಟೋನ್ ರೂಪುಗೊಳ್ಳಲು ಕಾರಣವಾಗಬಹುದು.

* ಕಾಫಿಯಿಂದ ದೂರವಿರಿ : ಕೆಲವರಿಗೆ ದಿನಕ್ಕೆ ಮೂರು ನಾಲ್ಕು ಬಾರಿ ಕಾಫಿ ಹಾಗೂ ಟೀ ಕುಡಿಯುವ ಅಭ್ಯಾಸವಿರುತ್ತದೆ. ಒಂದು ವೇಳೆ ನಿಮಗೆ ಮೂತ್ರಪಿಂಡದ ತೊಂದರೆಯಿದ್ದರೆ ಕಾಫಿಯನ್ನು ತ್ಯಜಿಸುವುದು ಉತ್ತಮ. ಈ ಕಾಫಿಯಲ್ಲಿ ಕೆಫೀನ್ ಅಂಶವು ಅಧಿಕವಾಗಿದ್ದು, ಮೂತ್ರಪಿಂಡದ ಕಲ್ಲುಗಳ ಅಪಾಯವನ್ನು ಹೆಚ್ಚಿಸುವವ ಸಾಧ್ಯತೆಯಿದೆ.

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!