AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Stone: ಕಿಡ್ನಿ ಸ್ಟೋನ್ ಜಾಸ್ತಿಯಾಗುತ್ತಿರುವುದೇಕೆ? ತಜ್ಞರು ಹೇಳುವುದೇನು?

ಬಿಸಿಲಿನ ದಗೆಗೆ ನೀರು ಎಷ್ಟೇ ಕುಡಿದರೂ ಬೆವರಾಗಿ ಇಳಿಯುತ್ತದೆ ಇದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಇದು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್‌ ಪ್ರಕರಣಗಳು ಹೆಚ್ಚಳವಾಗುವಂತೆ ಮಾಡಿದೆ. ಆಸ್ಪತ್ರೆಗಳಲ್ಲಿ ಎಲ್ಲಾ ಪ್ರಕರಣಕ್ಕಿಂತ ಜಾಸ್ತಿ ಕಿಡ್ನಿ ಸ್ಟೋನ್‌ ಕಂಡುಬರುತ್ತಿದೆ. ವರದಿಗಳು ಹೇಳುವ ಪ್ರಕಾರ ಇಂತಹ ಸಮಸ್ಯೆ ಹಿಂದಿಗಿಂತ ದುಪ್ಪಟ್ಟು ಆಗಿದೆ. ಅದರಲ್ಲಿಯೂ ಪುರುಷರಲ್ಲಿ ಈ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದೆ. ಹಾಗಾದರೆ ಇದಕ್ಕೆ ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು? ಇಲ್ಲಿದೆ ಮಾಹಿತಿ.

Kidney Stone: ಕಿಡ್ನಿ ಸ್ಟೋನ್ ಜಾಸ್ತಿಯಾಗುತ್ತಿರುವುದೇಕೆ? ತಜ್ಞರು ಹೇಳುವುದೇನು?
Kidney Stone
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 25, 2024 | 6:07 PM

Share

ಈ ಬಾರಿಯ ಬಿಸಿಲು ಜನರನ್ನು ಹೈರಾಣ ಮಾಡಿದೆ ಎಂದರೆ ತಪ್ಪಾಗಲಾರದು. ಇದರಿಂದ ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯರಿಗಿಂತಲೂ ಹೆಚ್ಚಾಗಿ ಪುರುಷರಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಬಿಸಿಲಿ ದಗೆಯಿಂದ ನೀರು ಎಷ್ಟೇ ಕುಡಿದರೂ ಬೆವರಾಗಿ ಇಳಿಯುತ್ತದೆ ಇದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಇದು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್‌ ಪ್ರಕರಣಗಳು ಹೆಚ್ಚಳವಾಗುವಂತೆ ಮಾಡಿದೆ. ಆಸ್ಪತ್ರೆಗಳಲ್ಲಿ ಎಲ್ಲಾ ಪ್ರಕರಣಕ್ಕಿಂತ ಜಾಸ್ತಿ ಕಿಡ್ನಿ ಸ್ಟೋನ್‌ ಕಂಡುಬರುತ್ತಿದೆ. ವರದಿಗಳು ಹೇಳುವ ಪ್ರಕಾರ ಇಂತಹ ಸಮಸ್ಯೆ ಹಿಂದಿಗಿಂತ ದುಪ್ಪಟ್ಟು ಆಗಿದೆ. ಅದರಲ್ಲಿಯೂ ಪುರುಷರಲ್ಲಿ ಈ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದೆ. ಹಾಗಾದರೆ ಇದಕ್ಕೆ ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು? ಇಲ್ಲಿದೆ ಮಾಹಿತಿ.

ಬೇಸಿಗೆಯಲ್ಲಿ ಕಿಡ್ನಿ ಸ್ಟೋನ್ ಹೆಚ್ಚುತ್ತಿರುವುದಕ್ಕೆ ಕಾರಣವೇನು?

ತಾಪಮಾನ ಏರಿಕೆಯು ಜನರಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆ ಹೆಚ್ಚಿಸಿದೆ. ಹೆಚ್ಚಾಗಿ 20 ರಿಂದ 40 ವರ್ಷದವರಲ್ಲೇ ಕಿಡ್ನಿ ಸ್ಟೋನ್‌ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಬೇಸಿಗೆಯಲ್ಲಿ ಈ ರೀತಿ ಪ್ರಕರಣಗಳು ಕಂಡು ಬರಲು ಮುಖ್ಯ ಕಾರಣವೆಂದರೆ ದೇಹದಲ್ಲಿನ ನೀರಿನ ಕೊರತೆ. ಸಾಮಾನ್ಯವಾಗಿ ಮಹಿಳೆಯರಾಗಲಿ ಅಥವಾ ಪುರುಷರಿಗಾಗಲಿ ದೇಹಕ್ಕೆ 2ರಿಂದ 3 ಲೀ. ನೀರು ಅಗತ್ಯ. ಬೇಸಿಗೆಯಲ್ಲಿ ಬೆವರು ಹೆಚ್ಚಾಗಿ ಹೋಗುವುದರಿಂದ ನೀರಿನ ಅಂಶ ಕಡಿಮೆಯಾಗುತ್ತದೆ. ಅದರಲ್ಲಿಯೂ ಬೆವರು ಹೆಚ್ಚಾಗಿ ಹೋಗುವವರು ನೀರನ್ನು ಜಾಸ್ತಿ ಕುಡಿಯಬೇಕು. ಇಲ್ಲವಾದಲ್ಲಿ ಇದು ನೇರವಾಗಿ ಮೂತ್ರದ ಸೋಂಕು ಹಾಗೂ ಕಿಡ್ನಿ ಸ್ಟೋನ್‌ಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ಮಧ್ಯ ವಯಸ್ಕರಲ್ಲಿ ಕ್ಯಾಲ್ಸಿಯಂ ಶೇಖರಣೆಯಿಂದಾಗಿ ಕಿಡ್ನಿ ಸ್ಟೋನ್‌ ಉಂಟಾಗುತ್ತವೆ. ಅದರಲ್ಲಿಯೂ ಇತ್ತೀಚೆಗೆ ಯುವ ಸಮುದಾಯದಲ್ಲಿರುವ ಸ್ಥೂಲಕಾಯತೆ ಜೀವನಶೈಲಿಯಲ್ಲಿ ಏರುಪೇರು ಮುಂತಾದ ಸಮಸ್ಯೆಗಳು ಇದಕ್ಕೆ ಪೂರಕವಾಗಿದೆ. ಅಲ್ಲದೆ ಹೆಚ್ಚಿನ ಪ್ರೋಟೀನ್‌, ಉಪ್ಪು ಮತ್ತು ಸಕ್ಕರೆ ಸೇವನೆ ಕಿಡ್ನಿ ಸ್ಟೋನ್‌ಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಅಡುಗೆಗೆ ಬಳಸುವ ಈ ಎಣ್ಣೆಯಲ್ಲಿ ಸ್ಯಾಚುರೇಟೆಡ್ ಕೊಬ್ಬು ಅಧಿಕ, ಆರೋಗ್ಯಕ್ಕೆ ಅಪಾಯ ಖಂಡಿತ

ಸಾಮಾನ್ಯ ಅವಧಿಗಿಂತ ಬೇಸಿಗೆಯಲ್ಲಿ ಶೇ.40 ರಷ್ಟು ಪ್ರಕರಣ ಹೆಚ್ಚಾಗಿರುವುದರಿಂದ ಈ ಬಗ್ಗೆ ಎಲ್ಲರೂ ಗಮನ ಕೊಡುವುದು ಉತ್ತಮ. ಹಾಗಾಗಿ ನೀರನ್ನು ಹೆಚ್ಚು ಹೆಚ್ಚು ಕುಡಿಯುವುದರ ಜೊತೆಗೆ ಮೂತ್ರ ವಿಸರ್ಜನೆಯನ್ನು ತಡೆದುಕೊಳ್ಳಬೇಡಿ. ಜತೆಗೆ ದಿನಕ್ಕೆ 2ರಿಂದ 3 ಲೀ.ನಷ್ಟು ನೀರು ಕುಡಿದರೆ ಕಿಡ್ನಿ ಉತ್ತಮವಾಗಿರುತ್ತದೆ. ಯಾವುದೇ ಅಪಾಯವೂ ಇರುವುದಿಲ್ಲ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್