AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Stone: ಕಿಡ್ನಿ ಸ್ಟೋನ್ ಜಾಸ್ತಿಯಾಗುತ್ತಿರುವುದೇಕೆ? ತಜ್ಞರು ಹೇಳುವುದೇನು?

ಬಿಸಿಲಿನ ದಗೆಗೆ ನೀರು ಎಷ್ಟೇ ಕುಡಿದರೂ ಬೆವರಾಗಿ ಇಳಿಯುತ್ತದೆ ಇದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಇದು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್‌ ಪ್ರಕರಣಗಳು ಹೆಚ್ಚಳವಾಗುವಂತೆ ಮಾಡಿದೆ. ಆಸ್ಪತ್ರೆಗಳಲ್ಲಿ ಎಲ್ಲಾ ಪ್ರಕರಣಕ್ಕಿಂತ ಜಾಸ್ತಿ ಕಿಡ್ನಿ ಸ್ಟೋನ್‌ ಕಂಡುಬರುತ್ತಿದೆ. ವರದಿಗಳು ಹೇಳುವ ಪ್ರಕಾರ ಇಂತಹ ಸಮಸ್ಯೆ ಹಿಂದಿಗಿಂತ ದುಪ್ಪಟ್ಟು ಆಗಿದೆ. ಅದರಲ್ಲಿಯೂ ಪುರುಷರಲ್ಲಿ ಈ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದೆ. ಹಾಗಾದರೆ ಇದಕ್ಕೆ ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು? ಇಲ್ಲಿದೆ ಮಾಹಿತಿ.

Kidney Stone: ಕಿಡ್ನಿ ಸ್ಟೋನ್ ಜಾಸ್ತಿಯಾಗುತ್ತಿರುವುದೇಕೆ? ತಜ್ಞರು ಹೇಳುವುದೇನು?
Kidney Stone
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 25, 2024 | 6:07 PM

Share

ಈ ಬಾರಿಯ ಬಿಸಿಲು ಜನರನ್ನು ಹೈರಾಣ ಮಾಡಿದೆ ಎಂದರೆ ತಪ್ಪಾಗಲಾರದು. ಇದರಿಂದ ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯರಿಗಿಂತಲೂ ಹೆಚ್ಚಾಗಿ ಪುರುಷರಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಬಿಸಿಲಿ ದಗೆಯಿಂದ ನೀರು ಎಷ್ಟೇ ಕುಡಿದರೂ ಬೆವರಾಗಿ ಇಳಿಯುತ್ತದೆ ಇದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಇದು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್‌ ಪ್ರಕರಣಗಳು ಹೆಚ್ಚಳವಾಗುವಂತೆ ಮಾಡಿದೆ. ಆಸ್ಪತ್ರೆಗಳಲ್ಲಿ ಎಲ್ಲಾ ಪ್ರಕರಣಕ್ಕಿಂತ ಜಾಸ್ತಿ ಕಿಡ್ನಿ ಸ್ಟೋನ್‌ ಕಂಡುಬರುತ್ತಿದೆ. ವರದಿಗಳು ಹೇಳುವ ಪ್ರಕಾರ ಇಂತಹ ಸಮಸ್ಯೆ ಹಿಂದಿಗಿಂತ ದುಪ್ಪಟ್ಟು ಆಗಿದೆ. ಅದರಲ್ಲಿಯೂ ಪುರುಷರಲ್ಲಿ ಈ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದೆ. ಹಾಗಾದರೆ ಇದಕ್ಕೆ ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು? ಇಲ್ಲಿದೆ ಮಾಹಿತಿ.

ಬೇಸಿಗೆಯಲ್ಲಿ ಕಿಡ್ನಿ ಸ್ಟೋನ್ ಹೆಚ್ಚುತ್ತಿರುವುದಕ್ಕೆ ಕಾರಣವೇನು?

ತಾಪಮಾನ ಏರಿಕೆಯು ಜನರಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆ ಹೆಚ್ಚಿಸಿದೆ. ಹೆಚ್ಚಾಗಿ 20 ರಿಂದ 40 ವರ್ಷದವರಲ್ಲೇ ಕಿಡ್ನಿ ಸ್ಟೋನ್‌ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಬೇಸಿಗೆಯಲ್ಲಿ ಈ ರೀತಿ ಪ್ರಕರಣಗಳು ಕಂಡು ಬರಲು ಮುಖ್ಯ ಕಾರಣವೆಂದರೆ ದೇಹದಲ್ಲಿನ ನೀರಿನ ಕೊರತೆ. ಸಾಮಾನ್ಯವಾಗಿ ಮಹಿಳೆಯರಾಗಲಿ ಅಥವಾ ಪುರುಷರಿಗಾಗಲಿ ದೇಹಕ್ಕೆ 2ರಿಂದ 3 ಲೀ. ನೀರು ಅಗತ್ಯ. ಬೇಸಿಗೆಯಲ್ಲಿ ಬೆವರು ಹೆಚ್ಚಾಗಿ ಹೋಗುವುದರಿಂದ ನೀರಿನ ಅಂಶ ಕಡಿಮೆಯಾಗುತ್ತದೆ. ಅದರಲ್ಲಿಯೂ ಬೆವರು ಹೆಚ್ಚಾಗಿ ಹೋಗುವವರು ನೀರನ್ನು ಜಾಸ್ತಿ ಕುಡಿಯಬೇಕು. ಇಲ್ಲವಾದಲ್ಲಿ ಇದು ನೇರವಾಗಿ ಮೂತ್ರದ ಸೋಂಕು ಹಾಗೂ ಕಿಡ್ನಿ ಸ್ಟೋನ್‌ಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ಮಧ್ಯ ವಯಸ್ಕರಲ್ಲಿ ಕ್ಯಾಲ್ಸಿಯಂ ಶೇಖರಣೆಯಿಂದಾಗಿ ಕಿಡ್ನಿ ಸ್ಟೋನ್‌ ಉಂಟಾಗುತ್ತವೆ. ಅದರಲ್ಲಿಯೂ ಇತ್ತೀಚೆಗೆ ಯುವ ಸಮುದಾಯದಲ್ಲಿರುವ ಸ್ಥೂಲಕಾಯತೆ ಜೀವನಶೈಲಿಯಲ್ಲಿ ಏರುಪೇರು ಮುಂತಾದ ಸಮಸ್ಯೆಗಳು ಇದಕ್ಕೆ ಪೂರಕವಾಗಿದೆ. ಅಲ್ಲದೆ ಹೆಚ್ಚಿನ ಪ್ರೋಟೀನ್‌, ಉಪ್ಪು ಮತ್ತು ಸಕ್ಕರೆ ಸೇವನೆ ಕಿಡ್ನಿ ಸ್ಟೋನ್‌ಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಅಡುಗೆಗೆ ಬಳಸುವ ಈ ಎಣ್ಣೆಯಲ್ಲಿ ಸ್ಯಾಚುರೇಟೆಡ್ ಕೊಬ್ಬು ಅಧಿಕ, ಆರೋಗ್ಯಕ್ಕೆ ಅಪಾಯ ಖಂಡಿತ

ಸಾಮಾನ್ಯ ಅವಧಿಗಿಂತ ಬೇಸಿಗೆಯಲ್ಲಿ ಶೇ.40 ರಷ್ಟು ಪ್ರಕರಣ ಹೆಚ್ಚಾಗಿರುವುದರಿಂದ ಈ ಬಗ್ಗೆ ಎಲ್ಲರೂ ಗಮನ ಕೊಡುವುದು ಉತ್ತಮ. ಹಾಗಾಗಿ ನೀರನ್ನು ಹೆಚ್ಚು ಹೆಚ್ಚು ಕುಡಿಯುವುದರ ಜೊತೆಗೆ ಮೂತ್ರ ವಿಸರ್ಜನೆಯನ್ನು ತಡೆದುಕೊಳ್ಳಬೇಡಿ. ಜತೆಗೆ ದಿನಕ್ಕೆ 2ರಿಂದ 3 ಲೀ.ನಷ್ಟು ನೀರು ಕುಡಿದರೆ ಕಿಡ್ನಿ ಉತ್ತಮವಾಗಿರುತ್ತದೆ. ಯಾವುದೇ ಅಪಾಯವೂ ಇರುವುದಿಲ್ಲ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ