AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಲ್ಲಿ ಹೃದಯಾಘಾತ ಉಂಟಾಗುವ ಲಕ್ಷಣಗಳೇನು?

ಮಧ್ಯ ವಯಸ್ಸಿನವರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿರುವುದು ಆತಂಕ ಮೂಡಿಸಿರುವ ಬೆನ್ನಲ್ಲೇ ಸಣ್ಣ ಮಕ್ಕಳು ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ. ಮಕ್ಕಳಲ್ಲಿ ಹೃದಯಾಘಾತ ಹೆಚ್ಚುತ್ತಿರುವುದಕ್ಕೆ ಕಾರಣವೇನು? ಅದರ ಲಕ್ಷಣಗಳೇನು?

ಮಕ್ಕಳಲ್ಲಿ ಹೃದಯಾಘಾತ ಉಂಟಾಗುವ ಲಕ್ಷಣಗಳೇನು?
ಹೃದಯಾಘಾತ
ಸುಷ್ಮಾ ಚಕ್ರೆ
|

Updated on:Jan 24, 2024 | 11:50 AM

Share

ಈಗೀಗ ಹೃದಯಾಘಾತ ಬಹಳ ಸಾಮಾನ್ಯ ಕಾಯಿಲೆಯಾಗಿಬಿಟ್ಟಿದೆ. 30 ವರ್ಷ ಮೇಲ್ಪಟ್ಟವರಿಗೂ ಈಗ ಹೃದಯಾಘಾತ ಕಾಣಿಸಿಕೊಳ್ಳುತ್ತಿದೆ. ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಮಧ್ಯವಯಸ್ಸಿನವರಲ್ಲಿ ಮಾತ್ರವಲ್ಲದೆ ಸಣ್ಣ ಮಕ್ಕಳಲ್ಲೂ ಈಗೀಗ ಹೃದಯಾಘಾತ ಉಂಟಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.

ಮಕ್ಕಳಲ್ಲಿ ಹೃದಯಾಘಾತದ ಲಕ್ಷಣಗಳು ಇಲ್ಲಿವೆ:

ಚಳಿಗಾಲದ ತಿಂಗಳುಗಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಾಗುತ್ತದೆ. ಚಳಿಯ ವಾತಾವರಣವು ವಯಸ್ಸಾದ ಜನರನ್ನು, ಕೊಮೊರ್ಬಿಡಿಟಿ ಹೊಂದಿರುವ ಜನರನ್ನು ಹೆಚ್ಚು ದುರ್ಬಲಗೊಳಿಸುತ್ತದೆ. ಇತ್ತೀಚೆಗೆ 5 ವರ್ಷದ ಚಿಕ್ಕ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದು ಆಘಾತಕಾರಿಯಾಗಿದ್ದರೂ ಯುವಜನರು ಹೃದಯ ಸ್ತಂಭನ ಮತ್ತು ಹೃದಯಾಘಾತಕ್ಕೆ ಹೆಚ್ಚು ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಜಡ ಜೀವನಶೈಲಿ ಮುಖ್ಯ ಕಾರಣವಾಗಿದೆ.

ಇದನ್ನೂ ಓದಿ: ನಾವೇಕೆ ಆಗಾಗ ದಂತ ತಪಾಸಣೆ ಮಾಡಿಸಿಕೊಳ್ಳಬೇಕು?

ಇತ್ತೀಚೆಗೆ ಅಮ್ರೋಹಾ ಜಿಲ್ಲೆಯ ಹಸನ್‌ಪುರ ಕೊತ್ವಾಲಿಯ ಹತೈಖೇಡಾದಲ್ಲಿ ಮೊಬೈಲ್ ಫೋನ್‌ನಲ್ಲಿ ಕಾರ್ಟೂನ್ ವೀಕ್ಷಿಸುತ್ತಿದ್ದ 5 ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಕಾಮಿನಿ ಎಂಬ ಬಾಲಕಿ ತನ್ನ ತಾಯಿಯ ಪಕ್ಕದಲ್ಲಿ ಹಾಸಿಗೆಯ ಮೇಲೆ ಮಲಗಿ ಫೋನ್​ನಲ್ಲಿ ಕಾರ್ಟೂನ್ ನೋಡುತ್ತಿದ್ದಾಗ ಫೋನ್ ಇದ್ದಕ್ಕಿದ್ದಂತೆ ಅವಳ ಕೈಯಿಂದ ಕೆಳಗೆ ಬಿದ್ದಿತು. ಆಕೆ ಪ್ರಜ್ಞಾಹೀನಳಾಗಿದ್ದಳು. ತಕ್ಷಣವೇ ಆಕೆಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಆ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಹೃದಯಾಘಾತದಿಂದಾಗಿಯೇ ಆ ಬಾಲಕಿ ಮೃತಪಟ್ಟಿದ್ದಾಳೆಯೇ ಎಂದು ತಿಳಿಯಲು ಆ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹಸ್ತಾಂತರಿಸುವಂತೆ ವೈದ್ಯರು ಆಕೆಯ ಕುಟುಂಬಕ್ಕೆ ಮನವಿ ಮಾಡಿದರು. ಆದರೆ ಅವರು ಒಪ್ಪಲಿಲ್ಲ. ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆಯೇ ಅಥವಾ ಇನ್ನಾವುದೇ ಕಾಯಿಲೆಯಿಂದ ಸಾವನ್ನಪ್ಪಿದ್ದಾಳೆಯೇ ಎಂಬುದು ಖಚಿತವಾಗಿಲ್ಲ. ಕಳೆದ 2 ತಿಂಗಳಲ್ಲಿ ಇಂತಹ ಘಟನೆ ಇದೇ ಮೊದಲಲ್ಲ. ಅಮ್ರೋಹಾ ಮತ್ತು ಬಿಜ್ನೋರ್ ಜಿಲ್ಲೆಗಳಲ್ಲಿ ಹೃದಯಾಘಾತದಿಂದ 12 ಮಕ್ಕಳು ಮತ್ತು ಯುವಕರು ಇದೇ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ದಿನವೂ ಸ್ನಾನ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನವಿದೆ ಗೊತ್ತಾ?

ಮಕ್ಕಳಲ್ಲಿ ಹೃದಯಾಘಾತದ ಲಕ್ಷಣಗಳು ಹೀಗಿವೆ:

– ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪುವುದು

– ಆಯಾಸ

– ಎದೆಯಲ್ಲಿ ನೋವು

– ಅನಿಯಮಿತ ಉಸಿರಾಟ

– ಅತಿಯಾದ ಹೃದಯ ಬಡಿತ

ಮಕ್ಕಳಲ್ಲಿ ಹೃದಯಾಘಾತ ತಡೆಗಟ್ಟುವಿಕೆ ಹೇಗೆ?:

– ಚಲನಶೀಲತೆ ಮತ್ತು ನಮ್ಯತೆಯನ್ನು ಕಾಪಾಡಿಕೊಳ್ಳಲು ನಿಯಮಿತ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಿ.

– ಆರೋಗ್ಯಕರ ಆಹಾರವು ಅಭಿವೃದ್ಧಿಶೀಲ ವರ್ಷಗಳಲ್ಲಿ ಕಾರ್ಡಿನಲ್ ಆಗಿದೆ. ಕೊರತೆಯ ಅಪಾಯವನ್ನು ಕಡಿಮೆ ಮಾಡಲು ಪ್ರೋಟೀನ್, ಫೈಬರ್ ಮತ್ತು ಖನಿಜ ಇರುವ ಆಹಾರಗಳನ್ನು ಹೆಚ್ಚಾಗಿ ಮಕ್ಕಳಿಗೆ ನೀಡಿ.

– ನಿಮ್ಮ ಮಗುವಿನ ದೇಹವನ್ನು ಯಾವಾಗಲೂ ಹೈಡ್ರೀಕರಿಸಿದಂತೆ ನೋಡಿಕೊಳ್ಳಿ. ಇದು ಎಲ್ಲಾ ಹಾನಿಕಾರಕ ಟಾಕ್ಸಿನ್‌ಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Tue, 23 January 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ