Kissing Benefits: ಮುತ್ತು ಕೊಡಲು ಹಿಂಜರಿಯಬೇಡಿ; ಸೋಂಕಿನ ವಿರುದ್ಧವೂ ಹೋರಾಡುತ್ತೆ ಚುಂಬನ!

ವ್ಯಕ್ತಿಗಳಿಗೆ ತುಟಿ ಅಥವಾ ಬಾಯಿಯಲ್ಲಿ ಹುಣ್ಣು ಇದ್ದಾಗ, ಶೀತ ಅಥವಾ ಕೆಮ್ಮು ಇದ್ದಾಗ ಚುಂಬನ ಮಾಡದಿರುವುದು ಉತ್ತಮ. ಇದರಿಂದ ಬೇರೆಯವರಿಗೂ ನಿಮ್ಮ ಸೋಂಕು ಹರಡುತ್ತದೆ.

Kissing Benefits: ಮುತ್ತು ಕೊಡಲು ಹಿಂಜರಿಯಬೇಡಿ; ಸೋಂಕಿನ ವಿರುದ್ಧವೂ ಹೋರಾಡುತ್ತೆ ಚುಂಬನ!
ಸಾಂದರ್ಭಿಕ ಚಿತ್ರ
Follow us
|

Updated on: Feb 10, 2023 | 12:07 PM

ನವದೆಹಲಿ: ಪ್ರೇಮಿಗಳ ದಿನಾಚರಣೆ (Valentine’s Day) ಹತ್ತಿರ ಬಂದಿದೆ. ತಜ್ಞರು ಹೇಳುವಂತೆ ನಿಯಮಿತವಾಗಿ ಚುಂಬನ ಮಾಡುವುದು ಅತ್ಯಗತ್ಯ. ದಂತವೈದ್ಯರ ಪ್ರಕಾರ, ಭಾವೋದ್ರಿಕ್ತವಾಗಿ ನೀಡುವ ಮುತ್ತು ಸಂತೋಷದ ಹಾರ್ಮೋನ್ (happy hormones) ಅನ್ನು ಬಿಡುಗಡೆ ಮಾಡುವುದು ಮಾತ್ರವಲ್ಲದೆ, ಹಲವಾರು ಸೋಂಕುಗಳ ವಿರುದ್ಧವೂ ಹೋರಾಡುತ್ತದೆ. ವಿಶೇಷವಾಗಿ ಭಾವೋದ್ರಿಕ್ತ ಚುಂಬನವು ಲಾಲಾರಸದ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಇದು ಹಲ್ಲುಗಳು, ಬಾಯಿ ಮತ್ತು ಒಸಡುಗಳನ್ನು ಆರೋಗ್ಯಕರವಾಗಿರಿಸುತ್ತದೆ.

ಚುಂಬನವು ಲಾಲಾರಸದ ವಿನಿಮಯವನ್ನು ಒಳಗೊಂಡಿರುತ್ತದೆ. ಏಕೆಂದರೆ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳು ಯಾವಾಗಲೂ ಕೆಟ್ಟದ್ದೇ ಎಂದು ಹೇಳಲು ಸಾಧ್ಯವಿಲ್ಲ. ಲಾಲಾರಸದಲ್ಲಿರುವ ಕೆಲವು ಜೀವಿಗಳು ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಬಹುದು. ಇದು ಹಲ್ಲಿನ ಕೊಳೆತ, ಬಾಯಿಯ ಥ್ರಷ್ ಅಥವಾ ಸ್ಟ್ರೆಪ್ಟೋಕೊಕಸ್ ಅಪಾಯವನ್ನು ತಗ್ಗಿಸುತ್ತದೆ.

ಇದನ್ನೂ ಓದಿ: Shocking Video: ನದಿಯಲ್ಲಿ ಸ್ನಾನ ಮಾಡುವಾಗ ಹೆಂಡತಿಗೆ ಮುತ್ತು ಕೊಟ್ಟ ಗಂಡನಿಗೆ ಹಿಗ್ಗಾಮುಗ್ಗ ಥಳಿಸಿದ ಜನ!

ಆರೋಗ್ಯಕರ ಬ್ಯಾಕ್ಟೀರಿಯಾಕ್ಕೆ ಒಡ್ಡಿಕೊಳ್ಳುವುದರಿಂದ ದೇಹದ ಪ್ರತಿರೋಧವನ್ನು ಸುಧಾರಿಸುವುದರಿಂದ ಚುಂಬನವು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ. ಶೇ. 80ರಷ್ಟು ಲಾಲಾರಸದ ಬ್ಯಾಕ್ಟೀರಿಯಾಗಳು ಎಲ್ಲರಿಗೂ ಸಾಮಾನ್ಯವಾಗಿದ್ದರೆ, ಕೇವಲ ಶೇ. 20ರಷ್ಟು ವ್ಯಕ್ತಿಗಳಿಗೆ ಮಾತ್ರ ವಿಶಿಷ್ಟವಾಗಿದೆ. ಚುಂಬನವು ಪ್ರತಿಕಾಯಗಳನ್ನು ರಚಿಸಲು ದೇಹವನ್ನು ಉತ್ತೇಜಿಸುತ್ತದೆ. ಅದು ಹಾನಿಕಾರಕ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಮೌಖಿಕ ಆರೋಗ್ಯಕ್ಕಾಗಿ ಹಲ್ಲುಜ್ಜುವುದು ಮತ್ತು ಫ್ಲೋಸ್ ಮಾಡುವುದರ ಜೊತೆಗೆ ದಿನಕ್ಕೆ 4 ನಿಮಿಷಗಳ ಕಾಲ ಚುಂಬಿಸುವುದನ್ನು ದಂತವೈದ್ಯರು ಈ ಹಿಂದೆ ಶಿಫಾರಸು ಮಾಡಿದ್ದರು. ಲಾಲಾರಸವು ಹಲ್ಲುಗಳ ಮೇಲೆ ಕುಳಿತುಕೊಳ್ಳುವ ಆಮ್ಲಗಳನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ. ಇದು ಹಲ್ಲಿನ ಕೊಳೆಯುವಿಕೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಗಂಡ-ಹೆಂಡತಿ ಒಟ್ಟಿಗೆ ಮಲಗುವಂತಿಲ್ಲ, ಚುಂಬನ-ಅಪ್ಪುಗೆಯೂ ನಿಷೇಧ; ಶಾಂಘೈನಲ್ಲಿ ಕಠಿಣ ನಿರ್ಬಂಧಕ್ಕೆ ಸೋತ ಜನರು

ಯಾವಾಗ ಚುಂಬಿಸಬಾರದು?: ವ್ಯಕ್ತಿಗಳಿಗೆ ತುಟಿಗಳು ಅಥವಾ ಬಾಯಿಯಲ್ಲಿ ಹುಣ್ಣು ಇದ್ದಾಗ, ಶೀತ ಅಥವಾ ಕೆಮ್ಮು ಇದ್ದಾಗ ಚುಂಬನ ಮಾಡದಿರುವುದು ಉತ್ತಮ. ಇದರಿಂದ ಬೇರೆಯವರಿಗೂ ನಿಮ್ಮ ಸೋಂಕು ಹರಡುತ್ತದೆ. ಇವುಗಳು ಸಾಂಕ್ರಾಮಿಕ ರೋಗಗಳಾಗಿರುವುದರಿಂದ ಸೋಂಕು ತಗಲುವ ಅಪಾಯ ಹೆಚ್ಚಾಗಿರುತ್ತದೆ. ಹಾಗೇ, ಬಾಯಿಯ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ತೀರಾ ಅತ್ಯಗತ್ಯ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು