AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಕ್ಷಣಗಳಿಂದ ಹೊರಬಂದರೂ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತಿದೆಯೇ? ಈ ವಿಷಯಗಳು ಗಮನದಲ್ಲಿರಲಿ

ಕೊವಿಡ್​ ಚೇತರಿಕೆಯ ಬಳಿಕ ಮಲಬದ್ಧತೆ, ಹಸಿವಿನ ಕೊರತೆ ಅಥವಾ ಹಸಿವು ಹೆಚ್ಚು, ಹೊಟ್ಟೆ ಉಬ್ಬುವುದು, ಕಿಬ್ಬೊಟ್ಟೆ ನೋವು, ಅತಿಸಾರ, ವಾಂತಿ, ಕರುಳಿನ ಉರಿಯೂತ ಸಮಸ್ಯೆಗಳು ಕಂಡು ಬರಬಹುದು.

ಕೊವಿಡ್​ ಲಕ್ಷಣಗಳಿಂದ ಹೊರಬಂದರೂ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತಿದೆಯೇ? ಈ ವಿಷಯಗಳು ಗಮನದಲ್ಲಿರಲಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jun 18, 2021 | 6:44 AM

ಕೊವಿಡ್​ ಸೋಂಕು ಉಸಿರಾಟದ ಮೇಲೆ ಪರಿಣಾಮ ಬೀರುವುದಲ್ಲದೇ ದೇಹದ ಇತರ ಅಂಗಗಳ ಮೇಲೂ ಪರಿಣಾಮ ಬೀರುತ್ತದೆ ಎಂಬುದು ತಿಳಿದು ಬಂದಿದೆ. ಅದರಲ್ಲಿಯೂ ಮುಖ್ಯವಾಗಿ ಜೀರ್ಣಾಂಗ ವ್ಯವಸ್ಥೆಯ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕೊವಿಡ್​ನಿಂದ ಚೇತರಿಸಿಕೊಂಡ ನಂತರವೂ ಕೂಡಾ ನಿಮ್ಮ ಆರೋಗ್ಯದಲ್ಲಿ ಏರು-ಪೇರು ಉಂಟಾಗುತ್ತಿದೆ. ಅದರಲ್ಲಿಯೂ ಹೆಚ್ಚಾಗಿ ಜೀರ್ಣಕ್ರಿಯೆಯ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ ಅಂದಾದರೆ ಈ ಕುರಿತಂತೆ ನೀವು ಹೆಚ್ಚು ಗಮನವಹಿಸಲೇ ಬೇಕು.

ಮನುಷ್ಯನ ದೇಹದಲ್ಲಿ ಜೀರ್ಣಕ್ರಿಯೆ ಮುಖ್ಯವಾದುದು. ತಿಂದ ಪ್ರತಿಯೊಂದು ಆಹಾರವೂ ಕೂಡಾ ಜೀರ್ಣವಾಗಬೇಕು. ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯ ನಿರ್ವಹಿಸದಿದ್ದಲ್ಲಿ ಇತರ ಸಮಸ್ಯೆಗಳು ಕಾಡುತ್ತದೆ. ಹೀಗಿರುವಾಗ ಮುಖ್ಯವಾಗಿ ಗಮನಹರಿಸಬೇಕಾದ ಒಂದಿಷ್ಟು ವಿಷಯಗಳ ಕುರಿತಾಗಿ ತಿಳಿಯೋಣ. ಕೊವಿಡ್​ ಚೇತರಿಕೆಯ ಬಳಿಕ ಮಲಬದ್ಧತೆ, ಹಸಿವಿನ ಕೊರತೆ ಅಥವಾ ಹಸಿವು ಹೆಚ್ಚು, ಹೊಟ್ಟೆ ಉಬ್ಬುವುದು, ಕಿಬ್ಬೊಟ್ಟೆ ನೋವು, ಅತಿಸಾರ, ವಾಂತಿ, ಕರುಳಿನ ಉರಿಯೂತ ಸಮಸ್ಯೆಗಳು ಕಂಡು ಬರಬಹುದು. ಇದು ದೇಹದಲ್ಲಿ ಜೀರ್ಣಕ್ರಿಯೆ ಸರಿಯಾಗಿ ಆಗದಿರುವುದರಿಂದ ಕಂಡು ಬರುವ ಸಮಸ್ಯೆಗಳಾಗಿವೆ.

ಆಹಾರ ಪದ್ಧತಿ ಹೇಗಿರಬೇಕು? *ನಿಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಿ *ಅತಿಯಾಗಿ ತಿನ್ನುವುದನ್ನು ಬಿಟ್ಟುಬಿಡಿ *ಕ್ರಿಯಾಶೀಲರಾಗಿರಿ *ನಿಯಮಿತವಾಗಿ ವ್ಯಾಯಾಮ ಮಾಡಿ *ಫೈಬರ್​ ಸಂಯುಕ್ತಗಳಾಗಿರುವ ಪ್ರಿಬಯಾಟಿಕ್​ ಆಹಾರವನ್ನು ಸೇವಿಸಿ *ಪೌಷ್ಟಿಕಾಂಶಯುಕ್ತ ಹಣ್ಣುಗಳು- ತರಕಾರಿಗಳನ್ನು ಸೇವಿಸಿ *ಪ್ರತಿದಿನ 2-3 ಲೀಟರ್​ ನೀರು ಕುಡಿಯಿರಿ *ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಆಹಾರ ಪದಾರ್ಥವನ್ನು ಸೇವಿಸಿ *ಹಾಲು, ಸಾಲ್​, ಬೇಳೆಕಾಳುಗಳು, ದ್ವಿದಳ ಧಾನ್ಯಗಳು, ಸೋಯಾದಂತಹ ಪೌಷ್ಟಿಕ ಆಹಾರ ಸೇವಿಸಿ *ಮಾಂಸಾಹಾರಿಗಳಾಗಿದ್ದರೆ ಕೋಳಿ, ಮೀನು, ಮೊಟ್ಟೆಯನ್ನು ಸೇವಿಸಿ *ಮಧುಮೇಹ, ಅಧಿಕ ರಕ್ತದೊತ್ತಡದಂತಹ ಸಮಸ್ಯೆಗೆ ಕಾರಣವಾಗುವ ಉಪ್ಪು ಮತ್ತು ಸಕ್ಕರೆಯ ಸೇವನೆಯ ಕುರಿತಾಗಿ ಜಾಗರೂಕರಾಗಿರಿ

ಇದನ್ನೂ ಓದಿ:

Health Tips: ದಾಳಿಂಬೆ ಸಿಪ್ಪೆಯಲ್ಲಿದೆ ನಿಮಗೆ ಗೊತ್ತಿಲ್ಲದ ಪ್ರಯೋಜನಗಳು

Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..