AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಕ್ಷಣಗಳಿಂದ ಹೊರಬಂದರೂ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತಿದೆಯೇ? ಈ ವಿಷಯಗಳು ಗಮನದಲ್ಲಿರಲಿ

ಕೊವಿಡ್​ ಚೇತರಿಕೆಯ ಬಳಿಕ ಮಲಬದ್ಧತೆ, ಹಸಿವಿನ ಕೊರತೆ ಅಥವಾ ಹಸಿವು ಹೆಚ್ಚು, ಹೊಟ್ಟೆ ಉಬ್ಬುವುದು, ಕಿಬ್ಬೊಟ್ಟೆ ನೋವು, ಅತಿಸಾರ, ವಾಂತಿ, ಕರುಳಿನ ಉರಿಯೂತ ಸಮಸ್ಯೆಗಳು ಕಂಡು ಬರಬಹುದು.

ಕೊವಿಡ್​ ಲಕ್ಷಣಗಳಿಂದ ಹೊರಬಂದರೂ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತಿದೆಯೇ? ಈ ವಿಷಯಗಳು ಗಮನದಲ್ಲಿರಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 18, 2021 | 6:44 AM

Share

ಕೊವಿಡ್​ ಸೋಂಕು ಉಸಿರಾಟದ ಮೇಲೆ ಪರಿಣಾಮ ಬೀರುವುದಲ್ಲದೇ ದೇಹದ ಇತರ ಅಂಗಗಳ ಮೇಲೂ ಪರಿಣಾಮ ಬೀರುತ್ತದೆ ಎಂಬುದು ತಿಳಿದು ಬಂದಿದೆ. ಅದರಲ್ಲಿಯೂ ಮುಖ್ಯವಾಗಿ ಜೀರ್ಣಾಂಗ ವ್ಯವಸ್ಥೆಯ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕೊವಿಡ್​ನಿಂದ ಚೇತರಿಸಿಕೊಂಡ ನಂತರವೂ ಕೂಡಾ ನಿಮ್ಮ ಆರೋಗ್ಯದಲ್ಲಿ ಏರು-ಪೇರು ಉಂಟಾಗುತ್ತಿದೆ. ಅದರಲ್ಲಿಯೂ ಹೆಚ್ಚಾಗಿ ಜೀರ್ಣಕ್ರಿಯೆಯ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ ಅಂದಾದರೆ ಈ ಕುರಿತಂತೆ ನೀವು ಹೆಚ್ಚು ಗಮನವಹಿಸಲೇ ಬೇಕು.

ಮನುಷ್ಯನ ದೇಹದಲ್ಲಿ ಜೀರ್ಣಕ್ರಿಯೆ ಮುಖ್ಯವಾದುದು. ತಿಂದ ಪ್ರತಿಯೊಂದು ಆಹಾರವೂ ಕೂಡಾ ಜೀರ್ಣವಾಗಬೇಕು. ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯ ನಿರ್ವಹಿಸದಿದ್ದಲ್ಲಿ ಇತರ ಸಮಸ್ಯೆಗಳು ಕಾಡುತ್ತದೆ. ಹೀಗಿರುವಾಗ ಮುಖ್ಯವಾಗಿ ಗಮನಹರಿಸಬೇಕಾದ ಒಂದಿಷ್ಟು ವಿಷಯಗಳ ಕುರಿತಾಗಿ ತಿಳಿಯೋಣ. ಕೊವಿಡ್​ ಚೇತರಿಕೆಯ ಬಳಿಕ ಮಲಬದ್ಧತೆ, ಹಸಿವಿನ ಕೊರತೆ ಅಥವಾ ಹಸಿವು ಹೆಚ್ಚು, ಹೊಟ್ಟೆ ಉಬ್ಬುವುದು, ಕಿಬ್ಬೊಟ್ಟೆ ನೋವು, ಅತಿಸಾರ, ವಾಂತಿ, ಕರುಳಿನ ಉರಿಯೂತ ಸಮಸ್ಯೆಗಳು ಕಂಡು ಬರಬಹುದು. ಇದು ದೇಹದಲ್ಲಿ ಜೀರ್ಣಕ್ರಿಯೆ ಸರಿಯಾಗಿ ಆಗದಿರುವುದರಿಂದ ಕಂಡು ಬರುವ ಸಮಸ್ಯೆಗಳಾಗಿವೆ.

ಆಹಾರ ಪದ್ಧತಿ ಹೇಗಿರಬೇಕು? *ನಿಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಿ *ಅತಿಯಾಗಿ ತಿನ್ನುವುದನ್ನು ಬಿಟ್ಟುಬಿಡಿ *ಕ್ರಿಯಾಶೀಲರಾಗಿರಿ *ನಿಯಮಿತವಾಗಿ ವ್ಯಾಯಾಮ ಮಾಡಿ *ಫೈಬರ್​ ಸಂಯುಕ್ತಗಳಾಗಿರುವ ಪ್ರಿಬಯಾಟಿಕ್​ ಆಹಾರವನ್ನು ಸೇವಿಸಿ *ಪೌಷ್ಟಿಕಾಂಶಯುಕ್ತ ಹಣ್ಣುಗಳು- ತರಕಾರಿಗಳನ್ನು ಸೇವಿಸಿ *ಪ್ರತಿದಿನ 2-3 ಲೀಟರ್​ ನೀರು ಕುಡಿಯಿರಿ *ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಆಹಾರ ಪದಾರ್ಥವನ್ನು ಸೇವಿಸಿ *ಹಾಲು, ಸಾಲ್​, ಬೇಳೆಕಾಳುಗಳು, ದ್ವಿದಳ ಧಾನ್ಯಗಳು, ಸೋಯಾದಂತಹ ಪೌಷ್ಟಿಕ ಆಹಾರ ಸೇವಿಸಿ *ಮಾಂಸಾಹಾರಿಗಳಾಗಿದ್ದರೆ ಕೋಳಿ, ಮೀನು, ಮೊಟ್ಟೆಯನ್ನು ಸೇವಿಸಿ *ಮಧುಮೇಹ, ಅಧಿಕ ರಕ್ತದೊತ್ತಡದಂತಹ ಸಮಸ್ಯೆಗೆ ಕಾರಣವಾಗುವ ಉಪ್ಪು ಮತ್ತು ಸಕ್ಕರೆಯ ಸೇವನೆಯ ಕುರಿತಾಗಿ ಜಾಗರೂಕರಾಗಿರಿ

ಇದನ್ನೂ ಓದಿ:

Health Tips: ದಾಳಿಂಬೆ ಸಿಪ್ಪೆಯಲ್ಲಿದೆ ನಿಮಗೆ ಗೊತ್ತಿಲ್ಲದ ಪ್ರಯೋಜನಗಳು

Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ