AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಕ್ಷಣಗಳಿಂದ ಹೊರಬಂದರೂ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತಿದೆಯೇ? ಈ ವಿಷಯಗಳು ಗಮನದಲ್ಲಿರಲಿ

ಕೊವಿಡ್​ ಚೇತರಿಕೆಯ ಬಳಿಕ ಮಲಬದ್ಧತೆ, ಹಸಿವಿನ ಕೊರತೆ ಅಥವಾ ಹಸಿವು ಹೆಚ್ಚು, ಹೊಟ್ಟೆ ಉಬ್ಬುವುದು, ಕಿಬ್ಬೊಟ್ಟೆ ನೋವು, ಅತಿಸಾರ, ವಾಂತಿ, ಕರುಳಿನ ಉರಿಯೂತ ಸಮಸ್ಯೆಗಳು ಕಂಡು ಬರಬಹುದು.

ಕೊವಿಡ್​ ಲಕ್ಷಣಗಳಿಂದ ಹೊರಬಂದರೂ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತಿದೆಯೇ? ಈ ವಿಷಯಗಳು ಗಮನದಲ್ಲಿರಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 18, 2021 | 6:44 AM

Share

ಕೊವಿಡ್​ ಸೋಂಕು ಉಸಿರಾಟದ ಮೇಲೆ ಪರಿಣಾಮ ಬೀರುವುದಲ್ಲದೇ ದೇಹದ ಇತರ ಅಂಗಗಳ ಮೇಲೂ ಪರಿಣಾಮ ಬೀರುತ್ತದೆ ಎಂಬುದು ತಿಳಿದು ಬಂದಿದೆ. ಅದರಲ್ಲಿಯೂ ಮುಖ್ಯವಾಗಿ ಜೀರ್ಣಾಂಗ ವ್ಯವಸ್ಥೆಯ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕೊವಿಡ್​ನಿಂದ ಚೇತರಿಸಿಕೊಂಡ ನಂತರವೂ ಕೂಡಾ ನಿಮ್ಮ ಆರೋಗ್ಯದಲ್ಲಿ ಏರು-ಪೇರು ಉಂಟಾಗುತ್ತಿದೆ. ಅದರಲ್ಲಿಯೂ ಹೆಚ್ಚಾಗಿ ಜೀರ್ಣಕ್ರಿಯೆಯ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ ಅಂದಾದರೆ ಈ ಕುರಿತಂತೆ ನೀವು ಹೆಚ್ಚು ಗಮನವಹಿಸಲೇ ಬೇಕು.

ಮನುಷ್ಯನ ದೇಹದಲ್ಲಿ ಜೀರ್ಣಕ್ರಿಯೆ ಮುಖ್ಯವಾದುದು. ತಿಂದ ಪ್ರತಿಯೊಂದು ಆಹಾರವೂ ಕೂಡಾ ಜೀರ್ಣವಾಗಬೇಕು. ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯ ನಿರ್ವಹಿಸದಿದ್ದಲ್ಲಿ ಇತರ ಸಮಸ್ಯೆಗಳು ಕಾಡುತ್ತದೆ. ಹೀಗಿರುವಾಗ ಮುಖ್ಯವಾಗಿ ಗಮನಹರಿಸಬೇಕಾದ ಒಂದಿಷ್ಟು ವಿಷಯಗಳ ಕುರಿತಾಗಿ ತಿಳಿಯೋಣ. ಕೊವಿಡ್​ ಚೇತರಿಕೆಯ ಬಳಿಕ ಮಲಬದ್ಧತೆ, ಹಸಿವಿನ ಕೊರತೆ ಅಥವಾ ಹಸಿವು ಹೆಚ್ಚು, ಹೊಟ್ಟೆ ಉಬ್ಬುವುದು, ಕಿಬ್ಬೊಟ್ಟೆ ನೋವು, ಅತಿಸಾರ, ವಾಂತಿ, ಕರುಳಿನ ಉರಿಯೂತ ಸಮಸ್ಯೆಗಳು ಕಂಡು ಬರಬಹುದು. ಇದು ದೇಹದಲ್ಲಿ ಜೀರ್ಣಕ್ರಿಯೆ ಸರಿಯಾಗಿ ಆಗದಿರುವುದರಿಂದ ಕಂಡು ಬರುವ ಸಮಸ್ಯೆಗಳಾಗಿವೆ.

ಆಹಾರ ಪದ್ಧತಿ ಹೇಗಿರಬೇಕು? *ನಿಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಿ *ಅತಿಯಾಗಿ ತಿನ್ನುವುದನ್ನು ಬಿಟ್ಟುಬಿಡಿ *ಕ್ರಿಯಾಶೀಲರಾಗಿರಿ *ನಿಯಮಿತವಾಗಿ ವ್ಯಾಯಾಮ ಮಾಡಿ *ಫೈಬರ್​ ಸಂಯುಕ್ತಗಳಾಗಿರುವ ಪ್ರಿಬಯಾಟಿಕ್​ ಆಹಾರವನ್ನು ಸೇವಿಸಿ *ಪೌಷ್ಟಿಕಾಂಶಯುಕ್ತ ಹಣ್ಣುಗಳು- ತರಕಾರಿಗಳನ್ನು ಸೇವಿಸಿ *ಪ್ರತಿದಿನ 2-3 ಲೀಟರ್​ ನೀರು ಕುಡಿಯಿರಿ *ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಆಹಾರ ಪದಾರ್ಥವನ್ನು ಸೇವಿಸಿ *ಹಾಲು, ಸಾಲ್​, ಬೇಳೆಕಾಳುಗಳು, ದ್ವಿದಳ ಧಾನ್ಯಗಳು, ಸೋಯಾದಂತಹ ಪೌಷ್ಟಿಕ ಆಹಾರ ಸೇವಿಸಿ *ಮಾಂಸಾಹಾರಿಗಳಾಗಿದ್ದರೆ ಕೋಳಿ, ಮೀನು, ಮೊಟ್ಟೆಯನ್ನು ಸೇವಿಸಿ *ಮಧುಮೇಹ, ಅಧಿಕ ರಕ್ತದೊತ್ತಡದಂತಹ ಸಮಸ್ಯೆಗೆ ಕಾರಣವಾಗುವ ಉಪ್ಪು ಮತ್ತು ಸಕ್ಕರೆಯ ಸೇವನೆಯ ಕುರಿತಾಗಿ ಜಾಗರೂಕರಾಗಿರಿ

ಇದನ್ನೂ ಓದಿ:

Health Tips: ದಾಳಿಂಬೆ ಸಿಪ್ಪೆಯಲ್ಲಿದೆ ನಿಮಗೆ ಗೊತ್ತಿಲ್ಲದ ಪ್ರಯೋಜನಗಳು

Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ