AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗಲಕಾಯಿ: ರುಚಿ ಕಹಿಯಾಗಿರಬಹುದು; ಚಹ ಮಾಡಿ ಸವಿದರೆ ಆರೋಗ್ಯ ಪ್ರಯೋಜನಗಳಿವೆ

ಹಾಗಲಕಾಯಿಯಿಂದ ಚಹವನ್ನೂ ಸಹ ಮಾಡಿ ಸವಿಯಬಹುದು. ಕುಡಿಯಲು ಕೊಂಚ ಹಕಿ ಅನುಭವವಾಗಬಹುದು. ಆದರೆ ಇದರಲ್ಲಿನ ಔಷಧೀಯ ಗುಣಗಳಿಂದ ವೈರಸ್​ಗಳನ್ನು ನಾಶ ಪಡಿಸಲು ಸಹಾಯಕವಾಗುತ್ತದೆ.

ಹಾಗಲಕಾಯಿ: ರುಚಿ ಕಹಿಯಾಗಿರಬಹುದು; ಚಹ ಮಾಡಿ ಸವಿದರೆ ಆರೋಗ್ಯ ಪ್ರಯೋಜನಗಳಿವೆ
ಹಾಗಲಕಾಯಿ ಚಹ
TV9 Web
| Updated By: shruti hegde|

Updated on: Jul 21, 2021 | 7:52 AM

Share

ಅದೆಷ್ಟೋ ತರಕಾರಿಗಳು ರುಚಿ ಇಲ್ಲವೆಂದು ಸೇವಿಸುವುದೇ ಇಲ್ಲ. ಆದರೆ ಅವುಗಳಲ್ಲಿರುವ ಔಷಧೀಯ ಗುಣಗಳಿಂದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಹೆಚ್ಚು ಜನರು ಇಷ್ಟ ಪಡದೇ ಇರುವ ತರಕಾರಿಗಳಲ್ಲಿ ಹಾಗಲಕಾಯಿಯೂ ಒಂದು. ಹೆಚ್ಚು ಕಹಿಯಾಗಿರುತ್ತದೆ ಎಂಬ ಕಾರಣಕ್ಕೆ ಸೇವಿಸುವುದನ್ನು ತಪ್ಪಿಸುತ್ತಾರೆ. ಕಹಿಯಾಗಿದ್ದರೂ ಕೂಡಾ ಆರೋಗ್ಯ ಪ್ರಯೋಜನಗಳು ತುಂಬಾ ಇವೆ. ತಿಂಗಳಿಗೆ ಒಮ್ಮೆಯಾದರೂ ಹಾಗಲಕಾಯಿಯನ್ನು ತಿನ್ನುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ಹಾಗಲಕಾಯಿಯಿಂದ ಚಹವನ್ನೂ ಸಹ ಮಾಡಿ ಸವಿಯಬಹುದು. ಕುಡಿಯಲು ಕೊಂಚ ಕಹಿ ಅನುಭವವಾಗಬಹುದು. ಆದರೆ ಇದರಲ್ಲಿನ ಔಷಧೀಯ ಗುಣಗಳಿಂದ ವೈರಸ್​ಗಳನ್ನು ನಾಶ ಪಡಿಸಲು ಸಹಾಯಕವಾಗುತ್ತದೆ. ಜತೆಗೆ ಸಣ್ಣ ಪುಟ್ಟ ಶೀತ, ಜ್ವರದಂತಹ ಲಕ್ಷಣಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹಾಗಾದರೆ ಹಾಗಲಕಾಯಿ ಚಹ ಮಾಡುವ ವಿಧಾನ ಹೇಗೆ? ಎಂಬುದನ್ನು ತಿಳಿಯಿರಿ.

*ಕ್ಯಾನ್ಸರ್​ ಕೋಶಗಳ ಬೆಳವಣಿಗೆಯನ್ನು ತಡೆಯಲು ಹಾಗಲಕಾಯಿ ಚಹ ಸಹಾಯ ಮಾಡುತ್ತದೆ

*ದೇಹದಿಂದ ಬೇಡದ ತ್ಯಾಜ್ಯಗಳನ್ನು ತೆಗೆದು ಹಾಕಲು ಸಹಾಯಕವಾಗಿದೆ

*ಹಾಗಲಕಾಯಿಯಲ್ಲಿ ಆಂಟಿ ಆಕ್ಸಿಡೆಂಟ್​ ಸಮೃದ್ಧವಾಗಿರುವುರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯಕವಾಗಿದೆ

*ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಹಾಗಲಕಾಯಿ ಒಳ್ಳೆಯ ಔಷಧ. ಹಾಗಲಕಾಯಿ ಚಹ ಮಾಡಿ ಸವಿಯುವದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ

*ರಕ್ತದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಜತೆಗೆ ಕೆಟ್ಟ ಕೊಲೆಸ್ಟ್ರಾಲ್​ಅನ್ನು ನಾಶ ಪಡಿಸಲು ಹಾಗಲಕಾಯಿ ಚಹ ಸಹಾಯಕವಾಗಿದೆ

ಹಾಗಲಕಾಯಿ ಚಹಾ ತಯಾರಿಸುವ ವಿಧಾನ ಹಾಗಲಕಾಯಿಯನ್ನು ತೆಗೆದುಕೊಂಡು ಸ್ವಚ್ಛವಾಗಿ ತೊಳೆಯಿರಿ. ಸಣ್ಣ ತುಂಡುಗಳನ್ನಾಗಿ ಕತ್ತರಿಸಿ ಬಿಸಿಲಿನಲ್ಲಿ ಒಣಗಿಸಿ. ಒಂದು ಪಾತ್ರೆಯಲ್ಲಿ ನೀರನ್ನುತೆಗೆದುಕೊಂಡು ಒಣಗಿಸಿಟ್ಟ ಹಾಗಲಾಕಾಯಿ ಚೂರನ್ನು ಹಾಗಿ ಚೆನ್ನಾಗಿ ಕುದಿಸಿ. 10-15 ನಿಮಿಷಗಳ ಕಾಲ ಕುದಿಸಿದ ಬಳಿಕ ಜೇನುತುಪ್ಪ ಮತ್ತು ನಿಂಬೆ ರಸವನ್ನು ಸೇರಿಸಿ ಕುಡಿಯಿರಿ. ವಾರಕ್ಕೊಮ್ಮೆಯಾದರೂ ಈ ಚಹವನ್ನು ಸೇವಿಸುವ ಮೂಲಕ ನಿಮ್ಮ ಆರೋಗ್ಯ ಸುಧಾರಣೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ:

ವಾರಾಂತ್ಯದ ತರಕಾರಿ ದರಗಳ ವಿವರ ಬಿಡುಗಡೆ ಮಾಡಿದ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ

ಮನೆ ಮೇಲೆ ಬಗೆಬಗೆ ತರಕಾರಿ, ನಗುತಿವೆ ಹತ್ತಾರು ಬಗೆಯ ಸೊಪ್ಪು, ಹೂ ಗಿಡಗಳು; ತಾರಸಿ ಕೃಷಿಯ ಯಶೋಗಾಥೆಯಿದು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ