AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳು ಮೆಣಸಿನ ಚಹಾ ಸವಿಯಲು ರುಚಿ ಜತೆಗೆ ಆರೋಗ್ಯಕ್ಕೂ ಉತ್ತಮ

Black Pepper Benefits: ಸಾಮಾನ್ಯವಾಗಿ ಹಳ್ಳಿಗಳಲ್ಲಿ ಕಾಳುಮೆಣಸಿನೊಂದಿಗೆ ಚಹಾ ತಯಾರಿಸಿ ಸೇವಿಸುತ್ತಾರೆ. ನೆಗಡಿ, ಜ್ವರದಂತಹ ಖಾಯಿಲೆಗೆ ಪರಿಹಾರವಾಗಿ ಇದು ಕೆಲಸ ಮಾಡುತ್ತದೆ.

ಕಾಳು ಮೆಣಸಿನ ಚಹಾ ಸವಿಯಲು ರುಚಿ ಜತೆಗೆ ಆರೋಗ್ಯಕ್ಕೂ ಉತ್ತಮ
ಕಾಳು ಮೆಣಸು
TV9 Web
| Edited By: |

Updated on: Jun 24, 2021 | 7:00 AM

Share

ಅಡುಗೆಗೆ, ಕೆಲವರು ಮೆಣಸಿನಕಾಯಿ ಬದಲಾಗಿ ಕಾಳು ಮೆಣಸನ್ನು ಬಳಸುತ್ತಾರೆ. ಮಲೆನಾಡಿನಲ್ಲಿ ಕಾಳುಮೆಣಸಿನ ಬೆಳೆಗೆ ಅತಿಯಾದ ಬೇಡಿಕೆ ಇದೆ. ಅನೇಕ ಖಾಯಿಲೆಗಳಿಗೆ ಮದ್ದು ಜತೆಗೆ ಮಸಾಲೆ ಪದಾರ್ಥಗಳಲ್ಲಿ ಹೆಚ್ಚು ಬಳಸಲಾಗುತ್ತದೆ. ಅದೇ ರೀತಿ ಚಹಾದಲ್ಲಿ ಕಾಳು ಮೆಣಸು ಬೆರೆಸಿ ಸೇವಿಸುವುದರಿಂದ ಬಹಳ ರುಚಿ ಜತೆಗೆ ಆರೋಗ್ಯದ ಸಮಸ್ಯೆಗಳಿಂದ ದೂರವಿರಬಹುದು.

ಸಾಮಾನ್ಯವಾಗಿ ಹಳ್ಳಿಗಳಲ್ಲಿ ಕಾಳುಮೆಣಸಿನೊಂದಿಗೆ ಚಹಾ ತಯಾರಿಸಿ ಸೇವಿಸುತ್ತಾರೆ. ನೆಗಡಿ, ಜ್ವರದಂತಹ ಖಾಯಿಲೆಗೆ ಪರಿಹಾರವಾಗಿ ಇದು ಕೆಲಸ ಮಾಡುತ್ತದೆ. ಮಳೆಗಾಲದ ಸಮಯದಲ್ಲಿ ಈ ಚಹಾವನ್ನು ಸೇವಿಸುವುದು ಹೆಚ್ಚು. ಗಂಟು ನೋವು, ಕೆಮ್ಮಿಗೆ ಪರಿಹಾರವಾಗಿ ಕರಿಮೆಣಸಿನ ಕಪ್ಪು ಚಹಾವನ್ನು ಸೇವಿಸುತ್ತಾರೆ.

ಸೈನಸ್​ ಸಮಸ್ಯೆಯಿಂದ ಬಳಲುತ್ತಿರುವವರು ಕಾಳು ಮೆಣಸಿನ ಚಹಾ ಸೇವನೆಯಿಂದ ಪರಿಹಾರ ಕಂಡುಕೊಳ್ಳಬಹುದು. ಜತೆಗೆ ಶೀತವಾಗಿ ಮೂಗು ಕಟ್ಟುವಿಕೆಯ ಸಮಸ್ಯೆಯಿಂದ ಪರಿಹಾರ ಸಿಗುತ್ತದೆ. ಕರಿಮೆಣಸಿನಲ್ಲಿ ಕ್ಯಾನ್ಸರ್​ ವಿರೋಧಿ ಗುಣಗಳಿರುತ್ತವೆ ಎಂಬುದು ಅಧ್ಯಯನದ ಮೂಲಕ ತಿಳಿದು ಬಂದಿದೆ. ಹಾಗಾಗಿ ಕರಿಮೆಣಸಿನೊಂದಿಗೆ ಚಹಾ ತಯಾರಿಸಿ ಸೇವಿಸುವುದು ಆರೋಗ್ಯಕ್ಕೆ ಉತ್ತಮವಾಗಿದೆ.

ಅತಿಯಾದ ಸೇವನೆಯು ಆರೋಗ್ಯಕ್ಕೆ ಹಾನಿತರಬಹುದು. ಏಕೆಂದರೆ ಕರಿಮೆಣಸು ಹೆಚ್ಚು ಖಾರವಾಗಿರುತ್ತದೆ. ಅತಿಯಾಗಿ ಸೇವನೆ ಮಾಡುವುದರಿಂದ ಅಥವಾ ಚಹಾದಲ್ಲಿ ಕರಿಮೆಣಸಿನ ಪುಡಿಯನ್ನು ಹೆಚ್ಚು ಬಳಸುವುದರಿಂದ ಎದೆ ಉರಿ ಜತೆಗೆ ಹೊಟ್ಟೆ ಉರಿಯಂತಹ ಸಮಸ್ಯೆಗಳು ಕಂಡು ಬರುತ್ತವೆ. ಹಾಗಿದ್ದಾಗ ಯಾವುದೇ ಆಹಾರನ್ನು  ನಿಯಮಿತವಾಗಿ ಸೇವಿಸುವ ಅಭ್ಯಾಸ ರೂಢಿಯಲ್ಲಿರಲಿ. ಆ ಮೂಲಕ ನಿಮ್ಮ ಆರೋಗ್ಯದ ಆರೈಕೆ ಮಾಡಿಕೊಳ್ಳಿ.

ಇದನ್ನೂ ಓದಿ:

Health Tips: ಮಳೆಗಾಲದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಈ 6 ಕಷಾಯಗಳನ್ನು ಮಾಡಿ ಕುಡಿಯಿರಿ

Health Tips: ಕೊವಿಡ್ ಸಮಯದಲ್ಲಿ ನೀವು ಪಾಲಿಸಲೇಬೇಕಾದ ಐದು ಆಹಾರ ಪದ್ಧತಿಗಳು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ