AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ತೆಂಗಿನ ಕಾಯಿಯ ಪ್ರಯೋಜನಗಳನ್ನು ತಿಳಿದರೆ ಒಂದು ಚೂರನ್ನೂ ಬಿಸಾಡಲು ಮನಸ್ಸೇ ಬರುವುದಿಲ್ಲ!

Coconut Benefits: ಒಣ ಚರ್ಮ ಮತ್ತು ಕೂದಲು ಉದುರುವುದು, ಕೂದಲ ತುದಿ ಬಿರುಕು ಬಿಡುವಂತಹ ಸಮಸ್ಯೆಗೆ ಪರಿಹಾರವನ್ನು ನೀಡುತ್ತದೆ. ಚರ್ಮದಲ್ಲಿನ ತೇವಾಂಶ ಹೆಚ್ಚಿಸಲು ಸಹಾಯ ಮಾಡುತ್ತದೆ. ಚರ್ಮದ ಸೌಂದರ್ಯವನ್ನು ಸುಧಾರಿಸುತ್ತದೆ.

Health Tips: ತೆಂಗಿನ ಕಾಯಿಯ ಪ್ರಯೋಜನಗಳನ್ನು ತಿಳಿದರೆ ಒಂದು ಚೂರನ್ನೂ ಬಿಸಾಡಲು ಮನಸ್ಸೇ ಬರುವುದಿಲ್ಲ!
ತೆಂಗಿನ ಕಾಯಿ
TV9 Web
| Edited By: |

Updated on: Jun 21, 2021 | 7:38 AM

Share

ಎಳನೀರು ಅಥವಾ ತೆಂಗಿನ ಕಾಯಿಯ ನೀರು ಕುಡಿದ ನಂತರದಲ್ಲಿ ಒಳಗಿನ ತಿರುಳನ್ನು ಕೆಲವರು ಇಷ್ಟಪಡುವುದಿಲ್ಲ. ದೇವಸ್ಥಾನಗಳಲ್ಲಿ ತೆಂಗಿನ ಕಾಯಿಯನ್ನು ಒಡೆಸುತ್ತೇವೆ. ನಂತರ ಅದರಲ್ಲಿ ಕಾಯಿ ಚೂರನ್ನು ತಿನ್ನಲು ನಿರ್ಲಕ್ಷ್ಯ ತೋರುತ್ತೇವೆ. ಆದರೆ ತೆಂಗಿನ ಕಾಯಿಯ ಪ್ರಯೋಜನ ತಿಳಿದರೆ ಒಂದು ಚೂರನ್ನೂ ಸಹ ಬಿಸಾಡಲು ಮನಸ್ಸೇ ಬರುವುದಿಲ್ಲ.

ತೆಂಗಿನ ಕಾಯಿ ತುರಿಯನ್ನು ಅಡುಗೆಯಲ್ಲಿ ಬಳಸುವುದು ಸಾಮಾನ್ಯ. ತೆಂಗಿನ ಕಾಯಿಯ ಹಸಿ ಚೂರನ್ನು ತಿನ್ನುವುದು ಕೆಲವರಿಗೆ ಇಷ್ಟವಾಗುವುದಿಲ್ಲ. ಆದರೆ, ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜಗಳಿದ್ದಾಗ ಮನೆಯಲ್ಲಿಯೇ ಸಿಗುವ ಆಹಾರ ಪದಾರ್ಥಗಳಿಂದ ಪ್ರಯೋಜನ ಪಡೆದುಕೊಳ್ಳಬೇಕು. ಹಾಗಿದ್ದರೆ ತೆಂಗಿನ ಕಾಯಿಯ ತಿರುಳಿನಿಂದ ಎಷ್ಟೆಲ್ಲಾ ಪ್ರಯೋಜನಗಳಿದೆ ಎಂಬುದರ ಮಾಹಿತಿ ಇಲ್ಲಿದೆ.

*ತೆಂಗಿನಕಾಯಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿವೈರಸ್​ ಗುಣಲಕ್ಷಣಗಳನ್ನು ಹೊಂದಿರುತ್ತದೆ. ಜತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥವಾಗಿದೆ. ಗಂಟಲು ನೋವಿಗೆ ತೆಂಗಿನಕಾಯಿ ಚೂರು ಸೇವಿಸುವುದು ಉತ್ತಮ ಪರಿಹಾರವಾಗಿದೆ.

*ಮಾನಸಿಕ ಆರೋಗ್ಯವನ್ನು ಸುಧಾರಿಸಿಕೊಳ್ಳಲು ತೆಂಗಿನಕಾಯಿ ಸೇವನೆ ಉತ್ತಮವಾಗಿದೆ.

*ತೆಂಗಿನಕಾಯಿಯಲ್ಲಿ ನಾರಿನಾಂಶವಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ತೆಂಗಿನ ಕಾಯಿ ಸೇವನೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

*ಒಣ ಚರ್ಮ ಮತ್ತು ಕೂದಲು ಉದುರುವುದು, ಕೂದಲ ತುದಿ ಬಿರುಕು ಬಿಡುವಂತಹ ಸಮಸ್ಯೆಗೆ ಪರಿಹಾರವನ್ನು ನೀಡುತ್ತದೆ. ಚರ್ಮದಲ್ಲಿನ ತೇವಾಂಶ ಹೆಚ್ಚಿಸಲು ಸಹಾಯ ಮಾಡುತ್ತದೆ. ಚರ್ಮದ ಸೌಂದರ್ಯವನ್ನು ಸುಧಾರಿಸುತ್ತದೆ.

*ತೆಂಗಿನಕಾಯಿ ಸೇವನೆಯು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ಕಡಿಮೆ ಮಾಡುತ್ತದೆ. ನಮ್ಮ ದೇಹದಲ್ಲಿನ ಅತಿಯಾದ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Karnataka Lockdown: ನೆಪ ಹೇಳಿದ ತಪ್ಪಿಗೆ ಒಂದು ಗೊನೆ ಬಾಳೆಹಣ್ಣು ತೆಗೆದುಕೊಂಡು ಹೋದ ಚಿಕ್ಕಮಗಳೂರು ವ್ಯಕ್ತಿ

Health Tips: ಕೊರೊನಾ ಸೋಂಕಿನ ಮಧ್ಯೆ ಮತ್ತೆ ನೆನಪಾಯಿತು ಈ ಗಿಡ! ‘ನೆಲನೆಲ್ಲಿ’ ಸಸ್ಯದಲ್ಲಿ ಅಡಗಿದೆ ಔಷಧೀಯ ಗುಣ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ