AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದಾಸವಾಳದ ಗಿಡಮೂಲಿಕೆ ಚಹಾ ಎಂದಾದರೂ ಸೇವಿಸಿದ್ದೀರಾ? ಒಂದು ಸಿಪ್​ ಸವಿದರೂ ಆರೋಗ್ಯಕ್ಕೆ ಪ್ರಯೋಜನಗಳಿವೆ

ದಾಸವಾಳ ಚಹಾ ನಮ್ಮ ದೇಹದಲ್ಲಿ ರಕ್ತದ ಒತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಜತೆಗೆ ದೇಹದ ತೂಕ ನಿಯಂತ್ರಿಸಲು ಇದು ಸಹಾಯಕವಾಗಿದೆ.

Health Tips: ದಾಸವಾಳದ ಗಿಡಮೂಲಿಕೆ ಚಹಾ ಎಂದಾದರೂ ಸೇವಿಸಿದ್ದೀರಾ? ಒಂದು ಸಿಪ್​ ಸವಿದರೂ ಆರೋಗ್ಯಕ್ಕೆ ಪ್ರಯೋಜನಗಳಿವೆ
ದಾಸವಾಳ ಚಹಾ
TV9 Web
| Edited By: |

Updated on: Jun 29, 2021 | 8:15 AM

Share

ಚಹಾದಲ್ಲಿ ಅನೇಕ ವಿಧಗಳಿವೆ. ಹೆಚ್ಚು ರುಚಿ ಮತ್ತು ಸುವಾಸನೆಯೊಂದಿಗೆ ಒಂದೊಂದು ಚಹಾ ಒಬ್ಬೊಬ್ಬರಿಗೆ ಇಷ್ಟವಾಗುತ್ತದೆ. ಮಳೆಗಾಲದ ಈ ದಿನಗಳಲ್ಲಿ ಬಿಸಿ-ಬಿಸಿ ಚಹಾವನ್ನು ಸುರ್​.. ಎಂದು ಸವಿಯುತ್ತಿದ್ದರೆ ಅದರ ಸ್ವಾದವೇ ಬೇರೆ! ಅದರಲ್ಲಿಯೂ ಚಹಾ ಪ್ರಿಯರಂತೂ ಮಳೆಗಾಲದಲ್ಲಿ ಚಹಾ ಕುಡಿಯದೇ ಇರಲು ಸಾಧ್ಯವೇ. ಹಾಗಿದ್ದರೆ ವಿಶೇಷ ಚಹಾ ಎನಿಸಿಕೊಂಡ ದಾಸವಾಳ ಚಹಾದಿಂದ ಆರೋಗ್ಯಕ್ಕಾಗುವ ಪ್ರಯೋಜನಗಳ ಕುರಿತಾಗಿ ತಿಳಿಯೋಣ.

ದಾಸವಾಳದಿಂದಲೂ ಸಹ ಚಹಾ ತಯಾರಿಸುತ್ತಾರೆ. ಕೆಂಪು ಬಣ್ಣದ ದಾಸವಾಳದಿಂದ ಚಹಾ ತಯಾರಿಸುವುದು ಕೊಂಚ ಹುಳಿ ಅಂಶವನ್ನು ನೀಡಿದರೂ ಸಹ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಗಳಿವೆ. ಜೀವನ ಶೈಲಿಯಲ್ಲಿ ಬದಲಾವಣೆ, ಆಹಾರದಲ್ಲಿನ ಕೆಲವು ಬದಲಾವಣೆಯ ಮೂಲಕ ಉಂಟಾಗುವ ರಕ್ತದೊತ್ತಡ, ಹೃದ್ರೋಗ ಸಮಸ್ಯೆಗಳಿಂದ ದೂರವಿರಬಹುದು. ಗಿಡಮೂಲಿಕೆಯ ದಾಸವಾಳ ಚಹಾ ರಕ್ತದೊತ್ತಡವನ್ನು ನಿವಾರಿಸುತ್ತದೆ. ಜತೆಗೆ ಮೂತ್ರಪಿಂಡ ಸಮಸ್ಯೆ, ಪಾರ್ಶ್ವವಾಯು ಸಮಸ್ಯೆಗಳಿಂದ ದೂರವಿರಬಹುದು.

ದಾಸವಾಳ ಚಹಾ ತಯಾರಿಸುವ ವಿಧಾನ *ದಾಸವಾಳದ ಒಣಗಿದ ದಳಗಳು *ನೀರು *ಲಿಂಬು *ದಾಲ್ಚಿನ್ನಿ *ಪುದೀನ ಎಲೆಗಳು

ತಣ್ಣನೆಯ ನೀರಿನಲ್ಲಿ ದಾಸವಾಳದ ಎಲೆಯ ಪುಡಿಗಳನ್ನು 2 ಗಂಟೆಗಳ ಕಾಲ ನೆನೆಸಿಡಿ. ಅದನ್ನು ಒಲೆಯ ಮೇಲಿಟ್ಟು ಚೆನ್ನಾಗಿ ಕುದಿಸಿ. ಸಕ್ಕರೆ ಅಥವಾ ಜೇನುತುಪ್ಪ ಮತ್ತು ಲಿಂಬು ರಸವನ್ನು ಸೇರಿಸಿ. ಜತೆಗೆ ದಾಲ್ಚಿನ್ನಿ ಮತ್ತು ಪುದೀನ ಎಲೆಗಳನ್ನು ಬೆರೆಸಿ ಚೆನ್ನಾಗಿ ಕುದಿಸಿ. ಇದೀಗ ಚಹಾ ರೆಡಿಯಾಗಿದೆ. ಈ ಮೂಲಕ ನೀವು ಚಹಾದ ಸ್ವಾದವನ್ನು ಸವಿಯಬಹುದು.

ದಾಸವಾಳ ಚಹಾದ ಪ್ರಯೋಜನಗಳು *ರಕ್ತನಾಳಗಳನ್ನು ಬಲಪಡಿಸುತ್ತದೆ *ಕೆಟ್ಟ ಕೊಲೆಸ್ಟ್ರಾಲ್​ಗಳನ್ನು ಕರಗಿಸುತ್ತದೆ *ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ *ದೀರ್ಘಕಾಲದ ಆಯಾಸವನ್ನು ನಿವಾರಿಸುತ್ತದೆ *ಮೆದುಳಿನ ಕಾರ್ಯವನ್ನು ಚುರುಕುಗೊಳಿಸುತ್ತದೆ

ದಾಸವಾಳ ಚಹಾ ನಮ್ಮ ದೇಹದಲ್ಲಿ ರಕ್ತದ ಒತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಜತೆಗೆ ದೇಹದ ತೂಕ ನಿಯಂತ್ರಿಸಲು ಇದು ಸಹಾಯಕವಾಗಿದೆ. ಚರ್ಮದ ಕಾಂತಿಯನ್ನೂ ಸಹ ಹೆಚ್ಚಿಸಿಕೊಳ್ಳಬಹುದು. ಇದರಲ್ಲಿನ ಆಂಟಿ ಆಕ್ಸಿಡೆಂಟ್​ ಅಂಶಗಳಿಂದ ಹೃದಯ ಖಾಯಿಲೆ, ಮಧುಮೇಹದಂತಹ ಖಾಯಿಲೆಗಳಿಂದ ದೂರವಿರಬಹುದು. ಹಾಗಾಗಿ ದಾಸವಾಳ ಚಹಾ ಅರೋಗ್ಯಕ್ಕೆ ಒಳ್ಳೆಯದು.

ಇದನ್ನೂ ಓದಿ:

Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಹುಣಸೆ ಬೀಜ: ನೀವು ಮೊಣಕಾಲು ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದೀರಾ?

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!